ಆರ್ಟಿಸನ್ ಟೆರರ್ ಅಟ್ಯಾಕ್ ಪ್ರಕರಣ;7ಮಂದಿಗೆ ಗಲ್ಲು ಶಿಕ್ಷೆ, ಓರ್ವ ಖುಲಾಸೆ; ಬಾಂಗ್ಲಾ ಕೋರ್ಟ್
Team Udayavani, Nov 27, 2019, 3:32 PM IST
ಢಾಕಾ:2016ರಲ್ಲಿ ಬಾಂಗ್ಲಾದೇಶದಲ್ಲಿ ಸಂಭವಿಸಿದ್ದ ಆರ್ಟಿಸನ್ ಕೆಫೆ ಮೇಲಿನ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಢಾಕಾ ವಿಶೇಷ ಭಯೋತ್ಪಾದನಾ ನಿಗ್ರಹ ಕೋರ್ಟ್ ಏಳು ಆರೋಪಿಗಳಿಗೆ ಗಲ್ಲುಶಿಕ್ಷೆಯನ್ನು ನೀಡಿದ್ದು, ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿರುವುದಾಗಿ ವರದಿ ತಿಳಿಸಿದೆ.
ಬಾಂಗ್ಲಾದೇಶಿ ಮಾಧ್ಯಮದ ವರದಿ ಪ್ರಕಾರ, ವಿಶೇಷ ಭಯೋತ್ಪಾದನಾ ನಿಗ್ರಹ ಕೋರ್ಟ್ ನ ಜಡ್ಜ್ ಮೊಹಮ್ಮದ್ ಮೋಜಿಬುರ್ ರಹಮಾನ್ ತೀರ್ಪನ್ನು ಪ್ರಕಟಿಸಿರುವುದಾಗಿ ಹೇಳಿದೆ.
2016ರಲ್ಲಿ ಕೆಫೆ ಮೇಲೆ ದಾಳಿ ನಡೆದ ಘಟನೆಯಲ್ಲಿ 17 ಮಂದಿ ವಿದೇಶಿಯರು ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದರು. ಉಗ್ರರು ಕೆಫೆಯಲ್ಲಿನ ಗ್ರಾಹಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದ ಸಂದರ್ಭದಲ್ಲಿ ಆರ್ಮಿ ಕಮಾಂಡೋಗಳು ಕಾರ್ಯಾಚರಣೆ ನಡೆಸುವ ಮೊದಲು ಎನ್ ಕೌಂಟರ್ ನಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದರು.
ದಾಳಿ ಪ್ರಕರಣದಲ್ಲಿ ಜಹಾಂಗೀರ್ ಹುಸೈನ್ ಅಲಿಯಾಸ್ ರಾಜೀವ್ ಗಾಂಧಿ, ರಾಕಿಬುಲ್ ಹಸನ್ ರೇಗಾನ್, ಅಸ್ಲಾಮ್ ಹುಸೈನ್ ಅಲಿಯಾಸ್ ರಶೀದುಲ್ ಇಸ್ಲಾಮ್ ಅಲಿಯಾಸ್ ರಾಶ್, ಅಬ್ದುಸ್ ಸಾಬುರ್ ಖಾನ್ ಅಲಿಯಾಸ್ ಸೋಹೈಲ್ ಮುಹ್ ಫೂಝ್, ಹಾದಿಸುರ್ ರಹಮಾನ್ ಸಾಗರ್, ಷರೀಫುಲ್ ಇಸ್ಲಾಮ್ ಖಾಲೀದ್ ಅಲಿಯಾಸ್ ಖಾಲೀದ್ ಮತ್ತು ಮಾಮುನೌರ್ ರಶೀದ್ ರಿಪೋನ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವುದಾಗಿ ಬಾಂಗ್ಲಾದೇಶ್ ನ್ಯೂಸ್ 24 ತಿಳಿಸಿದೆ.
ಪ್ರಕರಣದಲ್ಲಿ ಮಿಝಾನೌರ್ ರಹಮಾನ್ ಅಲಿಯಾಸ್ ಬೋರೊ ಮಿಝಾನ್ ನನ್ನು ಕೋರ್ಟ್ ಖುಲಾಸೆಗೊಳಿಸಿದೆ. ತೀರ್ಪಿನ ಹಿನ್ನೆಲೆಯಲ್ಲಿ ಬುಧವಾರ ಕೋರ್ಟ್ ಆವರಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 2018ರ ನವೆಂಬರ್ 26ರಿಂದ ವಿಚಾರಣೆ ಆರಂಭಗೊಂಡಿತ್ತು. ಪ್ರಾಸಿಕ್ಯೂಷನ್ ವಕೀಲರು ಎಲ್ಲಾ ಎಂಟು ಮಂದಿ ಆರೋಪಿಗಳಿಗೆ ಗರಿಷ್ಠ ಪ್ರಮಾಣದ ಶಿಕ್ಷೆಯನ್ನು ವಿಧಿಸಬೇಕೆಂದು ವಾದ ಮಂಡಿಸಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!