ಇದೆಂಥ ಪ್ರತೀಕಾರ; ಉದ್ರಿಕ್ತ ಗುಂಪಿನಿಂದ 300 ಮೊಸಳೆಗಳ ಮಾರಣಹೋಮ!
Team Udayavani, Jul 16, 2018, 5:28 PM IST
ಇಂಡೋನೇಷ್ಯಾ: ವ್ಯಕ್ತಿಯೊಬ್ಬನನ್ನು ಮೊಸಳೆ ಕೊಂದ ಪರಿಣಾಮ ರೊಚ್ಚಿಗೆದ್ದ ಜನರ ಗುಂಪು ಪ್ರತೀಕಾರ ಎಂಬಂತೆ ಕೊಡಲಿ, ಮಚ್ಚಿನೊಂದಿಗೆ ಆಗಮಿಸಿ ಬರೋಬ್ಬರಿ 300 ಮೊಸಳೆಗಳ ಮಾರಣಹೋಮ ನಡೆಸಿದ ಅಮಾನವೀಯ ಘಟನೆ ಇಂಡೋನೇಷ್ಯಾದಲ್ಲಿ ನಡೆದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ತಾನು ಸಾಕಿದ್ದ ಜಾನುವಾರುಗಳಿಗೆ ಮೇವು ತರುವ ನಿಟ್ಟಿನಲ್ಲಿ ಸ್ಥಳೀಯ ಮೊಸಳೆ ಸಾಕಣೆ(ಮೊಸಳೆ ತಳಿ ಅಭಿವೃದ್ಧಿ) ಕೇಂದ್ರದತ್ತ ವ್ಯಕ್ತಿಯೊಬ್ಬ ಬಂದಿದ್ದ. ಈತ ಮೊಸಳೆ ಇದ್ದ ಜಾಗದಲ್ಲಿಯೇ ಬೆಳೆದಿದ್ದ ಹುಲ್ಲನ್ನು ಬಾಗಿ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿ ಕೊಂದು ಹಾಕಿದ್ದ ಘಟನೆ ಶನಿವಾರ ಸಂಭವಿಸಿತ್ತು.
ಮೃತ ವ್ಯಕ್ತಿಯನ್ನು 48 ವರ್ಷ ಪ್ರಾಯದ ಸುಗಿಟೋ ಎಂದು ಗುರುತಿಸಲಾಗಿದೆ. ಒಂದು ಮೊಸಳೆ ಈತನ ಕಾಲನ್ನು ಕಚ್ಚಿ ನೀರಿನೊಳಗೆ ಎಳೆದೊಯ್ಯುತ್ತಿದ್ದಾಗ ಕೂಗಿಕೊಂಡ ಶಬ್ಧ ಕೇಳಿ ಫಾರ್ಮ್ ನಲ್ಲಿದ್ದ ಉದ್ಯೋಗಿಯೊಬ್ಬ ಸ್ಥಳಕ್ಕೆ ಹೋಗಿದ್ದ. ಅಷ್ಟರಲ್ಲಿ ಅಪಾಯ ಸಂಭವಿಸಿ ಆಗಿತ್ತು ಎಂದು ಇಂಡೋನೇಷ್ಯಾ ಸಂಪನ್ಮೂಲ ರಕ್ಷಣಾ ಏಜೆನ್ಸಿಯ ಬಸ್ಸಾರ್ ಮನುಲಾಂಗ್ ತಿಳಿಸಿದ್ದಾರೆ.
ನಾವು ಸಂತ್ರಸ್ತ ಕುಟುಂಬದ ಜೊತೆ ಒಪ್ಪಂದ ಮಾಡಿಕೊಂಡು, ಅವರಿಗೆ ಸಾಂತ್ವನ ಹೇಳಿದ್ದೇವು. ಆದರೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರ ಗುಂಪು, ಮಚ್ಚು, ಕತ್ತಿಯೊಂದಿಗೆ ದಾಳಿ ನಡೆಸಿ ಸುಮಾರು 300 ಮೊಸಳೆಗಳನ್ನು ಕೊಂದು ಹಾಕಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ. ನಾವು ಎಷ್ಟೇ ಪ್ರಯತ್ನಿಸಿದರೂ ಮೊಸಳೆ ಮಾರಣ ಹೋಮ ತಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕ್ರಿಮಿನಲ್ ಆರೋಪದಡಿಯಲ್ಲಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿಸಿರುವ ಅಧಿಕಾರಿಗಳು ಈ ಘಟನೆಯಿಂದ ಅನಧಿಕೃತವಾಗಿ ಮೊಸಳೆ ಫಾರ್ಮ್ ನೊಳಗೆ ಪ್ರವೇಶಿಸುವುದು ಹಾಗೂ ಮೊಸಳೆಗಳ ರಕ್ಷಣೆಯ ಬಗ್ಗೆ ಹೆಚ್ಚು ಗಮನ ಕೊಡಬೇಕಾಗಿರುವುದನ್ನು ಮನದಟ್ಟು ಮಾಡಿಕೊಳ್ಳಬೇಕಾಗಿದೆ ಎಂದು ಮಾಧ್ಯಮದ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ