4 ದಶಕದ ಹಿಂದಿನ ಕ್ರಾಂತಿ!ಮುಜಿಬುರ್ ಹತ್ಯಾ ದೋಷಿ ನಿವೃತ್ತ ಸೇನಾ ಕ್ಯಾಪ್ಟನ್ ಗೆ ಮರಣದಂಡನೆ

1998ರಲ್ಲಿ ಅಬ್ದುಲ್ ಮಜೀದ್ ಸೇರಿದಂತೆ 12 ಮಂದಿ ಇತರ ಸೇನಾ ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ ಜಾರಿಗೊಳಿಸಿತ್ತು.

Team Udayavani, Apr 12, 2020, 11:07 AM IST

ಮುಜಿಬುರ್ ಹತ್ಯಾ ದೋಷಿ ನಿವೃತ್ತ ಸೇನಾ ಕ್ಯಾಪ್ಟನ್ ಗೆ ಮರಣದಂಡನೆ

Sheikh Mujibur Rahman

ಢಾಕಾ:ಬಾಂಗ್ಲಾದೇಶದ ಸಂಸ್ಥಾಪಕ ಮುಖಂಡ ಶೇಖ್ ಮುಜಿಬುರ್ ರೆಹಮಾನ್ ಅವರನ್ನು ಹತ್ಯೆಗೈದ ಪ್ರಕರಣ ನಡೆದು ನಾಲ್ಕು ದಶಕಗಳ ಹಿಂದೆ ಅಪರಾಧಿಯಾಗಿದ್ದ ಮಿಲಿಟರಿ ಕ್ಯಾಪ್ಟನ್ ನನ್ನು ಬಾಂಗ್ಲಾದೇಶ ಗಲ್ಲಿಗೇರಿಸಿರುವುದಾಗಿ ಭಾನುವಾರ ಬಾಂಗ್ಲಾ ಸಚಿವರು ತಿಳಿಸಿದ್ದಾರೆ.

ಶೇಖ್ ಮುಜಿಬುರ್ ರೆಹಮಾನ್ ಅವರು ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ತಂದೆ. ಪಾಕಿಸ್ತಾನದಿಂದ ಪ್ರತ್ಯೇಕಗೊಂಡ ಬಾಂಗ್ಲಾದೇಶ ಸ್ವಾತಂತ್ರ್ಯ ಪಡೆದುಕೊಂಡ ನಾಲ್ಕು ವರ್ಷಗಳ ನಂತರ 1975ರ ಆಗಸ್ಟ್ 15ರಂದು ಕ್ಷಿಪ್ರಕ್ರಾಂತಿಯ ಸೇನಾ ದಂಗೆಯಲ್ಲಿ ಮುಜಿಬುರ್ ರಹಮಾನ್ ಅವರನ್ನು ಹತ್ಯೆಗೈಯಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆದು 1998ರಲ್ಲಿ ಅಬ್ದುಲ್ ಮಜೀದ್ ಸೇರಿದಂತೆ 12 ಮಂದಿ ಇತರ ಸೇನಾ ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ ಜಾರಿಗೊಳಿಸಿತ್ತು. ಆದರೆ ಅಬ್ದುಲ್ ಮಜೀದ್ ವಿಚಾರಣೆ ನಡೆಯುವ ಮುನ್ನ ಭಾರತಕ್ಕೆ ಪರಾರಿಯಾಗಿದ್ದ. ಮಜೀದ್ ನನ್ನು ತಮಗೊಪ್ಪಿಸುವಂತೆ ಬಾಂಗ್ಲಾದೇಶ ಮನವಿ ಮಾಡಿಕೊಂಡಿತ್ತು.

2009ರಲ್ಲಿ ಬಾಂಗ್ಲಾದೇಶ ಸುಪ್ರೀಂಕೋರ್ಟ್ ಮರಣದಂಡನೆ ತೀರ್ಪನ್ನು ಎತ್ತಿಹಿಡಿದಿತ್ತು. ಕೆಲವು ತಿಂಗಳ ಬಳಿಕ ಐವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿತ್ತು.

ಮಂಗಳವಾರ ಭಯೋತ್ಪಾದಕ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಮುಂಜಾನೆ ಢಾಕಾದಲ್ಲಿ ರಿಕ್ಷಾದಲ್ಲಿ ಆಗಮಿಸುತ್ತಿದ್ದ ಮಜೀದ್ ನನ್ನು ಬಂಧಿಸಿದ್ದರು. ಮಜೀದ್ ನ ಮರಣದಂಡನೆ ಶಿಕ್ಷೆಯ ಕ್ಷಮಾದಾನ ಅರ್ಜಿಯನ್ನು ಬಾಂಗ್ಲಾ ಅಧ್ಯಕ್ಷ ತಿರಸ್ಕರಿಸಿದ್ದರು ಎಂದು ವರದಿ ತಿಳಿಸಿದೆ.

1996ರಲ್ಲಿ ಮಜೀದ್ ಭಾರತಕ್ಕೆ ಪರಾರಿಯಾಗಿದ್ದ ಎಂದು ಶಂಕಿಸಲಾಗಿತ್ತು. ಮಜೀದ್ ಕಳೆದ ತಿಂಗಳು ಬಾಂಗ್ಲಾದೇಶಕ್ಕೆ ವಾಪಸ್ ಆಗಿದ್ದು, ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಕಲೆ ಹಾಕಿತ್ತು ಎಂದು ವರದಿ ವಿವರಿಸಿದೆ.

ಅಬ್ದುಲ್ ಮಜೀದ್ ನನ್ನು ಸ್ಥಳೀಯ ಸಮಯ 12.01ಕ್ಕೆ ಗಲ್ಲಿಗೇರಿಸಲಾಗಿತ್ತು. ಢಾಕಾದ ಹೊರವಲಯದ ಕೇರಾನ್ ಗಂಜ್ ನಲ್ಲಿರುವ ಢಾಕಾ ಸೆಂಟ್ರಲ್ ಜೈಲ್ ನಲ್ಲಿ ಗಲ್ಲಿಗೇರಿಸಲಾಗಿದ್ದು, 12.15ಕ್ಕೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು ಎಂದು ಕಾನೂನು ಸಚಿವ ಅನಿಸುಲ್ ಹಖ್ ಪಿಟಿಐಗೆ ತಿಳಿಸಿದ್ದಾರೆ.

ಜೈಲಿನ ಮುಂಭಾಗ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸೆಂಟ್ರಲ್ ಜೈಲಿನ ಇನ್ಸ್ ಪೆಕ್ಟರ್ ಜನರಲ್ ಎಕೆಎಂ ಮೋಸ್ತಾಫಾ ಕಮಲ್ ಪಾಶಾ, ಮಜೀದ್ ನನ್ನು ಗಲ್ಲಿಗೇರಿಸಿದ್ದು, ಇದೀಗ ಶವವನ್ನು ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.