ಅರ್ಮೇನಿಯಾ, ಅಝರ್ ಬೈಜಾನ್ ಯುದ್ಧ ತೀವ್ರ: 58 ಸೈನಿಕರು, 9 ನಾಗರಿಕರು ಸಾವು

ಸೋವಿಯತ್ ಒಕ್ಕೂಟ ಪತನದ ಬಳಿಕ ಅರ್ಮೇನಿಯಾ ಹಾಗೂ ಅಝರ್ ಬೈಜಾನ್ ಸ್ವತಂತ್ರ ದೇಶಗಳಾಗಿದ್ದವು.

Team Udayavani, Sep 29, 2020, 3:19 PM IST

ಅರ್ಮೇನಿಯಾ, ಅಝರ್ ಬೈಜಾನ್ ಯುದ್ಧ ತೀವ್ರ: 58 ಸೈನಿಕರು, 9 ನಾಗರಿಕರು ಸಾವು

ಯೆರೆವಾನ್: ಕ್ರಿಶ್ಚಿಯನ್ ಸಮುದಾಯದ ಪ್ರಾಬಲ್ಯ ಹೊಂದಿರುವ ಅರ್ಮೇನಿಯಾ ಹಾಗೂ ಮುಸ್ಲಿಂ ಬಾಹುಳ್ಯ ಹೊಂದಿರುವ ಅಝರ್ ಬೈಜಾನ್ ದೇಶಗಳ ನಡುವೆ ಸಂಭವಿಸಿದ ಯುದ್ಧದಲ್ಲಿ 58 ಸೈನಿಕರು, 9 ಮಂದಿ ನಾಗರಿಕರು ಸಾವನ್ನಪ್ಪಿದ್ದು, ಉಭಯ ದೇಶಗಳು ಶಾಂತಿ ಕಾಪಾಡುವಂತೆ ವಿಶ್ವಸಂಸ್ಥೆ ಕರೆ ನೀಡಿರುವುದಾಗಿ ವರದಿ ತಿಳಿಸಿದೆ. ಸುಮಾರು ಎರಡು ದಶಕಗಳಿಂದಲೂ ಎರಡೂ ದೇಶಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದು, ನಗೊರ್ನೊ-ಕರಬಾಖ್ ಪ್ರದೇಶ!

ಅಝರ್ ಬೈಜಾನ್ ನ ಏಳು ಮಂದಿ ಹಾಗೂ ಅರ್ಮೇನಿಯಾದ ಇಬ್ಬರು ಸೇರಿದಂತೆ ಒಂಬತ್ತು ಮಂದಿ ನಾಗರಿಕರು ಸಾವನ್ನಪ್ಪಿರುವುದಾಗಿ ಅಲ್ ಜಝೀರಾ ವರದಿ ಮಾಡಿದೆ.ಎರಡು ದೇಶಗಳ ಯುದ್ಧದಲ್ಲಿ ಯಾವುದೇ ಸೈನಿಕರು ಸಾವನ್ನಪ್ಪಿರುವ ಬಗ್ಗೆ ಅಝರ್ ಬೈಜಾನ್ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಆದರೆ ಅರ್ಮೇನಿಯಾದ ಪ್ರತ್ಯೇಕತವಾದಿ ಅಧಿಕಾರಿಗಳು ಬಿಡುಗಡೆ ಮಾಡಿರುವ ವಿಡಿಯೋ ಫೂಟೇಜ್ ನಲ್ಲಿ ಶಸ್ತ್ರಸಜ್ಜಿತ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಇದರಲ್ಲಿ ಸೈನಿಕರ ಸುಟ್ಟ ಶವಗಳಿರುವುದು ಕಂಡುಬಂದಿದ್ದು, ಇದು ಅಝರ್ ಬೈಜಾನ್ ಸೈನಿಕರ ಶವ ಎಂದು ಹೇಳಿದೆ.

ಸೋವಿಯತ್ ಒಕ್ಕೂಟ ಪತನದ ಬಳಿಕ ಅರ್ಮೇನಿಯಾ ಹಾಗೂ ಅಝರ್ ಬೈಜಾನ್ ಸ್ವತಂತ್ರ ದೇಶಗಳಾಗಿದ್ದವು. ಆದರೆ ನಗೊರ್ನೊ-ಕರಬಾಖ್ ಅಂತರಾಷ್ಟ್ರೀಯವಾಗಿ ಅಝರ್ ಬೈಜಾನ್ ನ ಭಾಗ ಎಂದು ಗುರುತಿಸಲಾಗಿತ್ತು. ಆದರೆ ಇಲ್ಲಿ ಅರ್ಮೇನಿಯಾ ಸಮುದಾಯವೇ ಹೆಚ್ಚಿದೆ. ಅಲ್ಲದೇ ಅರ್ಮೇನಿಯಾಕ್ಕೆ ರಷ್ಯಾದ ಬೆಂಬಲವಿದ್ದು, ಅಝರ್ ಬೈಜಾನ್ ಗೆ ಟರ್ಕಿ ಬೆಂಬಲ ನೀಡಿರುವುದೇ ಸಂಘರ್ಷ ಉಲ್ಬಣಗೊಳ್ಳಲು ಕಾರಣವಾಗಿದೆ ಎಂದು ವರದಿ ತಿಳಿಸಿತ್ತು.

ಇದನ್ನೂ ಓದಿ:ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಅ.28ರಂದು ಚುನಾವಣೆ

ಈ ದೇಶಗಳ ಬಗ್ಗೆ ದಕ್ಷಿಣ ಏಷ್ಯಾ ಯಾವಾಗಲೂ ತನ್ನದೇ ದೃಷ್ಟಿಕೋನ ಹೊಂದಿದೆ. ಭಾರತ ಅರ್ಮೇನಿಯಾ ಹಾಗೂ ಅಝರ್ ಬೈಜಾನ್ ದೇಶಗಳ ನಡುವೆ ಉತ್ತಮ ಬಾಂಧವ್ಯ ಹೊಂದಿದೆ. ಎರಡು ದೇಶಗಳ ನಡುವಿನ ಯುದ್ಧದಿಂದಾಗಿ ಉತ್ತರ ದಕ್ಷಿಣ ಅಂತಾರಾಷ್ಟ್ರೀಯ ಸಾರಿಗೆ ಕಾರಿಡಾರ್ (ಮುಂಬೈ ಟು ಚಾಬಾಹಾರ್ ವಯಾ ಅಝರ್ ಬೈಜಾನ್ ಟು ಮಾಸ್ಕೋ ನ ಭಾರತದ ಮಹತ್ವದ ಸಂಪರ್ಕ ಯೋಜನೆಗೆ ತೊಡಕು ಉಂಟಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

2018ರಲ್ಲಿ ಅಝರ್ ಬೈಜಾನ್ ನಲ್ಲಿನ ಬಾಕುವಿನಲ್ಲಿ ಸಂಭವಿಸಿದ ಅಗ್ನಿ ದುರಂತದ ವೇಳೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಚಿವೆ ಸುಷ್ಮಾ ಸ್ವರಾಜ್ ಅವರು ಭೇಟಿ ನೀಡಿದ್ದರು. ಇಲ್ಲಿನ ದೇವಾಲಯಗಳನ್ನು ಹಿಂದೆ ಹಿಂದೂಗಳು ಮತ್ತು ಝೋರಾಸ್ಟ್ರಿಯನ್ ಸಮುದಾಯ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿತ್ತು. ಬಹುಶಃ ಇವರೆಲ್ಲ ಭಾರತದಿಂದ ಭೇಟಿ ನೀಡುತ್ತಿದ್ದ ವ್ಯಾಪಾರಿಗಳು. ಆದರೆ ಅರ್ಮೇನಿಯಾ ದೇಶದ ವಿಚಾರಕ್ಕೆ ಬಂದರೆ, ಅದು ಹಲವಾರು ಪ್ರಮುಖ ವಿಷಯಗಳಲ್ಲಿ ಭಾರತದ ಬೆಂಬಲಕ್ಕೆ ನಿಲ್ಲುತ್ತದೆ ಎಂದು ವರದಿ ಹೇಳಿತ್ತು.

ಪ್ರತ್ಯೇಕತೆಗಾಗಿ ಹಾತೊರೆಯುತ್ತಿರುವ ನಗೊರ್ನೊ-ಕರಬಾಖ್ ಗಾಗಿ ಎರಡು ದೇಶಗಳ ನಡುವೆ ಯುದ್ಧ ನಡೆದಿದ್ದು, ಸುಮಾರು 23 ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿ ತಿಳಿಸಿತ್ತು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.