ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ
Team Udayavani, Oct 22, 2021, 5:05 PM IST
ಢಾಕಾ : ಬಾಂಗ್ಲಾದೇಶದಲ್ಲಿ ಕಳೆದ ಬುಧವಾರದಿಂದ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಿರಂತರ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಗುರುವಾರ ರಾತ್ರಿ ಭದ್ರತಾಪಡೆಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಇಕ್ಬಾಲ್ ಹೊಸೇನ್ ಎನ್ನುವವನಾಗಿದ್ದು, ಹಿಂಸಾಚಾರದ ಪ್ರಮುಖ ಸೂತ್ರಧಾರಿ ಎಂದು ತಿಳಿದುಬಂದಿದೆ.
ಕಾಕ್ಸ್ ಬಜಾರ್ ನ ಬೀಚ್ ಪ್ರದೇಶದಲ್ಲಿ ಇಕ್ಬಾಲ್ ಹೊಸೇನ್ ನನ್ನ ಬಂಧಿಸಿರುವುದಾಗಿ ಬಾಂಗ್ಲಾ ಪೊಲೀಸ್ ಮೂಲಗಳು ತಿಳಿಸಿವೆ.
ಅಲೆಮಾರಿಯಾಗಿರುವ ಇಕ್ಬಾಲ್ ಹೊಸೇನ್ ಕ್ಯೂಮಿಲ್ಲಾದ ದುರ್ಗಾ ಪೂಜಾ ಮಂದಿರದಲ್ಲಿ ಖುರಾನ್ ಪ್ರತಿ ಇರಿಸಿ ವ್ಯಾಪಕ ಹಿಂಸಾಚಾರಕ್ಕೆ ಕಾರಣನಾಗಿದ್ದಾನೆ ಎಂದು ಹೇಳಲಾಗಿದೆ.
ದುರ್ಗಾ ಪೂಜೆ ನಡೆಸುತ್ತಿದ್ದ ಪೆಂಡಾಲ್ ಮೇಲೆ ದಾಳಿ ನಡೆಸಿದ ಬಳಿಕ ಹಲವು ಕಡೆ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿತ್ತು.
ಹಿಂದೂಗಳ 66 ಮನೆಗಳನ್ನು ಧ್ವಂಸಗೈಯಲಾಗಿತ್ತು ಮತ್ತು 20 ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಈಗಾಗಲೇ 600ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂಗಳ ಮೇಲಿನ ದಾಳಿಗೆ ಭಾರತ ಸೇರಿದಂತೆ ವಿವಿಧೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಮುಸ್ಲಿಮರು ಬಹುಸಂಖ್ಯಾತರಾಗಿರುವ ಬಾಂಗ್ಲಾದೇಶದ 169 ಮಿಲಿಯನ್ ಜನಸಂಖ್ಯೆಯಲ್ಲಿ ಹಿಂದುಗಳು ಶೇಕಡಾ 10 ರಷ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ