ಪೌರತ್ವ ತಿದ್ದುಪಡಿ ಮಸೂದೆ;ಭಾರತ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ ಬಾಂಗ್ಲಾ ವಿದೇಶಾಂಗ ಸಚಿವ
ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದರಿಂದ ಭೇಟಿಯನ್ನು ರದ್ದು
Team Udayavani, Dec 12, 2019, 3:27 PM IST
ಢಾಕಾ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಭಾರತದ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ವಿದೇಶಾಂಗ ಸಚಿವಾಲಯಗಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಾಂಗ್ಲಾ ವಿದೇಶಾಂಗ ಸಚಿವ ಎಕೆ ಅಬ್ದುಲ್ ಭಾಗವಹಿಸಬೇಕಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದರಿಂದ ಭೇಟಿಯನ್ನು ರದ್ದುಪಡಿಸಿರುವುದಾಗಿ ವರದಿ ವಿವರಿಸಿದೆ.
ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ ಪ್ರಕಾರ ಬಾಂಗ್ಲಾದೇಶ ಸೇರಿದಂತೆ ನೆರೆಯ ಮೂರು ದೇಶಗಳ ಮುಸ್ಲಿಮೇತರ ವಲಸಿಗ ನಿರಾಶ್ರಿತರಿಗೆ ಭಾರತದ ಕಾಯಂ ಪೌರತ್ವ ನೀಡಲಿದೆ.
ಬಾಂಗ್ಲಾ ವಿದೇಶಾಂಗ ಸಚಿವರ ಭಾರತದ ಭೇಟಿ ಈಗ ರದ್ದುಗೊಳಿಸಲಾಗಿದೆ. ಮುಂದಿನ ಭೇಟಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಬೆಳವಣಿಗೆ ಕುರಿತು ನಿಕಟವರ್ತಿಯೊಬ್ಬರು ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ