ಕಾಬೂಲ್‌ ವಿ.ವಿ. ರಕ್ತಪಾತ: 25 ಸಾವು; ಕ್ಯಾಂಪಸ್‌ಗೆ ನುಗ್ಗಿದ ಉಗ್ರರ ಪೈಶಾಚಿಕ ಕೃತ್ಯ


Team Udayavani, Nov 2, 2020, 10:26 PM IST

Kabulu

ಕಾಬೂಲ್‌: ಅಫ್ಘಾನಿಸ್ಥಾನದ ಉನ್ನತ ಶಿಕ್ಷಣದ ಪ್ರಧಾನ ಕೇಂದ್ರ ಕಾಬೂಲ್‌ ವಿಶ್ವವಿದ್ಯಾನಿಲಯದ ಆವರಣಕ್ಕೆ ಉಗ್ರರು ಲಗ್ಗೆ ಹಾಕಿ ಎಂಟು ಮಂದಿ ವಿದ್ಯಾರ್ಥಿಗಳ ಸಹಿತ 25 ಮಂದಿಯನ್ನು ಹತ್ಯೆಗೈದ್ದಾರೆ. ಬರೋಬ್ಬರಿ ಆರು ತಾಸುಗಳ ಕಾಲ ನಡೆದ ದಾಳಿ, ಗುಂಡಿನ ಚಕಮಕಿ ಸೋಮವಾರ ಸಂಜೆಯ ವೇಳೆಗೆ ಮುಕ್ತಾಯವಾಗಿದೆ. ದಾಳಿಗೆ ಕಾರಣರಾಗಿರುವ ಮೂವರು ಉಗ್ರರನ್ನೂ ಕೊಲ್ಲಲಾಗಿದೆ ಎಂದು ಅಲ್ಲಿನ ಗೃಹ ಸಚಿವಾಲಯ ತಿಳಿಸಿದೆ. ವಿ.ವಿ.ಯ ಆವರಣದಲ್ಲಿ ಪುಸ್ತಕ ಪ್ರದರ್ಶನ ಆಯೋಜಿಸಲಾಗಿತ್ತು. ಅದರಲ್ಲಿ ಅಫ್ಘಾನಿಸ್ಥಾನದಲ್ಲಿರುವ ಇರಾನ್‌ ರಾಯಭಾರಿ ಕೂಡ ಪಾಲ್ಗೊಂಡಿರುವಂತೆಯೇ ಉಗ್ರರು ಈ ಕುಕೃತ್ಯ ನಡೆಸಿದ್ದಾರೆ.

ಬೆಳಗ್ಗೆ 11 ಗಂಟೆಗೆ ವಿ.ವಿ. ಆವರಣದೊಳಕ್ಕೆ ಮೂವರು ಉಗ್ರರು ನುಗ್ಗಿದ್ದರು. ಪ್ರತ್ಯಕ್ಷದರ್ಶಿ ವಿದ್ಯಾರ್ಥಿ ನೀಡಿದ ಮಾಹಿತಿ ಪ್ರಕಾರ ಅವರು ಪಿಸ್ತೂಲ್‌, ಎ.ಕೆ. 56 ಬಂದೂಕುಗಳನ್ನು ಹಿಡಿದು ಗುಂಡು ಹಾರಿಸುತ್ತಾ ಒಳನುಗ್ಗಿದ್ದರು. “ನನ್ನ 14 ಮಂದಿ ಸಹಪಾಠಿಗಳು ಒಂದೋ ಸಾವಿಗೀಡಾಗಿದ್ದಾರೆ ಇಲ್ಲವೇ ಗಾಯಗೊಂಡಿದ್ದಾರೆ’ ಎಂದು ಈ ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಉಗ್ರರು ವಿ.ವಿ.ಯ ಪೂರ್ವ ಭಾಗದಿಂದ ಪ್ರವೇಶಿಸಿದ್ದರು. ಇದೇ ಸಂದರ್ಭದಲ್ಲಿ ಒಂದು ಸ್ಫೋಟವೂ ನಡೆದಿದ್ದು, ಅದರಲ್ಲಿ ಎಂಟು ಮಂದಿ ಅಸುನೀಗಿದ್ದಾರೆ. ಘಟನೆ ವೇಳೆ ಕ್ಯಾಂಪಸ್‌ನಲ್ಲಿ ಸುಮಾರು 17 ಸಾವಿರ ಮಂದಿ ವಿದ್ಯಾರ್ಥಿಗಳು ಇದ್ದರು.

ವಿ.ವಿ. ಆವರಣದಲ್ಲಿ ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ಹಲವು ಗಣ್ಯರಿದ್ದರು. ಆದರೆ ಅಫ್ಘಾನ್‌ ಸರಕಾರ ಮಾತ್ರ ಈ ಬಗ್ಗೆ ಮೌನವಾಗಿಯೇ ಉಳಿದಿದೆ. ದಾಳಿ ಇರಾನ್‌ ರಾಯಭಾರಿಯನ್ನೇ ಗುರಿಯಾಗಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. 1998ರಲ್ಲಿ ಇರಾನ್‌ನ 9 ಮಂದಿ ರಾಜತಾಂತ್ರಿಕರು ಅಫ್ಘಾನ್‌ನಲ್ಲಿ ಅಸುನೀಗಿದ್ದರು. ಅದಕ್ಕೆ ತಾಲಿಬಾನ್‌ ಕಾರಣವೆಂದು ಇರಾನ್‌ ಆರೋಪಿಸಿತ್ತು.

ಹತ್ತು ದಿನಗಳ ಹಿಂದೆ ಇಸ್ಲಾಮಿಕ್‌ ಸ್ಟೇಟ್‌ನ ಆತ್ಮಹತ್ಯಾ ಬಾಂಬರ್‌ ಶಿಕ್ಷಣ ಸಂಸ್ಥೆಯೊಂದರ ಮೇಲೆ ದಾಳಿ ನಡೆಸಿ 24 ಮಂದಿ ವಿದ್ಯಾರ್ಥಿಗಳ ಸಾವಿಗೆ ಕಾರಣನಾಗಿದ್ದ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.