- Friday 06 Dec 2019
ಅಮೆರಿಕದ ಪೌರತ್ವ ನೀತಿಗೆ ತಿದ್ದುಪಡಿ
Team Udayavani, Jul 11, 2019, 5:00 AM IST
ವಾಷಿಂಗ್ಟನ್: ಅಮೆರಿಕದ ಪೌರತ್ವ ನೀತಿಯಲ್ಲಿ ಮಹತ್ವದ ಬದಲಾವಣೆಗೆ ಸಂಸದರು ನಿರ್ಧರಿ ಸಿದ್ದು, ಭಾರತದ ಮಾಹಿತಿ ತಂತ್ರ ಜ್ಞಾನ ವೃತ್ತಿಪರರಿಗೆ ಅನುಕೂಲವಾಗುವ ಸಾಧ್ಯತೆಯಿದೆ. ಒಂದು ದೇಶಕ್ಕೆ ಗರಿಷ್ಠ ಶೇ. 7 ರಷ್ಟು ಮಿತಿಯನ್ನು ಈ ಹಿಂದಿನ ನೀತಿ ವಿಧಿಸಿತ್ತಾದರೂ, ಅದನ್ನು ತೆಗೆದುಹಾಕಲು ಮಸೂದೆಯನ್ನು ಮಂಡಿಸಲಾಗುತ್ತಿದೆ. ಈ ಮಸೂದೆಗೆ 310 ಸಂಸದರ ಬೆಂಬಲವಿದ್ದು, ಸುಲಭವಾಗಿ ಅನುಮೋದನೆ ಪಡೆಯಲಿದೆ.
ಸದ್ಯ ಅಮೆರಿಕದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಭಾರತೀಯರು ದಶಕಗಳಿಂದಲೂ ಕಾಯಂ ಪೌರತ್ವಕ್ಕಾಗಿ ಅರ್ಜಿ ಹಾಕಿ ಕಾಯುತ್ತಿದ್ದಾರೆ. ಎಚ್1 ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿರುವ ಕೆಲವು ಭಾರತೀಯರಂತೂ 70 ವರ್ಷ ಗಳಿಂದಲೂ ಕಾಯಂ ಪೌರತ್ವಕ್ಕೆ ಕಾಯುತ್ತಿದ್ದಾರೆ ಎಂದು ಇತ್ತೀಚಿಗಿನ ಸಮೀಕ್ಷೆಯೊಂದು ವರದಿ ಮಾಡಿತ್ತು. ಭಾರತದಿಂದ ಉನ್ನತ ಕೌಶಲ್ಯ ಹೊಂದಿರುವವರು ಅಮೆರಿಕಕ್ಕೆ ತೆರಳುವುದರಿಂದಾಗಿ, ದೇಶಕ್ಕೆ ಶೇ. 7ರ ಮಿತಿಯನ್ನು ತೆಗೆದುಹಾಕುವುದರಿಂದ ಭಾರತೀಯರಿಗೇ ಹೆಚ್ಚು ಅನುಕೂಲವಾಗಲಿದೆ.
ಈ ಮಸೂದೆಗೆ ಭಾರತೀಯ ಮೂಲದ ಸಂಸದೆ, ಅಮೆರಿಕ ಅಧ್ಯಕ್ಷೀಯ ಹುದ್ದೆಯ ಆಕಾಂಕ್ಷಿ ಕಮಲಾ ಹ್ಯಾರಿಸ್ ಸೇರಿದಂತೆ ಹಲ ವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಸೂದೆಗೆ ಡೆಮಾಕ್ರಾಟ್ ಮತ್ತು ರಿಪಬ್ಲಿಕನ್ ಪಕ್ಷದ ಸದ ಸ್ಯರೂ ಬೆಂಬಲ ವ್ಯಕ್ತಪಡಿಸಿದ್ದು, ಸುಲಭವಾಗಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ.
ಈ ವಿಭಾಗದಿಂದ ಇನ್ನಷ್ಟು
-
ವಾಷಿಂಗ್ಟನ್: ಸೂರ್ಯನ ಅಧ್ಯಯನಕ್ಕಾಗಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಕಳುಹಿಸಿದ್ದ 'ಪಾರ್ಕರ್', ಮಾನವ ನಿರ್ಮಿತ ಯಾವುದೇ ಆಕಾಶಕಾಯ ಈವರೆಗೆ ತಲುಪದಿರುವ...
-
ಜಕಾರ್ತಾ: ಇಂಡೋನೇಷಿಯಾದ ಸುಮಾತ್ರಾ ದ್ವೀಪದಲ್ಲಿರುವ ಅಶೆ ಪ್ರದೇಶದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬನಿಗೆ ಛಡಿಯೇಟು ಶಿಕ್ಷೆ ನೀಡುತ್ತಿದ್ದ ಸಂದರ್ಭದಲ್ಲಿ ಆತ ಪ್ರಜ್ಞೆ...
-
ಹೊನಲುಲು: ಹವಾಯಿ ದ್ವೀಪದಲ್ಲಿರುವ ಅಮೆರಿಕಾದ ಸೇನಾ ನೆಲೆ ಪರ್ಲ್ ಹಾರ್ಬರ್ ನಲ್ಲಿ ಅಮೆರಿಕಾ ನೌಕಾ ದಳದ ನಾವಿಕನೊಬ್ಬ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ...
-
ರಿಯಾದ್: ಸೌದಿ ಅರೇಬಿಯಾದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿದೇಶೀಯರಿಗೂ ಪೌರತ್ವ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ವಿವಿಧ ವಲಯಗಳಲ್ಲಿನ ವೃತ್ತಿಪರರು,...
-
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಭಾರತೀಯ ಮೂಲದ ಅಮೆರಿಕ ಸಂಸದೆ ಪ್ರಮೀಳಾ ಜಯಪಾಲ್ ವಾಗ್ಧಾಳಿ ನಡೆಸಿದ್ದಾರೆ. ತನ್ನ ಅಧಿಕಾರವನ್ನು...
ಹೊಸ ಸೇರ್ಪಡೆ
-
ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವಂತೆ ಹಾಗೂ ನೌಕರರ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸಿಐಟಿಯು ನೇತೃತ್ವದಲ್ಲಿ...
-
ಚಿಂತಾಮಣಿ: ತಮ್ಮ ಮಾಲೀಕತ್ವದ ಖಾಲಿ ನಿವೇಶನ ಅಳೆಯಲು ಕಳೆದ ಎರಡು ವರ್ಷ ಗಳಿಂದ ಮನವಿ ನೀಡಿ, ಕಚೇರಿಗೆ ಅಲೆದಾಡಿದರೂ ಸ್ಪಂದಿಸದ ಕಾಗತಿ ಗ್ರಾಪಂ ಅಧಿಕಾರಿಗಳ ವಿರುದ್ಧ...
-
ಚಾಮರಾಜನಗರ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಆರಂಭಿಸಬೇಕು. ವೇತನ ಬಾಕಿ ನೀಡಬೇಕು. ಮಾತೃಪೂರ್ಣ ಯೋಜನೆ ಯಶಸ್ಸಿಗೆ ಹೆಚ್ಚುವರಿ ಸಹಾಯಕಿಯರನ್ನು...
-
ಶರತ್ ಭದ್ರಾವತಿ ಶಿವಮೊಗ್ಗ: ಕಲೆ, ಸಂಸ್ಕೃತಿಗೆ ಶ್ರೀಮಂತವಾದ ಮಲೆನಾಡಿನಲ್ಲಿ ತಲೆ ಎತ್ತಿದ್ದ ಬಯಲು ರಂಗಮಂದಿರ ಕಳೆದ ಐದು ವರ್ಷಗಳಿಂದ ತನ್ನದೇ ಆದ ಸಮಸ್ಯೆಯಿಂದ...
-
ಹೈದರಾಬಾದ್/ನವದೆಹಲಿ: ಪಶುವೈದ್ಯೆ ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ನಾಲ್ವರು ಆರೋಪಿಗಳನ್ನು...