ಅಸ್ಸಾಂಗೆ ಸೋಲುಣಿಸಿದ ಅರ್ಜುನ್
Team Udayavani, Oct 20, 2018, 9:00 AM IST
ಮುಂಬಯಿ: ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಅವರ ಪುತ್ರ, ಅರ್ಜುನ್ ತೆಂಡುಲ್ಕರ್ ಕ್ರಿಕೆಟ್ ಲೋಕದಲ್ಲಿ ನಿಧಾನವಾಗಿ ಫಾರ್ಮ್ ಕಂಡುಕೊಳ್ಳುತ್ತಿದ್ದಾರೆ. ಅರ್ಜುನ್ (7-2-14-3) ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ವಿನೂ ಮಂಕಡ್ ಏಕದಿನ ಕ್ರಿಕೆಟ್ ಕೂಟದಲ್ಲಿ ಅಸ್ಸಾಂ ವಿರುದ್ಧ ಮುಂಬಯಿ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿತು.
ಮೊದಲು ಬ್ಯಾಟಿಂಗ್ ಮಾಡಿದ್ದ ಅಸ್ಸಾಂ 40.4 ಓವರ್ಗಳಲ್ಲಿ ಕೇವಲ 99 ರನ್ನಿಗೆ ಆಲೌಟಾಯಿತು. ಈ ಗುರಿ ಬೆನ್ನಟ್ಟಿದ ಮುಂಬಯಿ ತಂಡ ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ನೆರವಿನಿಂದ ಕೇವಲ 22 ಓವರ್ಗಳಲ್ಲಿ ಗೆಲುವಿನ ಗುರಿ ಸೇರಿತು. ಸದ್ಯ ಕೂಟದಲ್ಲಿ ಮುಂಬಯಿ 6 ಪಂದ್ಯ ಆಡಿದ್ದು ನಾಲ್ಕರಲ್ಲಿ ಜಯ ಗಳಿಸಿದೆ. ಅರ್ಜುನ್ ಒಟ್ಟಾರೆ 13 ವಿಕೆಟ್ ಕಬಳಿಸಿ ಕೂಟದಲ್ಲೇ ಗರಿಷ್ಠ ವಿಕೆಟ್ ಕಿತ್ತ ಬೌಲರ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಅಂಡರ್-19 ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅರ್ಜುನ್ ಅಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಇದರಿಂದಾಗಿ ಅವರು ಟೀಕೆಗೂ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ