ಆಸ್ಟ್ರೇಲಿಯಾದ ಇಂದಿನ ಪ್ರಮುಖ ಪತ್ರಿಕೆಗಳ ಪೇಜ್ ಒನ್ ಖಾಲಿ ಖಾಲಿ!


Team Udayavani, Oct 21, 2019, 6:25 PM IST

Blank-Paper-730

ಸಿಡ್ನಿ: ಸೋಮವಾರ ಆಸ್ಟ್ರೇಲಿಯಾದ ಪ್ರಮುಖ ದಿನಪತ್ರಿಕೆಗಳನ್ನು ನೋಡಿದವರಿಗೆ ಒಂದು ಅಚ್ಚರಿ ಕಾದಿತ್ತು. ಈ ಪತ್ರಿಕೆಗಳ ಮೊದಲನೇ ಪುಟದಲ್ಲಿ ಯಾವುದೇ ಸುದ್ದಿ ಮುದ್ರಣಗೊಂಡಿರಲಿಲ್ಲ. ಸುಮ್ಮನೇ ಕಪ್ಪುಗೆರೆಯನ್ನು ಎಳೆದು ಬಲಗಡೆ ಮೇಲ್ಭಾಗದಲ್ಲಿ ಕೆಂಪು ಬಣ್ಣದಲ್ಲಿ ‘ಸೀಕ್ರೆಟ್’ ಎಂದು ಮಾತ್ರವೇ ಬರೆಯಲಾಗಿತ್ತು.
ಅಲ್ಲಿನ ಸರಕಾರದ ಗೌಪ್ಯತೆ ಪಾಲನಾ ನೀತಿ ಹಾಗೂ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಕ್ರಮದ ವಿರುದ್ಧ ಸಿಡಿದೆದ್ದ ಪತ್ರಿಕೆಗಳು ಈ ವಿಶಿಷ್ಟ ರೀತಿಯ ಪ್ರತಿಭಟನೆಯನ್ನು ಸರಕಾರದ ವಿರುದ್ಧ ವ್ಯಕ್ತಪಡಿಸಿದವು.

ದಿ ಆಸ್ಟ್ರೇಲಿಯನ್, ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಮತ್ತು ದಿ ಆಸ್ಟ್ರೇಲಿಯನ್ ಫೈನಾನ್ಷಿಯಲ್ ರಿವ್ಯೂ ಸೇರಿದಂತೆ ಇಲ್ಲಿನ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪತ್ರಿಕೆಗಳ ಮೊದಲನೇ ಪುಟಗಳಲ್ಲಿ ಸುದ್ದಿಗಳು ಮುಷ್ಕರ ಹೂಡಿದ್ದವು. ಇನ್ನು ಆಸ್ಟ್ರೇಲಿಯಾದ್ಯಂತ ಟಿ.ವಿ. ಚಾನೆಲ್ ಗಳಲ್ಲಿ ಕೇವಲ ಜಾಹೀರಾತುಗಳನ್ನು ಮಾತ್ರವೇ ಪ್ರಸಾರ ಮಾಡಲಾಯಿತು. ‘ಸರಕಾರವು ನಿಮ್ಮಿಂದ ಸತ್ಯವನ್ನು ಮುಚ್ಚಿಟ್ಟಾಗ, ನಾವು ಏನನ್ನು ಪ್ರಸಾರ ಮಾಡೋಣ?’ ಎಂಬ ಪ್ರಶ್ನೆಯನ್ನೂ ಸಹ ಇದೇ ಸಂದರ್ಭದಲ್ಲಿ ವೀಕ್ಷಕರಿಗೆ ಕೇಳಲಾಯಿತು.

ರಾಷ್ಟ್ರೀಯ ಸುದ್ದಿ ಪ್ರಸಾರ ಮಾಧ್ಯಮ ಎಬಿಸಿ ಮತ್ತು ಸುದ್ದಿ ಸಂಸ್ಥೆಯೊಂದರ ಪತ್ರಕರ್ತರ ಮೇಲೆ ಈ ವರ್ಷಾರಂಭದಲ್ಲಿ ನಡೆದಿದ್ದ ಫೆಡರಲ್ ಪೊಲೀಸರ ದಾಳಿಯನ್ನು ಖಂಡಿಸಿ ರೈಟ್ ಟು ನೋ ಒಕ್ಕೂಟ ಈ ಅಭಿಯಾನಕ್ಕೆ ಚಾಲನೆ ನೀಡಿತ್ತು. ಸರಕಾರಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಎರಡು ಸುದ್ದಿಗಳು ಪ್ರಸಾರವಾಗಿದ್ದ ಕಾರಣಕ್ಕೆ ಸರಕಾರ ಈ ಪೊಲೀಸ್ ದಾಳಿಗಳನ್ನು ನಡೆಸಿತ್ತು ಎನ್ನುವುದು ಮಾದ್ಯಮಗಳ ಆರೋಪವಾಗಿತ್ತು.

ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸುವುದನ್ನು ಸುಲಭವಾಗಿ ತಡೆಯಬಲ್ಲ ಕಠಿಣ ರಾಷ್ಟ್ರೀಯ ಭದ್ರತಾ ಕಾನೂನಿನಿಂದ ಪತ್ರಕರ್ತರಿಗೆ ವಿನಾಯಿತಿ ಸೇರಿದಂತೆ ಒಟ್ಟು ಆರು ಬೇಡಿಕೆಗಳನ್ನು ಮಾಧ್ಯಮ ಸಮೂಹಗಳ ಈ ಒಕ್ಕೂಟ ಸರಕಾರದ ಮುಂದಿರಿಸಿದೆ.
ಪೊಲೀಸರ ದಾಳಿಯ ಬಳಿಕ ಮೂವರು ಪತ್ರಕರ್ತರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.