ಇದೆಂಥ ಪ್ರತೀಕಾರ; ಉದ್ರಿಕ್ತ ಗುಂಪಿನಿಂದ 300 ಮೊಸಳೆಗಳ ಮಾರಣಹೋಮ!


Team Udayavani, Jul 16, 2018, 5:28 PM IST

704224-indionesia.jpg

ಇಂಡೋನೇಷ್ಯಾ: ವ್ಯಕ್ತಿಯೊಬ್ಬನನ್ನು ಮೊಸಳೆ ಕೊಂದ ಪರಿಣಾಮ ರೊಚ್ಚಿಗೆದ್ದ ಜನರ ಗುಂಪು ಪ್ರತೀಕಾರ ಎಂಬಂತೆ ಕೊಡಲಿ, ಮಚ್ಚಿನೊಂದಿಗೆ ಆಗಮಿಸಿ ಬರೋಬ್ಬರಿ 300 ಮೊಸಳೆಗಳ ಮಾರಣಹೋಮ ನಡೆಸಿದ ಅಮಾನವೀಯ ಘಟನೆ ಇಂಡೋನೇಷ್ಯಾದಲ್ಲಿ ನಡೆದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ತಾನು ಸಾಕಿದ್ದ ಜಾನುವಾರುಗಳಿಗೆ ಮೇವು ತರುವ ನಿಟ್ಟಿನಲ್ಲಿ ಸ್ಥಳೀಯ ಮೊಸಳೆ ಸಾಕಣೆ(ಮೊಸಳೆ ತಳಿ ಅಭಿವೃದ್ಧಿ) ಕೇಂದ್ರದತ್ತ ವ್ಯಕ್ತಿಯೊಬ್ಬ ಬಂದಿದ್ದ. ಈತ ಮೊಸಳೆ ಇದ್ದ ಜಾಗದಲ್ಲಿಯೇ ಬೆಳೆದಿದ್ದ ಹುಲ್ಲನ್ನು ಬಾಗಿ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿ ಕೊಂದು ಹಾಕಿದ್ದ ಘಟನೆ ಶನಿವಾರ ಸಂಭವಿಸಿತ್ತು.

ಮೃತ ವ್ಯಕ್ತಿಯನ್ನು 48 ವರ್ಷ ಪ್ರಾಯದ ಸುಗಿಟೋ ಎಂದು ಗುರುತಿಸಲಾಗಿದೆ. ಒಂದು ಮೊಸಳೆ ಈತನ ಕಾಲನ್ನು ಕಚ್ಚಿ ನೀರಿನೊಳಗೆ ಎಳೆದೊಯ್ಯುತ್ತಿದ್ದಾಗ ಕೂಗಿಕೊಂಡ ಶಬ್ಧ ಕೇಳಿ ಫಾರ್ಮ್ ನಲ್ಲಿದ್ದ ಉದ್ಯೋಗಿಯೊಬ್ಬ ಸ್ಥಳಕ್ಕೆ ಹೋಗಿದ್ದ. ಅಷ್ಟರಲ್ಲಿ ಅಪಾಯ ಸಂಭವಿಸಿ ಆಗಿತ್ತು ಎಂದು ಇಂಡೋನೇಷ್ಯಾ ಸಂಪನ್ಮೂಲ ರಕ್ಷಣಾ ಏಜೆನ್ಸಿಯ ಬಸ್ಸಾರ್ ಮನುಲಾಂಗ್ ತಿಳಿಸಿದ್ದಾರೆ.

ನಾವು ಸಂತ್ರಸ್ತ ಕುಟುಂಬದ ಜೊತೆ ಒಪ್ಪಂದ ಮಾಡಿಕೊಂಡು, ಅವರಿಗೆ ಸಾಂತ್ವನ ಹೇಳಿದ್ದೇವು. ಆದರೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರ ಗುಂಪು, ಮಚ್ಚು, ಕತ್ತಿಯೊಂದಿಗೆ ದಾಳಿ ನಡೆಸಿ ಸುಮಾರು 300 ಮೊಸಳೆಗಳನ್ನು ಕೊಂದು ಹಾಕಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ. ನಾವು ಎಷ್ಟೇ ಪ್ರಯತ್ನಿಸಿದರೂ ಮೊಸಳೆ ಮಾರಣ ಹೋಮ ತಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕ್ರಿಮಿನಲ್ ಆರೋಪದಡಿಯಲ್ಲಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿಸಿರುವ ಅಧಿಕಾರಿಗಳು ಈ ಘಟನೆಯಿಂದ ಅನಧಿಕೃತವಾಗಿ ಮೊಸಳೆ ಫಾರ್ಮ್ ನೊಳಗೆ ಪ್ರವೇಶಿಸುವುದು ಹಾಗೂ ಮೊಸಳೆಗಳ ರಕ್ಷಣೆಯ ಬಗ್ಗೆ ಹೆಚ್ಚು ಗಮನ ಕೊಡಬೇಕಾಗಿರುವುದನ್ನು ಮನದಟ್ಟು ಮಾಡಿಕೊಳ್ಳಬೇಕಾಗಿದೆ ಎಂದು ಮಾಧ್ಯಮದ ವರದಿ ಹೇಳಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.