![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಫ್ಘಾನಿಸ್ತಾನವೀಗ ಮಾರಕರೋಗಗಳ ತಾಣ; ದೇಶದ ಹಲವು ಭಾಗಗಳಲ್ಲಿ ಕೋವಿಡ್,ದಡಾರ,ಅತಿಸಾರ
ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಉಲ್ಲೇಖ
Team Udayavani, Aug 11, 2022, 6:55 AM IST
![ಅಫ್ಘಾನಿಸ್ತಾನವೀಗ ಮಾರಕರೋಗಗಳ ತಾಣ; ದೇಶದ ಹಲವು ಭಾಗಗಳಲ್ಲಿ ಕೋವಿಡ್,ದಡಾರ,ಅತಿಸಾರ](https://www.udayavani.com/wp-content/uploads/2022/08/Afghanistan-620x465.jpg)
ವಾಷಿಂಗ್ಟನ್: ಸದ್ಯ ಉಗ್ರರ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ಹಲವು ರೀತಿಯ ಸಂಕಷ್ಟಗಳಿಗೆ ಒಳಗಾಗುತ್ತಿದೆ. ವಿಶೇಷವಾಗಿ ಅಲ್ಲಿನ ಜನರು ವಿವಿಧ ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ.
ಡೆಂಗ್ಯೂ, ದಡಾರ, ಅತಿಸಾರ, ಕೊರೊನಾ ಸೋಂಕು ಅಲ್ಲಿನ ಜನರನ್ನು ಬಾಧಿಸುತ್ತಿದೆ. ವಿಶೇಷವಾಗಿ ಅತಿಸಾರ ಅಲ್ಲಿನ ಜನರನ್ನು ಹೈರಾಣುಗೊಳಿಸಿದೆ. ಕಾಬೂಲ್, ಪಕ್ತಿಕಾ, ಖೋಸ್ಟ್, ಜವಾಜ್ಜಾನ್, ಘಜ್ನಿ, ಕಂದಹಾರ್, ಜಬುಲ್ ಪ್ರಾಂತ್ಯಗಳಲ್ಲಿ ಅತಿಸಾರ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿಸುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಈ ವಲಯಗಳಲ್ಲಿಯೇ 19,050 ಕೇಸುಗಳು ದೃಢಪಟ್ಟಿವೆ.
ಇದಲ್ಲದೆ ಹೆಚ್ಚಿನ ಪ್ರಾಂತ್ಯಗಳಲ್ಲಿ ದಡಾರದ ಪ್ರಕರಣಗಳೂ ಒಂದು ಬಾರಿ ತಾರಕಕ್ಕೆ ಏರಿ ಕಡಿಮೆಯಾಗಿವೆ. ಇತ್ತೀಚಿನ ವರದಿಗಳ ಪ್ರಕಾರ 64,654 ದಡಾರ ಪ್ರಕರಣಗಳು ಆ ದೇಶದಾದ್ಯಂತ ದೃಢಪಟ್ಟಿವೆ.
ಮತ್ತೊಂದು ಮಾರಕ ರೋಗ ಎಂದು ಪರಿಗಣಿಸಲಾಗಿರುವ ಕಾಂಗೋ ಜ್ವರ ಕೂಡ ಅಫ್ಘಾನಿಸ್ತಾನದ ಕೇಂದ್ರ, ಆಗ್ನೇಯ ಮತ್ತು ದಕ್ಷಿಣ ಭಾಗದ 13 ಪ್ರಾಂತ್ಯಗಳಲ್ಲಿ ದೃಢಪಟ್ಟಿದೆ.
ಹೀಗಾಗಿ, ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನೆರವು ನೀಡುವ ನಿಟ್ಟಿನಲ್ಲಿ ಡಬ್ಲ್ಯೂ ಎಚ್ಒ ತಾಲಿಬಾನ್ ಸರ್ಕಾರಕ್ಕೆ ನೆರವು ನೀಡುವುದಾಗಿ ಹೇಳಿದೆ. ಇತ್ತೀಚೆಗಷ್ಟೇ ಅಲ್ಲಿ ಭೂಕಂಪ ನಡೆದು ಭಾರೀ ಪ್ರಮಾಣದ ಹಾನಿ ಉಂಟಾಗಿತ್ತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.