ಮೆಕ್ಸಿಕೋ ಅಗ್ನಿ ದುರಂತ: 40 ಜನರ ದುರ್ಮರಣ
Team Udayavani, Mar 29, 2023, 5:42 AM IST
ಮೆಕ್ಸಿಕೋ ಸಿಟಿ: ಅಮೆರಿಕ ಹಾಗೂ ಮೆಕ್ಸಿಕೋ ಗಡಿಯಲ್ಲಿರುವ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ಮೃತರಾಗಿದ್ದಾರೆ.
28 ಮಂದಿ ಗಾಯಗೊಂಡಿದ್ದಾರೆ. ಸಿಯುಡಾಡ್ ಜುವೆರಾಜ್ನಲ್ಲಿರುವ ಕೇಂದ್ರದಲ್ಲಿ ಬೆಂಕಿ ಕೆನ್ನಾಲಿಗೆ ಚಾಚಿದ್ದು, ದೇಶದಲ್ಲಿ ಈವರೆಗೆ ಘಟಿಸಿದ ಅತಿದೊಡ್ಡ ದುರಂತ ಇದಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳಗಳು ಪ್ರಯತ್ನಿಸಿದರೂ ಈ ಮಟ್ಟದ ಸಾವು ನೋವು ವರದಿಯಾಗಿದೆ.
ವಲಸಿಗರು ತಮ್ಮನ್ನು ಗಡೀಪಾರು ಮಾಡಬಹುದೆನ್ನುವ ಭೀತಿಯಿಂದ ಹಾಸಿಗೆಗಳು ಸುಟ್ಟು ಹಾಕಿ ಪ್ರತಿಭಟನೆ ನಡೆಸಿದ್ದಾರೆ ಎಂದು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಹೇಳಿದ್ದಾರೆ.
ಬೆಂಕಿ ಕಾಣಿಸಿಕೊಂಡು ಹೊಗೆ ದಟ್ಟನೆ ಕಂಡರೂ ಭದ್ರತಾ ಸಿಬ್ಬಂದಿ ಸೆಲ್ ಗಳನ್ನು ತೆರೆಯುವ ಬದಲು ದೂರ ಓಡಿಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಲಸಿಗರನ್ನು ಸಣ್ಣ ಸೆಲ್ ನಲ್ಲಿ ಹಾಕಲಾಗಿದೆ. ಇಡೀ ದಿನ ಅವರಿಗೆ ಕುಡಿಯಲು ನೀರು ಸಿಗುತ್ತಿರಲಿಲ್ಲ ಎನ್ನುವ ಕಾರಣದಿಂದ ಅವರು ಪ್ರತಿಭಟನೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗ್ವಾಟೆಮಾಲಾ, ಹೊಂಡುರಾಸ್, ಎಲ್ ಸಾಲ್ವಡಾರ್, ವೆನೆಜುವೆಲಾ, ಕೊಲಂಬಿಯಾ ಮತ್ತು ಈಕ್ವೆಡಾರ್ ದೇಶದ ಪ್ರಜೆಗಳು ಮೃತ ಹಾಗೂ ಗಾಯಗೊಂಡವರು ಎನ್ನಲಾಗಿದೆ.
ಬೆಂಕಿ ಕಾಣಿಸಿಕೊಳ್ಳುವ ಸಂದರ್ಭದಲ್ಲಿ ಮಧ್ಯ ಹಾಗೂ ದಕ್ಷಿಣ ಅಮೆರಿಕದ 68 ಮಂದಿ ಕೇಂದ್ರದಲ್ಲಿದ್ದರು. ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
🔴MEXICO :#VIDEO LEAKED IMAGES FROM FIRE AT MIGRANT FACILITY IN CIUDAD JUAREZ REVEAL TERRIFYING SCENES
Migrants were locked up & were not let out.
39 Migrants killed,dozens injured. #BreakingNews #UltimaHora #CiudadJuarez #Migrants #Migrantes #Fire #Incendio pic.twitter.com/QU4gfc5McD— LoveWorld (@LoveWorld_Peopl) March 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ