ದೇಹದ “ವಿಷ’ಕ್ಕೆ ರಕ್ತದಾನವೇ ರಾಮಬಾಣ!

ರಕ್ತದಾನದಿಂದಾಗಿ ಶರೀರದಲ್ಲಿರುವ "ಸರ್ವಕಾಲಿಕ ರಾಸಾಯನಿಕ'ಗಳು ಮಾಯ

Team Udayavani, Apr 24, 2022, 7:50 AM IST

ದೇಹದ “ವಿಷ’ಕ್ಕೆ ರಕ್ತದಾನವೇ ರಾಮಬಾಣ!

ಲಂಡನ್‌: ಗಾಳಿ, ನೀರು, ಆಹಾರ… ಹೀಗೆ ಬೇರೆ ಬೇರೆ ರೀತಿಯಿಂದ ದೇಹವನ್ನು ಪ್ರವೇಶಿಸುವ “ಸರ್ವಕಾಲಿಕ ರಾಸಾಯನಿಕ’ಗಳಿಂದ ಮನುಷ್ಯನಿಗೆ ಮುಕ್ತಿಯಿಲ್ಲವೇ?

ಹಲವಾರು ವರ್ಷಗಳಿಂದ ಕಾಡುತ್ತಿದ್ದ ಈ ಪ್ರಶ್ನೆಗೆ ಈಗ “ಖಂಡಿತಾ ಇದೆ’ ಎಂಬ ಉತ್ತರ ಸಿಕ್ಕಿದೆ. ನಮ್ಮ ದೇಹದಲ್ಲೇ “ಸದಾಕಾಲ ಇರುವ’ ಈ ವಿಷಕಾರಿ ರಾಸಾಯನಿಕಗಳಿಂದ ಮುಕ್ತಿ ಪಡೆಯಲು ಇರುವ ಏಕೈಕ ದಾರಿಯೆಂದರೆ “ರಕ್ತದಾನ’ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ!

ಹೌದು, ನಿಯಮಿತವಾಗಿ ರಕ್ತದಾನ ಮಾಡುತ್ತಿದ್ದರೆ ಮನುಷ್ಯನ ರಕ್ತನಾಳಗಳು ಸ್ವಚ್ಛವಾಗಿ, ಈ ಫಾರೆವರ್‌ ಕೆಮಿಕಲ್ಸ್‌ನಿಂದ ಮುಕ್ತವಾಗುತ್ತವೆ ಎಂಬ ಮಹತ್ವದ ಅಂಶವನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಈ ಸಂಶೋಧನೆಯ ವರದಿಯು “ಜಾಮಾ ನೆಟ್‌ವರ್ಕ್‌ ಓಪನ್‌’ ಎಂಬ ಸಂಶೋಧನಾ ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದೆ.

ಯಾರ ಮೇಲೆ ಅಧ್ಯಯನ?
ಸಾಮಾನ್ಯ ಜನರಿಗಿಂತ ಹೆಚ್ಚು ಈ ಪಿಎಫ್ಎಎಸ್‌ಗಳಿಗೆ ಒಡ್ಡಲ್ಪಡುವವರೆಂದರೆ ಅಗ್ನಿಶಾಮಕ ಸಿಬ್ಬಂದಿ. ಹೀಗಾಗಿ, ಆಸ್ಟ್ರೇಲಿಯಾದ 285 ಮಂದಿ ಅಗ್ನಿಶಾಮಕ ಸಿಬ್ಬಂದಿಯನ್ನು ಈ ಅಧ್ಯಯನಕ್ಕೆ ಬಳಸಿಕೊಳ್ಳಲಾಗಿದೆ. ಇವರೆಲ್ಲರೂ ಸುಮಾರು 12 ತಿಂಗಳ ಕಾಲ ರಕ್ತ ಮತ್ತು ಪ್ಲಾಸ್ಮಾ ದಾನ ಮಾಡಿದ್ದರು. ನಿರಂತರವಾಗಿ ರಕ್ತದಾನ ಮಾಡಿದ ಇವರ ದೇಹದಲ್ಲಿ ವಿಷಕಾರಿ ರಾಸಾಯನಿಕದ ಪ್ರಮಾಣ ತಗ್ಗುತ್ತಾ ಹೋಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ವಿಶೇಷವೆಂದರೆ, ರಕ್ತದಾನಕ್ಕಿಂತಲೂ ಪ್ಲಾಸ್ಮಾ ದಾನ ಮಾಡಿದವರ ರಕ್ತನಾಳಗಳಲ್ಲಿ ಕೆಮಿಕಲ್‌ಗ‌ಳ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಇದನ್ನೂ ಓದಿ:ದಿಲ್‌ಕುಶ್‌ ದ್ರಾಕ್ಷಿ ಬೆಳೆಯಿಂದ ಉತ್ತಮ ಲಾಭ; ‌ಸರ್ಕಾರದಿಂದಲೂ ಅನುದಾನ ವ್ಯವಸ್ಥೆ

ಏನಿದು “ಫಾರೆವರ್‌ ಕೆಮಿಕಲ್ಸ್‌’?
“ಫಾರೆವರ್‌ ಕೆಮಿಕಲ್ಸ್‌’ (ಪಿಎಫ್ಎಎಸ್‌) ಎನ್ನುವುದು ಹೆಚ್ಚಾಗಿ ಅಡುಗೆಮನೆಯಲ್ಲಿ ಬಳಸುವ ನಾನ್‌ ಸ್ಟಿಕ್‌ ಪಾತ್ರೆಗಳು, ಜಲ-ನಿರೋಧಕ ವಸ್ತುಗಳು ಮತ್ತು ಇತರೆ ಗೃಹೋಪಯೋಗಿ ವಸ್ತುಗಳಲ್ಲಿ ಕಂಡುಬರುವಂಥ ವಿಷಕಾರಿ ರಾಸಾಯನಿಕ. ಇದು ವಿಭಜನೆಗೊಳ್ಳದ ರಾಸಾಯನಿಕ ಕಣ. ಗಾಳಿ, ನೀರು ಅಥವಾ ಆಹಾರದ ಮೂಲಕ ಈ ರಾಸಾಯನಿಕವು ನಮ್ಮ ಶರೀರದೊಳಕ್ಕೆ ಸೇರಿ ರಕ್ತದೊಳಗೆ ಸಂಗ್ರಹವಾಗುತ್ತದೆ. ಅಲ್ಲದೇ, ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಿ, ಅಸ್ತಮಾ ಹಾಗೂ ಇತರೆ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.