ಶ್ರೀಲಂಕಾ ಸಂಸತ್ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಮಹಿಂದ ರಾಜಪಕ್ಸೆ
Team Udayavani, Aug 7, 2020, 7:59 AM IST
ಕೊಲೊಂಬೊ: ಶ್ರೀಲಂಕಾದ ಪ್ರಭಾವಿ ರಾಜಪಕ್ಷ ಕುಟುಂಬದ ಶ್ರೀಲಂಕಾ ಪೀಪಲ್ಸ್ ಪಾರ್ಟಿ (ಎಸ್ ಎಲ್ ಪಿಪಿ) ಸಂಸತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಪ್ರಧಾನಿ ಮಹಿಂದ ರಾಜಪಕ್ಷೆ ಮತ್ತೊಮ್ಮೆ ಅಧಿಕಾರ ಹಿಡಿದಿದ್ದಾರೆ.
ಕೋವಿಡ್ ವೈರಸ್ ಕಾರಣದಿಂದ ಎರಡು ಬಾರಿ ಮುಂದೂಡಲ್ಪಟ್ಟ ಸಾರ್ವತ್ರಿಕ ಚುನಾವಣೆಯಲ್ಲಿ ಶ್ರೀಲಂಕಾದ ಪ್ರಬಲ ವ್ಯಕ್ತಿ ಮಹಿಂದಾ ರಾಜಪಕ್ಸೆ ಭರ್ಜರಿ ಜಯ ದಾಖಲಿಸಿದ್ದರಿಂದ ರಾಜಕೀಯ ಪುನರಾಗಮನ ಮಾಡಿದ್ದಾರೆ.
ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸತ್ 225 ಸ್ಥಾನಗಳನ್ನು ಹೊಂದಿದ್ದು ರಾಜಪಕ್ಷೆಯವರ SLPP ಪಕ್ಷ 146 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ವಿರೋಧ ಪಕ್ಷವಾಗಿರುವ ಸಜಿತ್ ಪ್ರೇಮದಾಸ ಅವರ ಯುನೈಟೈಡ್ ನ್ಯಾಷನಲ್ ಪಾರ್ಟಿ ಕೇವಲ 53 ಸ್ಥಾನ ಪಡೆದಿದೆ. ತಮಿಳು ಪಕ್ಷಗಳು 16 ಹಾಗೂ ಎಡಪಕ್ಷಗಳ ಮೈತ್ರಿಕೂಟ 10 ಸ್ಥಾನಗಳನ್ನು ಪಡೆದಿವೆ ಎಂದು ಚುನಾವಣಾ ಅಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.
ಶ್ರೀಲಂಕಾದ ದಕ್ಷಿಣ ಭಾಗದಲ್ಲಿ ಎಸ್ ಎಲ್ ಪಿ ಪಿ ಸಂಪೂರ್ಣ ಮೇಲುಗೈ ಸಾಧಿಸಿದ್ದು, 22 ಚುನಾವಣಾ ಜಿಲ್ಲೆಗಳಲ್ಲಿ 4 ಹೊರತುಪಡಿಸಿ ಎಲ್ಲವನ್ನು ಗೆದ್ದಿದೆ. ಸುಮಾರು 1.5 ಕೋಟಿ ಮತದಾರರಲ್ಲಿ ರಾಜಪಕ್ಸೆ ಅವರ ಪಕ್ಷಕ್ಕೆ 60%ರಷ್ಟು ಮತ ಬಂದಿದೆ. ಯುಎಸ್ ಪಿ ಪಕ್ಷ ಶೇ 20 ರಷ್ಟು ಮತಗಳನ್ನು ಪಡೆದಿದೆ.
Thank you, Prime Minister @PresRajapaksa! It was a pleasure to speak to you. Once again, many congratulations. We will work together to further advance all areas of bilateral cooperation and to take our special ties to ever newer heights. https://t.co/123ahoxlMo
— Narendra Modi (@narendramodi) August 6, 2020
ಭಾರತದ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ರಾಜಪಕ್ಸೆ ಅವರಿಗೆ ಅಭಿನಂದನೆ ತಿಳಿಸಿದ್ದು, ದ್ವಿಪಕ್ಷೀಯ ಸಹಕಾರದ ಎಲ್ಲಾ ಕ್ಷೇತ್ರಗಳನ್ನು ಮತ್ತಷ್ಟು ಮುನ್ನಡೆಸಲು ಮತ್ತು ಅವರ ಹೊಸ ಎತ್ತರಕ್ಕೆ ಕೊಂಡೊಯ್ಯಲು ಒಟ್ಟಾಗಿ ಕೆಲಸ ಮಾಡುವಂತೆ ಅಭಿನಂದಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಕೂಡ ಇದು ಆಡಳಿತರೂಢ ಪಕ್ಷಕ್ಕೆ ಲಭಿಸಿದ ಗೆಲುವು ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್