ಬಾಂಗ್ಲಾದೇಶ ಧಗಧಗ; ದೇಗುಲ ಧ್ವಂಸ, ಹಿಂದೂ ಮನೆಗಳಿಗೆ ಬೆಂಕಿ
ಫೇಸ್ಬುಕ್ನಲ್ಲಿ ಈ ಬಗ್ಗೆ ಚರ್ಚೆಗಳು ಶುರುವಾದ ಬಳಿಕ ಶನಿವಾರ ಜಿಲ್ಲೆಯಲ್ಲಿ ತ್ವೇಷಮಯ ವಾತಾವರಣ ಸೃಷ್ಟಿಯಾಯಿತು
Team Udayavani, Nov 3, 2020, 10:42 AM IST
ಢಾಕಾ/ಕೋಲ್ಕತಾ: ಬಾಂಗ್ಲಾದೇಶದ ಕೊಮಿಲ್ಲಾ ಜಿಲ್ಲೆಯಲ್ಲಿ ಹಿಂದೂಗಳ ಮನೆಗಳ ಮೇಲೆ ಕಿಡಿಗೇಡಿಗಳು ನುಗ್ಗಿ ದಾಂಧಲೆ ನಡೆಸಿ, ಸಿಕ್ಕ ಸಿಕ್ಕ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಫೇಸ್ ಬುಕ್ನಲ್ಲಿ ಇಸ್ಲಾಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂಬ ಕಾರಣಕ್ಕೆ ಈ ಕೃತ್ಯವೆಸಗಲಾಗಿದೆ. ಫ್ರಾನ್ಸ್ನಲ್ಲಿ ನೆಲೆಸಿರುವ ಬಾಂಗ್ಲಾ ದೇಶದ ವ್ಯಕ್ತಿಯೊಬ್ಬರು ಅಲ್ಲಿನ ಅಧ್ಯಕ್ಷ ಇಮಾನ್ಯುವೆಲ್ ಮ್ಯಾಕ್ರನ್ ಅಮಾನವೀಯ ಸಿದ್ಧಾಂತಗಳ
ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಫೇಸ್ಬುಕ್ನಲ್ಲಿ ಈ ಬಗ್ಗೆ ಚರ್ಚೆಗಳು ಶುರುವಾದ ಬಳಿಕ ಶನಿವಾರ ಜಿಲ್ಲೆಯಲ್ಲಿ ತ್ವೇಷಮಯ ವಾತಾವರಣ ಸೃಷ್ಟಿಯಾಯಿತು. ಇದರಿಂದ ಕ್ರುದ್ಧಗೊಂಡ ಕೆಲ ಕಿಡಿಗೇಡಿಗಳು ಜಿಲ್ಲೆಯಲ್ಲಿರುವ ಹಿಂದೂಗಳ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಧಾರ್ಮಿಕ ನಂಬಿಕೆಗಳ ಮೇಲೆ ಧಕ್ಕೆ ತಂದ ಆರೋಪ ಹೊರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ಅಬುಲ್ ಫಝಲ್ ಮಿರ್ ತಿಳಿಸಿದ್ದಾರೆ.
ಸ್ಥಳೀಯರೇ ಈ ಕೃತ್ಯವೆಸಗಿದ್ದಾರೆ. ಒಟ್ಟು 15 ದೇಗುಲಗಳನ್ನು ಧ್ವಂಸಗೊಳಿಸಲಾಗಿದೆ. ಬ್ರಾಹ್ಮಣ್ಬಹಿಯಾ ಜಿಲ್ಲೆಯ ನರಸಿಂಗಪುರದಲ್ಲಿರುವ ದೇಗುಲಗಳು ಮತ್ತು ಹಿಂದೂಗಳ 100 ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ ಮತ್ತು ಅವುಗಳಿಗೆ ಬೆಂಕಿ ಹಚ್ಚಲಾಗಿದೆ.
ಇದನ್ನೂ ಓದಿ:ಭೀಮಾ ತೀರದ ಗುಂಡಿನ ದಾಳಿ ಪ್ರಕರಣ: ಭೈರಗೊಂಡ ಕಾರು ಚಾಲಕ ಸಾವು
ಘಟನೆ ನಡೆದ ನರಸಿಂಗಪುರ ಮತ್ತು ಮಾಧವಪುರಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಗ್ಲಾದೇಶ ಗಡಿ ಭದ್ರತಾ ಪಡೆಯ ಯೋಧರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನ ಸೂತ್ರಧಾರನ್ನೂ ಬಂಧಿಸಲಾಗಿದೆ ಮತ್ತು ಸ್ಥಳೀಯ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಆತನನ್ನು ಜೈಲಿಗೆ ಕಳುಹಿಸಲಾಗಿದೆ.
ವಿಡಿಯೋ ಪರಿಶೀಲನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಮ ರುಝ್ಖಾನ್ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವಿಡಿಯೋಗಳನ್ನು ನೋಡಿ ದುಷ್ಕೃತ್ಯ ನಡೆಸಿದವರನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಹೇಳಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಕುರ್ಬಾನ್ಪುರ್ ಮತ್ತು ಆ್ಯಂಡಿ ಕೋಟ್ ಗ್ರಾಮಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.
ಅಧಿರ್ ಖಂಡನೆ: ಲೋಕಸಭೆಯ ಕಾಂಗ್ರೆಸ್ ನಾಯಕ, ಬೆಹ್ರಾಮ್ ಪುರ ಕ್ಷೇತ್ರದ ಸಂಸದ ಅಧಿರ್ ರಂಜನ್ ಚೌಧರಿ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಕೇಂದ್ರ ಸರಕಾರ ಬಾಂಗ್ಲಾ ದೇಶದಲ್ಲಿ ನಡೆದ ಘಟನೆ ಬಗ್ಗೆ ಅಲ್ಲಿನ ಸರಕಾರದ ಜತೆಗೆ ಮಾತುಕತೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ