ಜನಮತಗಣನೆಯಿಂದ ಗೂಗಲ್‌ ನಡೆಯುತ್ತಿಲ್ಲ : CEO ಸುಂದರ್‌ ಪಿಚೈ


Team Udayavani, Nov 2, 2018, 3:50 PM IST

sundar-pichai-700.jpg

ಸ್ಯಾನ್‌ ಫ್ರಾನ್ಸಿಸ್ಕೋ : ಗೂಗಲ್‌ ಕಂಪೆನಿಯು ಜನಮತಗಣನೆಯಿಂದ ನಡೆಯುತ್ತಿಲ್ಲ ಎಂದು ಕಂಪೆನಿಯ ಸಿಇಓ ಸುಂದರ್‌ ಪಿಚೈ ಹೇಳಿದ್ದಾರೆ. 

ಕಚೇರಿಯಲ್ಲಿನ ಕಿರುಕುಳ, ತಾರತಮ್ಯ, ಒತ್ತಡ ಇತ್ಯಾದಿಗಳನ್ನು ಪ್ರತಿಭಟಿಸಿ ನಿನ್ನೆ ಗುರುವಾರ ಗೂಗಲ್‌ ಕಂಪೆನಿಯ ಏಶ್ಯ ವಲಯದ ನೌಕರರು ಮತ್ತು ಗುತ್ತಿಗೆದಾರರು ಹಲವು ನೂರರ ಸಂಖ್ಯೆಯಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ತಮ್ಮ ಕಚೇರಿಯಿಂದ ಹೊರ ನಡೆದು ತೋರಿದ ಪ್ರತಿಭಟನೆಗೆ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು. 

ನ್ಯೂಯಾರ್ಕ್‌ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪಿಚೈ ಅವರು, “ನಾವು ಜನಮತಗಣನೆಯ ಆಧಾರದಲ್ಲಿ ಕಂಪೆನಿಯನ್ನು ನಡೆಸುತ್ತಿಲ್ಲ; ನೌಕರರಿಗೆ ತಮ್ಮ  ಧ್ವನಿ ವ್ಯಕ್ತಪಡಿಸುವುದಕ್ಕೆ ಹಲವಾರು ಉತ್ತಮ ಅವಕಾಶಗಳಿವೆ; ಆ ನಿಟ್ಟಿನಲ್ಲಿ ನಾವು ಸಾಕಷ್ಟು ಮಾಡಿದ್ದೇವೆ’ ಎಂದು ಹೇಳಿರುವುದನ್ನು ಉಲ್ಲೇಖೀಸಿ ಬ್ಲೂಮ್‌ ಬರ್ಗ್‌ ವರದಿ ಮಾಡಿದೆ. 

ಏಶ್ಯದಲ್ಲಿನ ನೂರಾರು ಗೂಗಲ್‌ ನೌಕರರು ಮತ್ತು ಗುತ್ತಿಗೆದಾರರು ನಿನ್ನೆ  ಮಧ್ಯಾಹ್ನ ತಮ್ಮ ಮೇಲೆ ಕಂಪೆನಿಯ ಕಚೇರಿಗಳಲ್ಲಿ  ನಡೆಯುತ್ತಿರುವ ಆರೋಪಿತ ಶೋಷಣೆ, ಕಿರುಕುಳವನ್ನು ಪ್ರತಿಭಟಿಸಿ ಕಾರ್ಯಾಲಯದಿಂದ ಹೊರ ನಡೆದ ಅತ್ಯಪರೂಪದ ವಿದ್ಯಮಾನ ನಡೆಯಿತು. 

ದುಡಿಯುವ ಸ್ಥಳದಲ್ಲಿ (ಕಚೇರಿಯಲ್ಲಿ) ಕಂಪೆನಿಯ ಕಾರ್ಯನಿರ್ವಾಹಕರಿಂದ ನೌಕರರ ಮೇಲೆ ಅನಿರ್ಬಂಧಿತ ಅಧಿಕಾರ ಪ್ರಯೋಗ, ಜನಾಂಗೀಯತೆ, ಲೈಂಗಿಕ ಶೋಷಣೆಯೇ ಮೊದಲಾದ ಅತಿರೇಕಗಳನ್ನು ಪ್ರತಿಭಟಿಸಲು ವಿಶ್ವಾದ್ಯಂತದ ಗೂಗಲ್‌ ಕಾರ್ಯಾಲಯಗಳಿಂದ ಹಲವು ಸಾವಿರ ಮಂದಿ ನೌಕರರು ಹೊರಬಂದು ಪ್ರತಿಭಟಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ನಿನ್ನೆ ತಡವಾಗಿ ಹೊರಡಿಸಲಾಗಿದ್ದ  ಹೇಳಿಕೆಯಲ್ಲಿ ಸಂಘಟಕರು ಗೂಗಲ್‌ ಮಾತೃ ಸಂಸ್ಥೆಯಾಗಿರುವ Alphabet Inc. ಮುಖ್ಯಸ್ಥರನ್ನು ಭೇಟಿಯಾಗಿ ಕಂಪೆನಿಯ ನಿರ್ದೇಶಕರ ಮಂಡಳಿಯಲ್ಲಿ ನೌಕರ ಪ್ರತಿನಿಧಿಯೋರ್ವರನ್ನು ಸೇರಿಸಿಕೊಳ್ಳುವಂತೆ ಮತ್ತು ವೇತನ-ಸಮಾನತೆ ಅಂಕಿ ಅಂಶವನ್ನು ಆಂತರಿಕವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದರು; ಜತೆಗೆ ಕಾರ್ಯ ಸ್ಥಳದಲ್ಲಿನ ಕಿರುಕುಳ-ಸಂಬಂಧಿ ಪರಿಹಾರ ಕೋರಿಕೆ ಪ್ರಕರಣಗಳನ್ನು ನ್ಯಾಯೋಚಿತವಾಗಿ ಇತ್ಯರ್ಥಪಡಿಸುವ ದಿಶೆಯಲ್ಲಿನ ಮಾನವ ಸಂಪನ್ಮೂಲ ಉಪಕ್ರಮಗಳಿಗೆ ಬದಲಾವಣೆ ತರಬೇಕು ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.