ಭಾರತದಿಂದ ಮತ್ತೂಂದು ದಾಳಿ: ಪಾಕಿಸ್ಥಾನ ಆತಂಕ
Team Udayavani, Apr 8, 2019, 6:30 AM IST
ಇಸ್ಲಾಮಾಬಾದ್: ಗುಮ್ಮನ ಭೀತಿಯಿಂದಾಗಿ ಕನಸಿನಲ್ಲಿ ಬೆಚ್ಚಿಬೀಳುವ ಮಕ್ಕಳಂತೆ, ಬಾಲಕೋಟ್ ದಾಳಿಯ ನಂತರ ಪದೇ ಪದೆ ಭಾರತದತ್ತ ಬೊಟ್ಟು ಮಾಡಿ ಬೊಬ್ಬಿಡುತ್ತಿರುವ ಪಾಕಿಸ್ಥಾನದ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ಈಗ ಅಂಥದ್ದೇ ಮತ್ತೂಂದು ಭೀತಿಯನ್ನು ಹೊರಹಾಕಿದ್ದಾರೆ.
ಮುಲ್ತಾನ್ನಲ್ಲಿ ರವಿವಾರ ಮಾತನಾಡಿದ ಅವರು, ಇದೇ ತಿಂಗಳ 16ರಿಂದ 20ರೊಳಗಾಗಿ ಪಾಕಿಸ್ಥಾನದ ಮೇಲೆ ಭಾರತ ಮತ್ತೂಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಯೋಜಿಸಿದೆ. ಅದಕ್ಕೆ ಪೂರಕವಾದ ಸಿದ್ಧತೆಗಳು ಸಾಗುತ್ತಿವೆ. ಭಾರತ ಹೊಂದಿರುವ ಪಾಕ್ ವಿರೋಧಿ ಧೋರಣೆಯನ್ನು ಮತ್ತಷ್ಟು ಪ್ರಚುರ ಪಡಿಸಲು ಹಾಗೂ ಇಸ್ಲಾಮಾಬಾದ್ ಮೇಲೆ ಮತ್ತಷ್ಟು ಅಂತಾರಾಷ್ಟ್ರೀಯ ಒತ್ತಡವನ್ನು ಹೇರಲು ಭಾರತ ಮತ್ತೂಂದು ಸರ್ಜಿಕಲ್ ಸ್ಟ್ರೈಕ್ ನಡೆಸುವ ಬಗ್ಗೆ ಗುಪ್ತಚರ ಮಾಹಿತಿಯಿದೆ” ಎಂದು ತಿಳಿಸಿದ್ದಾರೆ.
ಅಸಂಬದ್ಧ ಹೇಳಿಕೆ: ಖುರೇಷಿ ಹೇಳಿಕೆಯನ್ನು ತಳ್ಳಿಹಾಕಿರುವ ಭಾರತ “ಇದೊಂದು ಬೇಜವಾಬ್ದಾರಿಯುತ ಹಾಗೂ ಅಸಂಬದ್ಧ ಹೇಳಿಕೆ’ ಎಂದು ಬಣ್ಣಿಸಿದೆ. ಇದು ಈ ಪ್ರದೇಶದಲ್ಲಿ ಯುದ್ಧ ಭೀತಿ ಹುಟ್ಟಿಸಲು ಪಾಕಿಸ್ಥಾನ ಮಾಡುತ್ತಿರುವ ಕುತಂತ್ರ ಎನ್ನುವುದು ಸ್ಪಷ್ಟ . ಅಲ್ಲದೆ, ಪಾಕ್ ಮೂಲದ ಭಯೋತ್ಪಾದಕರಿಗೆ ಭಾರತದ ಮೇಲೆ ದಾಳಿ ನಡೆಸುವಂತೆ ನೀಡುತ್ತಿರುವ ಕರೆಯೂ ಇದಾಗಿರಬಹುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಕಿಡಿಕಾರಿದ್ದಾರೆ.
370ನೇ ಕಲಂ ರದ್ದತಿಗೆ ಸಮ್ಮತಿಯಿಲ್ಲ: ಕಾಶ್ಮೀರದಲ್ಲಿ ಭಾರತದ ಸಂವಿಧಾನದ 370ನೇ ಕಲಂ ರದ್ದುಗೊಳಿಸಲು ಪಾಕಿಸ್ಥಾನ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪಾಕ್ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್ ಹೇಳಿದ್ದಾರೆ. ಭಾರತದ ಈ ಕ್ರಮ ವಿಶ್ವಸಂಸ್ಥೆಯ ನಿಲುವಳಿಯ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!