ಪಾಕ್ ನ ಸಿಂಧ್ ನಲ್ಲಿ ಮತ್ತೊಂದು ಹಿಂದೂ ಬಾಲಕಿಯ ಅಪಹರಣ
Team Udayavani, Mar 27, 2019, 10:14 AM IST
representative image
ಅಮೃತ್ ಸರ್:ಪಾಕಿಸ್ತಾನದಲ್ಲಿ ಇಬ್ಬರು ಹಿಂದೂ ಬಾಲಕಿಯರನ್ನು ಅಪಹರಿಸಿ ಮತಾಂತರಗೊಳಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಸೋಮವಾರ ರಾತ್ರಿ ಮತ್ತೊಬ್ಬ ಹಿಂದೂ ಯುವತಿಯನ್ನು ಅಪಹರಿಸಿರುವ ಘಟನೆ ನಡೆದಿದೆ ಎಂದು ಆಂಗ್ಲ ದೈನಿಕದ ಅಂತರ್ಜಾಲ ತಾಣಗಳು ವರದಿ ಮಾಡಿವೆ.
ಸಿಂಧ್ ಪ್ರಾಂತ್ಯದಲ್ಲಿ ಕಳೆದ ಒಂದು ತಿಂಗಳೊಳಗೆ ಸುಮಾರು ಏಳು ಮಂದಿ ಹಿಂದೂ ಯುವತಿಯರನ್ನು ಅಪಹರಿಸಿ, ಬಲವಂತವಾಗಿ ಮತಾಂತರಗೊಳಿಸಲಾಗಿದೆ ಎಂದು ವರದಿ ವಿವರಿಸಿದ್ದು, ಏತನ್ಮಧ್ಯೆ ಇಬ್ಬರು ಹಿಂದೂಗಳ ಹತ್ಯೆ ಕೂಡಾ ನಡೆದಿದೆ ಎಂದು ತಿಳಿಸಿದೆ.
ಸೋಮವಾರ ತಡರಾತ್ರಿ ಸಿಂಧ್ ನ ಬಾಡಿನ್ ಜಿಲ್ಲೆಯಲ್ಲಿ 16 ವರ್ಷದ ಮಾಲಾ ಕುಮಾರಿ ಮೆಘಾವರ್ ಎಂಬ ಹಿಂದೂ ಬಾಲಕಿಯನ್ನು ಮನೆಯಿಂದಲೇ ಅಪಹರಿಸಿಕೊಂಡು ಹೋಗಲಾಗಿದೆ ಎಂದು ವರದಿ ಹೇಳಿದ್ದು, ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿರುವುದಾಗಿ ಹೆಸರು ಹೇಳಲು ಇಚ್ಛಿಸದ ಹಿಂದೂ ಮುಖಂಡರೊಬ್ಬರು ತಿಳಿಸಿದ್ದಾರೆ ಎಂದು ವರದಿ ಮಾಡಿದೆ.
ಅಲ್ಲದೇ ಪಾಕಿಸ್ತಾನದಲ್ಲಿ ಇಬ್ಬರು ಹಿಂದೂ ಬಾಲಕಿಯರನ್ನು ಅಪಹರಿಸಿ, ಮತಾಂತರಗೊಳಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯರು ಹಾಗೂ ಅವರ ಗಂಡಂದಿರು ಕೋರ್ಟ್ ಮೊರೆ ಹೋಗಿ ರಕ್ಷಣೆ ಒದಗಿಸುವಂತೆ ಕೋರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ, ಇಸ್ಲಾಮಾಬಾದ್ ಡೆಪ್ಯುಟಿ ಕಮಿಷನರ್ ಮತ್ತು ಮಾನವ ಹಕ್ಕುಗಳ ನಿರ್ದೇಶಕರ ಕಸ್ಟಡಿಗೆ ಇವರನ್ನು ವಹಿಸಿದ್ದಾರೆ. ಅಲ್ಲದೇ ಏಪ್ರಿಲ್ 2ರಂದು ತನಿಖಾ ವರದಿ ಸಲ್ಲಿಸಬೇಕೆಂದು ಪಾಕ್ ಕೋರ್ಟ್ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು