“ಕಪ್ಪುಪಟ್ಟಿ’ಯ 14 ಮಂದಿ ಸಚಿವರು!


Team Udayavani, Sep 9, 2021, 6:58 AM IST

“ಕಪ್ಪುಪಟ್ಟಿ’ಯ 14 ಮಂದಿ ಸಚಿವರು!

ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಅಸ್ತಿತ್ವಕ್ಕೆ ಬಂದಿರುವ ತಾಲಿಬಾನ್‌ನ ಮಧ್ಯಾಂತರ ಸರಕಾರದಲ್ಲಿರುವ ಕನಿಷ್ಠ 14 ಸದಸ್ಯರು ವಿಶ್ವಸಂಸ್ಥೆ ಭದ್ರತಾ ಮಂಡಳಿಯ “ಭಯೋತ್ಪಾದಕರ ಪಟ್ಟಿ’ಯಲ್ಲಿರುವವರು!

ವಿಶೇಷವೆಂದರೆ, ಈ ಕಪ್ಪುಪಟ್ಟಿಯಲ್ಲಿರುವ ಉಗ್ರರ ಪೈಕಿ ಪ್ರಧಾನಿ ಮುಲ್ಲಾ ಮೊಹಮ್ಮದ್‌ ಹಸನ್‌ ಅಖುಂದ್‌, ಇಬ್ಬರು ಉಪಪ್ರಧಾನಿಗಳು ಕೂಡ ಸೇರಿದ್ದಾರೆ. ಆಂತರಿಕ ಸಚಿವನಾಗಿ ಆಯ್ಕೆಯಾಗಿರುವ ಜಾಗತಿಕ ಉಗ್ರ ಸಿರಾಜುದ್ದೀನ್‌ ಹಕ್ಕಾನಿ ತಲೆಗೆ 10 ದಶಲಕ್ಷ ಡಾಲರ್‌ ಬಹುಮಾನವನ್ನೂ ಅಮೆರಿಕ ಘೋಷಿಸಿತ್ತು.

ವಲಸೆ ಸಚಿವ, ರಕ್ಷಣ ಸಚಿವ, ವಿದೇಶಾಂಗ ಸಚಿವ ಕೂಡ ಭಯೋತ್ಪಾದಕರ ಪಟ್ಟಿಯಲ್ಲಿ ಸ್ಥಾನ ಪಡೆದವರು. ಒಟ್ಟಾರೆ 33 ಮಂದಿಯಲ್ಲಿ 14 ಮಂದಿ ಕಪ್ಪುಪಟ್ಟಿಯಲ್ಲಿರುವವರು ಎಂದು ಬಿಬಿಸಿ ಉರ್ದು ವರದಿ ಮಾಡಿದೆ. ಇದೇ ವೇಳೆ, “ನಮ್ಮ ದೇಶದಲ್ಲಿನ್ನು ಪಿಎಚ್‌ಡಿ, ಸ್ನಾತಕೋತ್ತರ ಪದವಿಗಳಿಗೆ ಬೆಲೆಯಿಲ್ಲ. ಇಲ್ಲಿ ಶರಿಯಾಗೆ ಮಾತ್ರ ಬೆಲೆ’ ಎಂದು ಹೊಸ ಶಿಕ್ಷಣ ಸಚಿವ ಘೋಷಿಸಿದ್ದಾನೆ.

200 ಅಫ್ಘನ್ನರು ಗಡಿಪಾರು: ತಾಲಿಬಾನ್‌ ಆಡಳಿತಕ್ಕೆ ಹೆದರಿ ಪಾಕಿಸ್ಥಾನಕ್ಕೆ ವಲಸೆ ಬಂದಿದ್ದ ಸುಮಾರು 200 ಅಫ್ಘಾನ್‌ ನಾಗರಿಕರನ್ನು ಬುಧವಾರ ಪಾಕ್‌ ಸರಕಾರ ಅಫ್ಘಾನಿಸ್ಥಾನಕ್ಕೆ ಗಡಿಧೀಪಾರು ಮಾಡಿದೆ. ಮಕ್ಕಳು, ಮಹಿಳೆಯರು ಸೇರಿ 200 ಮಂದಿ ಹೇಗೋ ಪಾಕ್‌ ಗಡಿಯೊಳಗೆ ನುಸುಳಿ, ರೈಲ್ವೆ ಹಳಿಗಳ ಮೇಲೆ ವಾಸ್ತವ್ಯ ಹೂಡಿದ್ದರು. ಅವರನ್ನು ಅಲ್ಲಿಂದಲೇ ವಾಪಸ್‌ ಕಳುಹಿಸಲಾಗಿದೆ.

ಅಫ್ಘಾನ್ ಸ್ಥಿತಿ ಕುರಿತು ಚರ್ಚೆ: ಬುಧವಾರ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಮತ್ತು ರಷ್ಯಾ ಎನ್‌ ಎಸ್‌ಎ ಜ| ನಿಕೋಲೆ ಪಟ್ರಾಶೆವ್‌ ಹೊಸದಿಲ್ಲಿಯಲ್ಲಿ ಮಾತುಕತೆ ನಡೆಸಿದ್ದು, ಅಫ್ಘಾನ್‌ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ತಾಲಿಬಾನ್‌ ಆಡಳಿತದಿಂದ ಭದ್ರತಾ ಅಪಾಯ ಉಂಟಾಗಬಹುದೇ ಎಂಬ ಬಗ್ಗೆಯೂ ಚರ್ಚೆ ನಡೆದಿದೆ.

ಪಾಕ್‌ ವಿರುದ್ಧ ಭಾರತ ಕಿಡಿ: ತನ್ನ ದೇಶದಲ್ಲಿ ಮಾತ್ರವಲ್ಲದೇ ಬೇರೆ ದೇಶಗಳಲ್ಲೂ “ಹಿಂಸೆಯ ಸಂಸ್ಕೃತಿ’ಯನ್ನು ಪಾಕಿಸ್ಥಾನ ಪಸರಿಸುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಕಿಡಿಕಾರಿದೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.