ಹೇಗೆ ಬಂತು….?ಎರಡು ತಿಂಗಳ ಬಳಿಕ ಚೀನಾದಲ್ಲಿ ಕೋವಿಡ್-19 ಒಂದು ಪ್ರಕರಣ ಪತ್ತೆ!
ಪ್ರದೇಶದಲ್ಲಿ ಸೋಂಕಿತನ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
Team Udayavani, Jun 11, 2020, 6:00 PM IST
ಬೀಜಿಂಗ್: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ 19 ವೈರಸ್ ಪ್ರಕರಣ ಹೆಚ್ಚಳವಾಗುತ್ತಿರುವ ನಡುವೆಯೇ ಸುಮಾರು ಎರಡು ತಿಂಗಳ ಬಳಿಕ ಚೀನಾದಲ್ಲಿ ಗುರುವಾರ ಕೋವಿಡ್ 19 ಪ್ರಕರಣ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ನಗರದಲ್ಲಿರುವ ರೆಸಿಡೆನ್ಶಿಯಲ್ ಕಾಂಪ್ಲೆಕ್ಸ್ ಅನ್ನು ಸೀಲ್ ಮಾಡಲಾಗಿದ್ದು, ಪ್ರದೇಶದಲ್ಲಿ ಸೋಂಕಿತನ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಕೋವಿಡ್ 19 ವೈರಸ್ ಸೋಂಕಿತ 52 ವರ್ಷದ ವ್ಯಕ್ತಿ ಬೀಜಿಂಗ್ ಬಿಟ್ಟು ಹೊರಗೆ ಹೋದ ಟ್ರಾವೆಲ್ ಹಿಸ್ಟರಿ ಇಲ್ಲ. ಆದರೆ ವಿದೇಶದಿಂದ ಚೀನಾಕ್ಕೆ ಬಂದವರ ಸಂಪರ್ಕದಿಂದ ಬಂದಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಚೀನಾ ಅಧಿಕಾರಿಗಳ ಪ್ರಕಾರ, ಈ ವ್ಯಕ್ತಿ ಬೀಜಿಂಗ್ ನ ಕ್ಸಿಚೆಂಗ್ ಜಿಲ್ಲೆಯ ನಿವಾಸಿಯಾಗಿದ್ದು, ಈತನಲ್ಲಿ ಶೀತ ಮತ್ತು ಆಯಾಸದ ಲಕ್ಷಣ ಕಂಡುಬಂದಿತ್ತು. ಆದರೆ ಕೆಮ್ಮು, ಗಂಟಲು ಬೇನೆ ಅಥವಾ ಎದೆ ಬಿಗಿಹಿಡಿಯುವಿಕೆಯಂತಹ ಲಕ್ಷಣ ಕಂಡು ಬಂದಿಲ್ಲ. ಈ ವ್ಯಕ್ತಿ ಬೀಜಿಂಗ್ ಬಿಟ್ಟು ಹೊರ ಹೋಗಿಲ್ಲ ಮತ್ತು ಕಳೆದ 2 ವಾರಗಳಿಂದ ಯಾವುದೇ ವಿದೇಶಿಗರ ಸಂಪರ್ಕಕ್ಕೆ ಹೋಗಿಲ್ಲ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಈ ವ್ಯಕ್ತಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ. ಈ ನಿಟ್ಟಿನಲ್ಲಿ ನೂತನ ಕೋವಿಡ್ 19 ತಜ್ಞರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ 19 ಎಂಬ ಮಹಾಮಾರಿ ಮೊದಲು ಕಾಣಿಸಿಕೊಂಡಿದ್ದು ಚೀನಾದ ವುಹಾನ್ ಎಂಬ ಪ್ರಾಂತ್ಯದಲ್ಲಿ. ನಂತರ ಇದು ಜಗತ್ತಿನ 190ಕ್ಕೂ ಅಧಿಕ ದೇಶಗಳಿಗೆ ಹರಡುವ ಮೂಲಕ ವಿಶ್ವಾದ್ಯಂತ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಲಕ್ಷಾಂತರ ಜನರು ಕೋವಿಡ್ 19 ಸೋಂಕಿಗೆ ಒಳಗಾಗುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ