ಬಿಬಿಸಿಯಿಂದ ನೈಜ ಪರಿಸ್ಥಿತಿ ಅನಾವರಣ
ಮಾಧ್ಯಮ ಸಂಸ್ಥೆ ಮೇಲಿನ ಐಟಿ ಶೋಧಕ್ಕೆ ರಾಹುಲ್ ಅತೃಪ್ತಿ
Team Udayavani, Mar 6, 2023, 6:47 AM IST
ಲಂಡನ್: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ತೀವ್ರ ದಾಳಿಯಾಗುತ್ತಿದೆ. ಮಾಧ್ಯಮ ಮತ್ತು ನ್ಯಾಯಾಂಗದ ಮೇಲೆ ದಾಳಿಯಾಗುತ್ತಿದ್ದು, ಅದನ್ನು ನಿಯಂತ್ರಿಸಲಾಗುತ್ತಿದೆ. ಇದನ್ನು ಇದೀಗ ಬಿಬಿಸಿ ಅನಾವರಣಗೊಳಿಸಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಬ್ರಿಟನ್ ರಾಜಧಾನಿ ಲಂಡನ್ನಲ್ಲಿ ಇಂಡಿಯನ್ ಜರ್ನಲಿಸ್ಟ್ ಅಸೊಸಿಯೇನ್(ಐಜೆಎ) ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ 9 ವರ್ಷಗಳಿಂದ ಭಾರತದಲ್ಲಿ ನಿರಂತರವಾಗಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿಯಾಗತ್ತಿದೆ. ಜನರ ಧ್ವನಿಯನ್ನು ಅಡಗಿಸಲಾಗುತ್ತಿದೆ. ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ತೆರಿಗೆ ಇಲಾಖೆಯ ಶೋಧ ಕಾರ್ಯಾಚರಣೆಯು ಇದಕ್ಕೆ ತಾಜಾ ಉದಾಹರಣೆಯಾಗಿದೆ,’ ಎಂದು ದೂರಿದರು. ಇದೇ ವೇಳೆ ರಾಹುಲ್ ಗಾಂಧಿ ಅವರು ಭಾರತೀಯ ಸಮುದಾಯದೊಂದಿಗೆ ನಡೆದ ಸಂವಾದದಲ್ಲಿ ಭಾಗವಹಿಸಿದರು.
ಬಸವಣ್ಣ ಪ್ರತಿಮೆಗೆ ಗೌರವ ಅರ್ಪಣೆ
ಲ್ಯಾಂಬೆತ್ನಗರದಲ್ಲಿರುವ ಜಗಜ್ಯೋತಿ ಬಸವಣ್ಣನವರ ಪ್ರತಿಮೆಗೆ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಗೌರವ ಅರ್ಪಿಸಿದ್ದಾರೆ. ಬಳಿಕ ಮಾತನಾಡಿದಅವರು ಪ್ರಜಾಪ್ರಭುತ್ವ ತತ್ವಕ್ಕೆ ಅಡಿಪಾಯ ಹಾಕಿದ ಮಹಾನ್ ಸಮಾಜ ಸುಧಾರಕ ಬಸವಣ್ಣನವರ ತತ್ವಗಳು ವಿಶ್ವಕ್ಕೇ ಮಾದರಿಯಾಗುವಂಥದ್ದು ಎಂದು ಬಣ್ಣಿಸಿದರು.
ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಅವರನ್ನು ನಿಯೋಜಿಸಲು ಇದು ಸಕಾಲ. ಉಗ್ರರು ಬರುತ್ತಾರೆ ಮತ್ತು ಅವರನ್ನು ನೋಡುತ್ತಾರೆ. ಇವರ ಮಾತುಗಳನ್ನು ಕೇಳಿಸಿಕೊಂಡು, ಉಗ್ರರು ಸುಮ್ಮನೆ ಹೊರಡುತ್ತಾರೆ. ಶಾಂತಿ ಮೂಲ ಭಯೋತ್ಪಾದನೆ ನಿಗ್ರಹಕ್ಕೆ ಸೂಕ್ತ ಪರಿಹಾರವಿದು.
– ವಿವೇಕ್ ಅಗ್ನಿಹೋತ್ರಿ, ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು