ಅಮೆರಿಕಾ ವಿಶ್ವವಿದ್ಯಾನಿಲಯಗಳಲ್ಲಿ ಚೀನಾ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಇಳಿಕೆ


Team Udayavani, Sep 23, 2019, 9:49 PM IST

Univeristy-23-9

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಮೆರಿಕಾ ಮತ್ತು ಚೀನಾ ದೇಶಗಳ ನಡುವೆ ವ್ಯಾಪಾರ ಸಮರ ಜೋರಾಗಿರುವಂತೆ ಅಮೆರಿಕಾದ ವಿಶ್ವವಿದ್ಯಾನಿಲಯಗಳಲ್ಲಿ ಚೀನಾ ದೇಶದ ವಿದ್ಯಾರ್ಥಿಗಳ ದಾಖಲಾತಿಯಲ್ಲೂ ಸಹ ಭಾರೀ ಇಳಿಕೆ ಕಂಡುಬಂದಿದೆ.

ಅಮೆರಿಕಾದ ಬಹಳಷ್ಟು ವಿಶ್ವವಿದ್ಯಾನಿಲಯಗಳಲ್ಲಿ ಚೀನಾ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಐದನೇ ಒಂದರಷ್ಟು ಇಳಿಕೆ ಕಂಡುಬಂದಿರುವುದು ಕಳವಳಕಾರಿ ಅಂಶ ಎನ್ನುವುದು ಅಮೆರಿಕಾ ಶಿಕ್ಷಣ ರಂಗದ ಪ್ರಮುಖರ ಅಭಿಪ್ರಾಯವಾಗಿದೆ. ಇನ್ನು ಚೀನಾ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಉಂಟಾಗಿರುವ ಕೊರತೆಯನ್ನು ನೀಗಿಸಲು ಬಹಳಷ್ಟು ವಿಶ್ವವಿದ್ಯಾನಿಲಯಗಳು ಪ್ರಪಂಚದ ಬೇರೆ ರಾಷ್ಟ್ರಗಳ ವಿದ್ಯಾರ್ಥಿಗಳತ್ತ ತಮ್ಮ ಗಮನವನ್ನು ಹರಿಸಲು ಪ್ರಾರಂಭಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಎರಡೂ ದೇಶಗಳ ನಡುವೆ ಉದ್ಭವಿಸಿರುವ ರಾಜತಾಂತ್ರಿಕ ಬಿಕ್ಕಟ್ಟು, ವಿಸಾ ನೀಡುವಿಕೆಯಲ್ಲಿನ ಸಮಸ್ಯೆಗಳು ಮತ್ತು ಚೀನಾದಲ್ಲೇ ಉನ್ನತ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಸುಧಾರಣೆ ಉಂಟಾಗಿರುವುದು ಮೊದಲಾದ ಕಾರಣಗಳಿಂದ ಅಮೆರಿಕಾದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಚೀನಾ ವಿದ್ಯಾರ್ಥಿಗಳು ದಾಖಲುಗೊಳ್ಳಲು ಮನಸ್ಸು ಮಾಡುತ್ತಿಲ್ಲ ಎನ್ನುವ ಅಂಶಗಳೂ ಸಹ ಬಯಲಾಗಿದೆ.

ಮ್ಯಾಸಚ್ಯುಸೆಟ್ಸ್ ನಲ್ಲಿರುವ ಬೆಂಟ್ಲಿ ವಿಶ್ವವಿದ್ಯಾನಿಲಯದಲ್ಲಿ ಈ ಬಾರಿ ಚೀನಾ ದೇಶದ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ 70ಕ್ಕೆ ಇಳಿದಿದೆ. ಕಳೆದ ವರ್ಷ 110 ವಿದ್ಯಾರ್ಥಿಗಳು ಈ ವಿಶ್ವವಿದ್ಯಾನಿಲಯದಲ್ಲಿ ದಾಖಲಾತಿಯನ್ನು ಪಡೆದುಕೊಂಡಿದ್ದರು. ಹೀಗಾಗಿ ಈ ವಿಶ್ವವಿದ್ಯಾನಿಲಯದಲ್ಲಿ ಕೆಲವೊಂದು ಸ್ನಾತಕೋತ್ತರ ಶಿಕ್ಷಣ ಕೋರ್ಸ್ ಗಳನ್ನು ಉಳಿಸಿಕೊಳ್ಳಲು ಆಡಳಿತ ಮಂಡಳಿ ಹರಸಾಹಸಪಡುವಂತಾಗಿದೆ.

ಇನ್ನು ವೆರ್ಮೊಂಟ್ ವಿಶ್ವವಿದ್ಯಾನಿಲಯದಲ್ಲಿ ಚೀನಾ ವಿದ್ಯಾರ್ಥಿಗಳ ದಾಖಲಾತಿಯಲ್ಲಿ 23% ಇಳಿಕೆಯಾಗಿದ್ದರೆ, ನೆಬ್ರಾಸ್ಕಾ-ಲಿಂಕಲ್ನ್ ವಿಶ್ವವಿದ್ಯಾನಿಲಯದಲ್ಲಿ ಚೀನಾ ವಿದ್ಯಾರ್ಥಿಗಳ ದಾಖಲಾತಿಯಲ್ಲಿ 20% ಕುಸಿತವಾಗಿದೆ.

ಜಗತ್ತಿನ ಬೇರೆಲ್ಲಾ ದೇಶಗಳಿಗೆ ಹೋಲಿಸಿದರೆ ಚೀನಾ ದೇಶವು ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಅಮೆರಿಕಾ ದೇಶಕ್ಕೆ ಶಿಕ್ಷಣದ ಉದ್ದೇಶಕ್ಕಾಗಿ ಕಳುಹಿಸುತ್ತಿದೆ. ಚೀನಾ ದೇಶದ 363,000 ವಿದ್ಯಾರ್ಥಿಗಳು ವಿಶ್ವದ ಒಟ್ಟು ವಿದ್ಯಾರ್ಥಿಗಳ ಮೂರನೇ ಒಂದು ಭಾಗವನ್ನು ಅಮೆರಿಕಾದ ವಿಶ್ವವಿದ್ಯಾನಿಲಯಗಳಲ್ಲಿ ಪ್ರತಿನಿಧಿಸುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಪ್ರಮಾಣ ಸಮವಾಗಿದೆ.

ಅಮೆರಿಕಾದಲ್ಲಿ ಹೆಚ್ಚುತ್ತಿರುವ ಗನ್ ಹಿಂಸೆ ಮತ್ತು ಕಠಿಣ ವಲಸೆ ನೀತಿಗಳ ಕುರಿತಾಗಿ ಚೀನಾ ದೇಶದ ವಿದ್ಯಾರ್ಥಿಗಳ ಹೆತ್ತವರು ಕಳವಳ ಹೊಂದಿರುವುದೂ ಸಹ ಅಮೆರಿಕಾದಲ್ಲಿ ಚೀನಾ ವಿದ್ಯಾರ್ಥಿಗಳ ಇಳಿಕೆಗೆ ಕಾರಣ ಎನ್ನಲಾಗುತ್ತಿದೆ.

ಅಂತಾರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ಸಂಘವೊಂದು ನಡೆಸಿದ ಸಮೀಕ್ಷೆಯ ಪ್ರಕಾರ ವೀಸಾ ಪಡೆಯುವಲ್ಲಿನ ತೊಡಕುಗಳು ಹಾಗೂ ಅಮೆರಿಕಾದಲ್ಲಿನ ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳೇ ಚೀನಾ ವಿದ್ಯಾರ್ಥಿಗಳ ದಾಖಲಾತಿ ಕುಸಿತಕ್ಕೆ ಪ್ರಮುಖ ಕಾರಣ ಎಂದು ಕಂಡುಕೊಳ್ಳಲಾಗಿದೆ.

ಇನ್ನು ಚೀನಾದ ವಿದ್ಯಾರ್ಥಿಗಳು ಅಮೆರಿಕಾದಲ್ಲಿ ಶಿಕ್ಷಣವನ್ನು ಪಡೆದು ಅಮೆರಿಕಾದ ಯುವಕರ ಅವಕಾಶಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂಬ ಭಾವನೆಯೊಂದು ಟ್ರಂಪ್ ಸರಕಾರಕ್ಕೆ ಇರುವುದೂ ಸಹ ಈ ಬೆಳವಣಿಗೆಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.