ಮೋದಿಗೆ ಮತ್ತಷ್ಟು ಮೆರಗು

ಪ್ರಧಾನಿ ಮೋದಿಗೆ ಬಿಲ್‌ ಗೇಟ್ಸ್‌ ಫೌಂಡೇಶನ್‌ನ ಪ್ರಶಸ್ತಿ ಪ್ರದಾನ

Team Udayavani, Sep 26, 2019, 4:30 AM IST

e-25

ನ್ಯೂಯಾರ್ಕ್‌: ಅಮೆರಿಕದ ಪ್ರತಿಷ್ಠಿತ ಮೈಕ್ರೋಸಾಫ್ಟ್ ಕಂಪನಿಯ ಸಂಸ್ಥಾಪಕರಾದ ಬಿಲ್‌ ಗೇಟ್ಸ್‌ ಅವರ “ಬಿಲ್‌ ಆ್ಯಂಡ್‌ ಮಿಲಿಂಡಾ ಗೇಟ್ಸ್‌ ಫೌಂಡೇಶನ್‌’ ಸಂಸ್ಥೆಯು, ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ “ಗ್ಲೋಬಲ್‌ ಗೋಲ್‌ಕೀಪರ್‌’ ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ. ಭಾರತದಲ್ಲಿ “ಸ್ವಚ್ಛ ಭಾರತ’ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅದರಲ್ಲಿ ಯಶಸ್ಸು ಕಂಡಿರುವ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, “ಸ್ವಚ್ಛ ಭಾರತ ಅಭಿಯಾನವು ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಇತರ ದೇಶಗಳೂ ಸ್ವತ್ಛತೆಯ ಹಾದಿಯನ್ನು ಹಿಡಿಯುವ ಮೂಲಕ ತಮ್ಮಲ್ಲಿ ಮತ್ತಷ್ಟು ನೈರ್ಮಲಿಕರಣ ಸಾಧಿಸಬಹುದು. ಈ ಪ್ರಶಸ್ತಿಯು ಇಡೀ ಭಾರತಕ್ಕೆ ಸಂದ ಗೌರವ” ಎಂದರು.

ನಂತರ ಮಾತನಾಡಿದ ಬಿಲ್‌ ಗೇಟ್ಸ್‌, “”ಭಾರತದಲ್ಲಿ ಹಿಂದಿನಿಂದಲೂ ರೂಢಿಯಲ್ಲಿದ್ದ ಬಯಲು ಶೌಚಾಲಯ ಸಮಸ್ಯೆ, ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದಿಂದ, ದಕ್ಷ ನಾಯಕತ್ವದಿಂದ ಐದೇ ವರ್ಷದಲ್ಲಿ ನಿವಾರಣೆಯಾಗಿದೆ. ಇದು ನಿಜಕ್ಕೂ ದೊಡ್ಡ ಸಾಧನೆ” ಎಂದರು. ಪ್ರಶಸ್ತಿಯ ಬಗ್ಗೆ ಪ್ರಧಾನಿ ಕಚೇರಿಯೂ ಸರಣಿ ಟ್ವೀಟ್‌ಗಳ ಮೂಲಕ ಮಾಹಿತಿ ನೀಡಿದೆ.

ಭಾರತದಿಂದ 10 ಲಕ್ಷ ಕೋಟಿ ರೂ. ಸಾಲ: ಪೆಸಿಫಿಕ್‌ ದ್ವೀಪರಾಷ್ಟ್ರಗಳ ಅಭಿವೃದ್ಧಿಗಾಗಿ 150 ಬಿಲಿಯನ್‌ ಡಾಲರ್‌ (10 ಲಕ್ಷ ಕೋಟಿ ರೂ.) ಸಾಲ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿಶ್ವಸಂಸ್ಥೆಯ 74ನೇ ಸಾಮಾನ್ಯ ಅಧಿವೇಶನ ಹಿನ್ನೆಲೆಯಲ್ಲಿ ನ್ಯೂಯಾರ್ಕ್‌ನಲ್ಲಿ ಮಂಗಳವಾರ ನಡೆದ “ಭಾರತ-ಪೆಸಿಫಿಕ್‌ ದ್ವೀಪಗಳ ಅಭಿವೃದ್ಧಿ ರಾಷ್ಟ್ರಗಳ (ಪಿಎಸ್‌ಐಡಿಎಸ್‌) ನಾಯಕರ ಸಭೆ’ಯಲ್ಲಿ ಭಾಗವಹಿಸಿದ್ದ ಮೋದಿ, ಸಾಲ ನೀಡುವಿಕೆಯ ಘೋಷಣೆ ಮಾಡಿತಲ್ಲದೆ, ಪಿಎಸ್‌ಐಡಿಎಸ್‌ ಸಂಸ್ಥೆಗೆ ಒಟ್ಟು 85.25 ಕೋಟಿ ರೂ.ಗಳನ್ನು ಭಾರತ ನೀಡಲಿದೆ. ಆ ಹಣವನ್ನು ಪಿಎಸ್‌ಐಡಿಎಸ್‌ ತಾನು ಇಷ್ಟಪಡುವ ಪ್ರದೇಶದ ಅಭಿವೃದ್ಧಿಗಾಗಿ ಬಳಸಬಹುದು ಎಂದು ಪ್ರಕಟಿಸಿದ್ದಾರೆ.

ಬಾಲಕಿಗೆ ಪ್ರಶಸ್ತಿ: ಇದೇ ವೇಳೆ, ಬಾಲ್ಯ ವಿವಾಹದ ವಿರುದ್ಧ ಹೋರಾಟ ನಡೆಸಿದ್ದ ರಾಜಸ್ಥಾನದ ಹಿನ್ಸಾ ಎಂಬ ಹಳ್ಳಿಯ ಪಾಯಲ್‌ ಜಾಂಗಿಡ್‌ ಎಂಬ ಬಾಲಕಿಗೆ, ಬಿಲ್‌ ಆ್ಯಂಡ್‌ ಮಿಲಿಂಡಾ ಗೇಟ್ಸ್‌ ಫೌಂಡೇಶನ್‌ ವತಿಯಿಂದ ಚೇಂಜ್‌ ಮೇಕರ್‌ ಎಂಬ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸೋಲಾರ್‌ ಪಾರ್ಕ್‌ ಉದ್ಘಾಟನೆ
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಛಾವಣಿಯಲ್ಲಿರುವ ಗಾಂಧಿ ಶಾಂತಿ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗಾಂಧಿ ಸೋಲಾರ್‌ ಪಾರ್ಕ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಮುಖ್ಯಸ್ಥ ಅಂಟೋನಿಯೋ ಗುಟೆರ್ಸ್‌ ಹಾಗೂ ಇನ್ನಿತರ ವಿಶ್ವ ನಾಯಕರೊಂದಿಗೆ ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಜಗತ್ತಿಗೆ ದಾರಿದೀಪವಾಗಿವೆ ಎಂದರು. ಸುಮಾರು 7 ಕೋಟಿ ರೂ. ವೆತ್ಛದಲ್ಲಿ ನಿರ್ಮಿಸಲಾಗಿರುವ ಈ ಸೋಲಾರ್‌ ಪಾರ್ಕ್‌ನಲ್ಲಿನ ಸೋಲಾರ್‌ ಪ್ಯಾನೆಲ್‌ಗ‌ಳನ್ನು ಭಾರತ ದೇಣಿಗೆೆ ನೀಡಿದೆ. ವಿಶ್ವಸಂಸ್ಥೆಯ ಒಟ್ಟು ಸದಸ್ಯ ರಾಷ್ಟ್ರಗಳ ಸಂಖ್ಯೆಗೆ ಅನುಗುಣವಾಗಿ 193 ಪ್ಯಾನೆಲ್‌ಗ‌ಳನ್ನು ಅಳವಡಿಸಲಾಗಿದೆ.

ಅಂಚೆ ಚೀಟಿ ಬಿಡುಗಡೆ: ಗಾಂಧೀಜಿಯವರ 150ನೇ ಹುಟ್ಟುಹಬ್ಬದ ವಿಶೇಷಕ್ಕಾಗಿಯೇ, ಇದೇ ವೇದಿಕೆಯಲ್ಲಿ “ಲೀಡರ್‌ಶಿಪ್‌ ಮ್ಯಾಟರ್ಸ್‌: ರಿಲೆವೆನ್ಸ್‌ ಆಫ್ ಗಾಂಧಿ ಇನ್‌ ದ ಕಂಟೆಂಪರರಿ ವರ್ಲ್x’ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಇದೇ ವೇಳೆ ಗಾಂಧೀಜಿಯವರ 150ನೇ ಜನ್ಮದಿನದ ವಿಶೇಷ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಯಿತು.

ಭಾರತದಲ್ಲಿ ಹೂಡಿಕೆಗೆ ಉತ್ತಮ ಅವಕಾಶ
ವಿಶ್ವಸಂಸ್ಥೆ ಮಹಾಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಕಾರ್ಪೊರೇಟ್‌ ತೆರಿಗೆ ಇಳಿಕೆ ಮಾಡಿದ್ದರಿಂದಾಗಿ ಹೂಡಿಕೆಗೆ ಉತ್ತಮ ಅವಕಾಶ ಎದುರಾಗಿದೆ ಎಂದು ಬುಧವಾರ ನ್ಯೂಯಾರ್ಕ್‌ನ ಬ್ಲೂಮ್‌ಬರ್ಗ್‌ ಗ್ಲೋಬಲ್‌ ಬ್ಯುಸಿನೆಸ್‌ ಫೋರಂನಲ್ಲಿ ಉದ್ಯಮಿಗಳನ್ನು ಉದ್ದೇಶಿಸಿ ಹೇಳಿದ್ದಾರೆ. ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಬೇಕು ಎಂದಾದರೆ, ಉದ್ಯಮಿಗಳು ಭಾರತಕ್ಕೆ ಆಗಮಿಸಬೇಕು. ಹೂಡಿಕೆದಾರರನ್ನು ಆಕರ್ಷಿಸಲು ಮತ್ತು ಉದ್ಯಮದ ವಾತಾವರಣವನ್ನು ಸುಧಾರಿಸುವುದಕ್ಕೆಂದೇ ಕಾರ್ಪೊರೇಟ್‌ ತೆರಿಗೆಯನ್ನು ಇಳಿಕೆ ಮಾಡಲಾಗಿದೆ ಎಂದಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದೇಶವು ಭಾರಿ ಹೂಡಿಕೆ ಮಾಡುತ್ತಿದೆ. ಕಳೆದ ಐದು ವರ್ಷದಲ್ಲಿ 1 ಟ್ರಿಲಿಯನ್‌ ಡಾಲರ್‌ ಅನ್ನು ದೇಶದ ಆರ್ಥಿಕತೆಗೆ ಸೇರಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್‌ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಪ್ರಜಾಪ್ರಭುತ್ವ, ರಾಜಕೀಯ ಸ್ಥಿರತೆ, ನಿರೀಕ್ಷಿಸಬಹುದಾದ ನೀತಿ ಮತ್ತು ಸ್ವತಂತ್ರ ನ್ಯಾಯಾಂಗವಿದ್ದು, ಹೂಡಿಕೆಗೆ ಗ್ಯಾರಂಟಿ ನೀಡುತ್ತದೆ ಎಂದಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಸಿಂಗಪುರ ಪಿಎಂ ಲೀ ಹೀಸಿನ್‌ ಜತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.