Watch Video: ಕಾಬೂಲ್- ವಿಮಾನ ಚಕ್ರ ಹಿಡಿದು ನೇತಾಡುತ್ತಿದ್ದ ಇಬ್ಬರು ಕೆಳಕ್ಕೆ ಬಿದ್ದು ಸಾವು
ಕಾಬೂಲ್ ನಿಂದ ಹೊರಡುವ ಕೆಲವು ವಿಮಾನಗಳಲ್ಲಿ ಜನರು ತುಂಬಿಕೊಂಡಿರುವ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.
Team Udayavani, Aug 16, 2021, 3:28 PM IST
ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ತಮ್ಮ ಹಿಡಿತ ಸಾಧಿಸಿದ ಬೆನ್ನಲ್ಲೇ ಜನರು ಭೀತಿಗೊಳಗಾಗಿ ದೇಶದಿಂದ ಪಲಾಯನಗೈಯಲು ವಿಮಾನ ನಿಲ್ದಾಣದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದು, ಏತನ್ಮಧ್ಯೆ ಕಾಬೂಲ್ ನಿಂದ ಹೊರಟಿದ್ದ ವಿಮಾನದ ಚಕ್ರವನ್ನು ಹಿಡಿದು ನೇತಾಡುತ್ತಿದ್ದ ಇಬ್ಬರು ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರ (ಆಗಸ್ಟ್ 16) ನಡೆದಿದೆ.
ಇದನ್ನೂ ಓದಿ:ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆಯಿಂದ ಯುವಕನ ಹತ್ಯೆ: ಆರೋಪಿ ಬಂಧನ
ಟೆಹ್ರಾನ್ ಟೈಮ್ಸ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ, ಕಾಬೂಲ್ ನಿಂದ ಹೊರಟಿದ್ದ ವಿಮಾನದ ಚಕ್ರ ಹಿಡಿದು ಜೋತಾಡುತ್ತಿದ್ದು, ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲಿಯೇ ಇಬ್ಬರೂ ಕೆಳಕ್ಕೆ ಬೀಳುತ್ತಿರುವ ಭಯಾನಕ ದೃಶ್ಯ ಸೆರೆಯಾಗಿದೆ ಎಂದು ವರದಿ ಹೇಳಿದೆ.
ಊಹಿಸಲು ಹಾಗೂ ನಂಬಲು ಸಾಧ್ಯವಿಲ್ಲದ ಸನ್ನಿವೇಶ ಇದಾಗಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಬ್ಬರೂ ವಿಮಾನದಿಂದ ಕೆಳಕ್ಕೆ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ಅಲ್ಲದೇ ಅವರು ಕೆಳಕ್ಕೆ ಬೀಳುತ್ತಿರುವ ದೃಶ್ಯ ಭಯಾನಕ ಮತ್ತು ದೊಡ್ಡ ಶಬ್ದ ಕೇಳಿಬಂದಿರುವುದಾಗಿ ಅಸ್ವಾಕಾ ನ್ಯೂಸ್ ಟ್ವೀಟ್ ಮಾಡಿದೆ.
BREAKING: At least 2 people fall to their death after holding on to a plane as it takes off from Kabul Airport pic.twitter.com/m7XU8lwo5S
— BNO News (@BNONews) August 16, 2021
ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದ ನಂತರ ಸಾವಿರಾರು ಮಂದಿ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ್ದು, ವಿಮಾನ ಏರಲು ಜನರು ನೂಕುನುಗ್ಗಲು, ಗುಂಪುಗೂಡಿದ್ದರು. ಅಲ್ಲದೇ ಈ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ತಾಲಿಬಾನ್ ಉಗ್ರರ ಭೀತಿಯಿಂದಾಗಿ ಸಾವಿರಾರು ಮಂದಿ ಅಫ್ಘಾನ್ ನಿಂದ ಪಲಾಯನ ಮಾಡಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾಬೂಲ್ ನಿಂದ ಹೊರಡುವ ಕೆಲವು ವಿಮಾನಗಳಲ್ಲಿ ಜನರು ತುಂಬಿಕೊಂಡಿರುವ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್