ಸೈನಿಕರನ್ನು ಹಿಂದಕ್ಕೆ ಪಡೆಯಲು ಉಭಯ ದೇಶಗಳು ಒಪ್ಪಿವೆ ಎಂದ ಚೀನ


Team Udayavani, Sep 22, 2020, 10:58 PM IST

25

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಲಡಾಖ್‌ಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತ ಮತ್ತು ಚೀನ ಸೋಮವಾರ ಆರನೇ ಬಾರಿಗೆ ಮಿಲಿಟರಿ (ಕಾರ್ಪ್ಸ್‌ ಕಮಾಂಡರ್ಸ್‌) ಮಟ್ಟದಲ್ಲಿ ಮಾತುಕತೆ ನಡೆಸಿದವು. ಮುಂಚೂಣಿಗೆ ಹೆಚ್ಚಿನ ಸೈನಿಕರನ್ನು ಕಳುಹಿಸುವುದನ್ನು ನಿಲ್ಲಿಸಲು ಚೀನ ಮತ್ತು ಭಾರತ ಎರಡೂ ಒಪ್ಪಿಕೊಂಡಿವೆ ಎಂದು ಚೀನದ ರಕ್ಷಣಾ ಸಚಿವಾಲಯದ ವಕ್ತಾರರು ಮಂಗಳವಾರ ರಾತ್ರಿ ಹೇಳಿದ್ದಾರೆ.

ಇದರೊಂದಿಗೆ ಪ್ರಸ್ತುತ ಪರಿಸ್ಥಿತಿಯನ್ನು ಬದಲಾಯಿಸುವ ಬಗ್ಗೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳದಿರಲು ಎರಡೂ ಕಡೆಯವರು ಒಪ್ಪಿದ್ದಾರೆ. ಮುಂದೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ತಿಳಿದು ಬಂದಿದೆ.

ಇದಕ್ಕೂ ಮೊದಲು ಸೋಮವಾರ ನಡೆದ ಸಭೆಯಲ್ಲಿ ಮೊದಲ ಬಾರಿಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೂ ಭಾಗವಹಿಸಿದ್ದರು. 13 ಗಂಟೆಗಳ ಸುದೀರ್ಘ‌ ಮಾತುಕತೆಯ ಸಮಯದಲ್ಲಿ 2020ರ ಮೇ ಮೊದಲು ಇದ್ದ ಪೂರ್ವ ಲಡಾಖ್‌ನ ಸ್ಥಾನಗಳಿಗೆ ಹಿಂತಿರುಗಲು ಭಾರತವನ್ನು ಚೀನ ಕೇಳಿದೆ. ಇದಕ್ಕಾಗಿ ಗಡುವನ್ನು ನಿಗದಿಪಡಿಸಿ, ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಪರಿಹರಿಸಲು ಮಾತುಕತೆ ಮುಂದುವರಿಸಲು ಸಭೆ ತೀರ್ಮಾನಿಸಿತ್ತು.

ಸಭೆಯಲ್ಲಿ 14 ಕಾರ್ಪ್ಸ್ ಮುಖ್ಯಸ್ಥರಾದ ಲೆಫ್ಟಿನೆಂಟ್‌ ಜನರಲ್‌ ಹರಿಂದರ್‌ ಸಿಂಗ್‌ ಮತ್ತು ಲೆಫ್ಟಿನೆಂಟ್‌ ಜನರಲ್‌ ಪಿಜಿಕೆ ಮೆನನ್‌ ಭಾಗವಹಿಸಿದ್ದರು. ಮೆನನ್‌ ಮುಂದಿನ ತಿಂಗಳು ಲೆಫ್ಟಿನೆಂಟ್‌ ಜನರಲ್‌ ಆಗಿ ಹರಿಂದರ್‌ ಅವರ ಸ್ಥಾನಕ್ಕೆ ನೇಮಕವಾಗಲಿದ್ದಾರೆ. ದಕ್ಷಿಣ ಜಿನ್‌ ಜಿಯಾಂಗ್‌ ಮಿಲಿಟರಿ ಪ್ರದೇಶದ ಕಮಾಂಡರ್‌ ಮೇಜರ್‌ ಜನರಲ್‌ ಲಿಯು ಲಿನ್‌ ಅವರು ಸಭೆಯಲ್ಲಿದ್ದರು.

ವಿಶೇಷವೆಂದರೆ ಈ ಸಭೆಯಲ್ಲಿ ಮೊದಲ ಬಾರಿಗೆ ವಿದೇಶಾಂಗ ಸಚಿವಾಲಯದ ಪೂರ್ವ ಏಷ್ಯಾ ವ್ಯವಹಾರಗಳ ಜಂಟಿ ಕಾರ್ಯದರ್ಶಿ ನವೀನ್‌ ಶ್ರೀವಾಸ್ತವ ಕೂಡ ಭಾಗವಹಿಸಿದ್ದರು. ಸಭೆ ಸೋಮವಾರ ಬೆಳಗ್ಗೆ 10ರಿಂದ ರಾತ್ರಿ 11ರ ವರೆಗೆ ನಡೆದಿತ್ತು.

ಭಾರತದ ನಿಲುವು ಸ್ಪಷ್ಟ
ವಿವಾದಿತ ಎಲ್ಲ ಅಂಶಗಳಿಂದ ಚೀನ ಕೂಡಲೇ ಹಿಂದೆ ಸರಿಯಬೇಕು ಎಂದು ಭಾರತ ಸ್ಪಷ್ಟವಾಗಿ ಹೇಳಿದೆ. ಇದಲ್ಲದೆ ಚೀನ ಹಿಮ್ಮೆಟ್ಟಲು ಪ್ರಾರಂಭಿಸಬೇಕು, ಏಕೆಂದರೆ ಈ ವಿವಾದಕ್ಕೆ ಚೀನದ ಸೈನ್ಯ ನೇರ ಕಾರಣ. ಚೀನ ಸಂಪೂರ್ಣವಾಗಿ ಹಿಂತಿರುಗಿ ಯಥಾಸ್ಥಿತಿಯನ್ನು ಪುನಃಸ್ಥಾಪಿಸದಿದ್ದರೆ, ಚಳಿಗಾಲದಲ್ಲೂ ಸಹ ಭಾರತೀಯ ಸೇನೆಯು ಗಡಿಯಲ್ಲಿ ಉಳಿಯುತ್ತದೆ ಎಂದು ಸಭೆಗೆ ಭಾರತ ಹೇಳಿದೆ.

ಪ್ಯಾಂಗೋಗ್‌ ತ್ಸೋ ದಕ್ಷಿಣ ಪ್ರದೇಶವನ್ನು ಖಾಲಿ ಮಾಡಿ: ಚೀನ
ಆಗಸ್ಟ್‌ 29ರ ನಂತರ ಆಕ್ರಮಿಸಿಕೊಂಡಿರುವ ಪಂಗೋಗ್‌ ತ್ಸೋದ ದಕ್ಷಿಣ ಪ್ರದೇಶದ ಸ್ಥಾನಗಳನ್ನು ಭಾರತ ಖಾಲಿ ಮಾಡಬೇಕು ಎಂದು ಚೀನ ಹೇಳಿದೆ. ಮತ್ತೂಂದೆಡೆ, 2020ರ ಎಪ್ರಿಲ…-ಮೇ ಮೊದಲು ಇದ್ದ ಪರಿಸ್ಥಿತಿಯನ್ನು ಪುನಃಸ್ಥಾಪಿಸಲು ಭಾರತವೂ ಒತ್ತಾಯಿಸಿತು ಎಂದು ತಿಳಿದು ಬಂದಿದೆ.

ಕಾರ್ಪ್ಸ್ ಕಮಾಂಡರ್ಸ್‌ ಸಭೆಯ ಮೊದಲು ಸಭೆಯ ಕಾರ್ಯಸೂಚಿ ಮತ್ತು ಸಮಸ್ಯೆಗಳನ್ನು ಭಾರತ ಮೊದಲು ನಿರ್ಧರಿಸಿತು. ಕಳೆದ ವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಇವುಗಳ ಬಗ್ಗೆ ಚರ್ಚಿಸಲಾಯಿತು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಮತ್ತು ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಮುಕಂದ್‌ ನರ್ವಾನೆ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.