ಕಾಬೂಲ್ ಶಿಕ್ಷಣ ಸಂಸ್ಥೆಯ ಬಳಿ ಆತ್ಮಾಹುತಿ ದಾಳಿ: 18 ಜನರ ಸಾವು, 57 ಜನರಿಗೆ ಗಾಯ
Team Udayavani, Oct 25, 2020, 9:46 AM IST
ಕಾಬೂಲ್: ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದ ಆತ್ಮಾಹುತಿ ಉಗ್ರ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದು, 57 ಜನರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಪಶ್ಚಿಮ ಕಾಬೂಲ್ನ ಡ್ಯಾಶ್-ಎ-ಬಾರ್ಚಿಯ ಶಿಯಾ ಶಿಕ್ಷಣ ಕೇಂದ್ರದ ಹೊರಗೆ ಈ ಸ್ಪೋಟ ಸಂಭವಿಸಿದೆ. ದಾಳಿಕೋರನು ಶಿಕ್ಷಣ ಕೇಂದ್ರಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಭದ್ರತಾ ಸಿಬ್ಬಂದಿ ತಡೆದರು. ಈ ವೇಳೆ ಸ್ಪೋಟ ನಡೆದಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಏರಿಯನ್ ಹೇಳಿದ್ದಾರೆ.
ಯಾವುದೇ ಭಯೋತ್ಪಾದಕ ಗುಂಪು ಈ ಬಾಂಬ್ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ದಾಳಿಯಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಉಗ್ರ ಸಂಘಟನೆ ತಾಲಿಬಾನ್ ಹೇಳಿಕೊಂಡಿದೆ.
ದಾಳಿಯಲ್ಲಿ ಇದುವರೆಗೆ 18 ಮಂದಿ ಅಸುನೀಗಿದ್ದು, 57 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ರಾಜಧಾನಿಯ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ.
ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆಯೊಂದು ಆಗಸ್ಟ್ 2018 ರಲ್ಲಿ ಶಿಕ್ಷಣ ಕೇಂದ್ರವೊಂದರಲ್ಲಿ ಇದೇ ರೀತಿಯ ಆತ್ಮಹತ್ಯಾ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಆ ದಾಳಿಯಲ್ಲಿ 34 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ