ಬಿಆರ್‌ಐ v/s ಬಿ3ಡಬ್ಲ್ಯು ! ಚೀನದ ಸಂಚಿಗೆ ಜಿ 7 ರಾಷ್ಟ್ರಗಳಿಂದ ತಿರುಗುಬಾಣ

ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಪ್ರತಿಯಾಗಿ ಘೋಷಣೆ

Team Udayavani, Jun 28, 2022, 7:40 AM IST

ಬಿಆರ್‌ಐ v/s ಬಿ3ಡಬ್ಲ್ಯು ! ಚೀನದ ಸಂಚಿಗೆ ಜಿ 7 ರಾಷ್ಟ್ರಗಳಿಂದ ತಿರುಗುಬಾಣ

ಎಲ್ಮಾವು (ಜರ್ಮನಿ): ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು ಬಹುಕೋಟಿ ಡಾಲರ್‌ ಮೌಲ್ಯದ ಬೆಲ್ಟ್ ಆ್ಯಂಡ್‌ ರೋಡ್‌ ಇನಿಷಿಯೇಟಿವ್‌ (ಬಿಆರ್‌ಐ) ಮೂಲಕ ಸಾಲದ ಜಾಲಕ್ಕೆ ಸಿಲುಕಿಸುವ ಚೀನದ ಸಂಚಿಗೆ ದೊಡ್ಡ ಮಟ್ಟದ ಹೊಡೆತ ನೀಡಲು ಜಿ7 ರಾಷ್ಟ್ರ ಗಳು ಮುಂದಾಗಿವೆ.

ಭಾರತದಂಥ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಹೊಸ ಪರಿವರ್ತನೆ ಯನ್ನು ತರುವಂಥ ಮೂಲ ಸೌಕರ್ಯ ಯೋಜನೆಗಳನ್ನು ಜಾರಿ ಮಾಡುವ ಹೊಸ ಯೋಜನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಇತರ ಜಿ7 ನಾಯಕರು ಘೋಷಿಸಿದ್ದಾರೆ. ಈ ಮೂಲಕ ವಿಸ್ತರಣ ವಾದಿ ಚೀನಕ್ಕೆ ಸಡ್ಡು ಹೊಡೆಯುವ ಮಾಸ್ಟರ್‌ಪ್ಲ್ರಾನ್‌ ರೂಪಿಸಿದ್ದಾರೆ.

ಜರ್ಮನಿಯಲ್ಲಿ ಸೋಮವಾರ ನಡೆದ ಜಿ7 ಶೃಂಗದಲ್ಲಿ ಈ ಮಹತ್ವದ ಘೋಷಣೆ ಮಾಡಲಾಗಿದೆ. 2027ರೊಳಗಾಗಿ 600 ಶತಕೋಟಿ ಡಾಲರ್‌ ಮೊತ್ತ ವನ್ನು ಸಂಗ್ರಹಿಸಿ, ಆ ಮೊತ್ತದಿಂದ ಅಭಿವೃದ್ಧಿಶೀಲ ದೇಶಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವ ಯೋಜನೆ ಇದು. ಬಿಲ್ಡ್‌ ಬ್ಯಾಕ್‌ ಬೆಟರ್‌ ವರ್ಲ್ಡ್(ಬಿ3ಡಬ್ಲ್ಯು) ಎಂಬ ಹೆಸರಿನಲ್ಲಿ ಈ ಯೋಜನೆ ಜಾರಿಯಾಗಲಿದೆ.

ಏನಿದು ಚೀನದ ಬಿಆರ್‌ಐ?
2013ರಲ್ಲಿ ಘೋಷಣೆಯಾದ ಯೋಜನೆಯಿದು. ಏಷ್ಯಾದಿಂದ ಯುರೋಪ್‌ವರೆಗೆ ಮತ್ತು ಅದ ರಿಂದಾಚೆಗೆ ರೈಲ್ವೇ, ಬಂದರು, ಹೆದ್ದಾರಿ ಸಹಿತ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಚೀನದ ಈ ಯೋಜನೆಗೆ 100ಕ್ಕೂ ಹೆಚ್ಚು ದೇಶಗಳು ಒಪ್ಪಿವೆ. ಆದರೆ ಬಿಆರ್‌ಐ ಹೆಸರಲ್ಲಿ ಚೀನವು ಶ್ರೀಲಂಕಾದಂಥ ದೇಶ ಗಳಿಗೆ ಸಾಲ ನೀಡಿ, ಸಾಲದ ಶೂಲಕ್ಕೆ ಸಿಲುಕಿಸುತ್ತಿದೆ.

ಏನಿದು ಬಿ3ಡಬ್ಲ್ಯು ಯೋಜನೆ?
ಅಮೆರಿಕ, ಬ್ರಿಟನ್‌, ಕೆನಡಾ, ಫ್ರಾನ್ಸ್‌, ಜರ್ಮನಿ, ಜಪಾನ್‌ ಮತ್ತು ಇಟಲಿ ದೇಶಗಳು ಖಾಸಗಿ ಸಂಸ್ಥೆಗಳಿಂದ ಸಾಲ ಸೇರಿದಂತೆ ಹಲವು ಮೂಲಗಳಿಂದ 600 ಶತಕೋಟಿ ಡಾಲರ್‌ ಬಂಡವಾಳ ಸಂಗ್ರಹಿಸಿ, ಅಭಿವೃದ್ಧಿಶೀಲ ದೇಶಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಯೋಜನೆಯಿದು. ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳ 4 ಪ್ರಮುಖ ಕ್ಷೇತ್ರಗಳಾದ ಆರೋಗ್ಯ, ಡಿಜಿಟಲ್‌ ಸಂಪರ್ಕ, ಲಿಂಗ ಸಮಾನತೆ ಮತ್ತು ಹವಾಮಾನ- ಇಂಧನ ಭದ್ರತೆಯಲ್ಲಿ ಸುಧಾರಣೆ ತರುವುದು ಕೂಡ ಇದರ ಉದ್ದೇಶವಾಗಿದೆ.

ಭಾರತಕ್ಕೇನು ಲಾಭ?
-ಆರೋಗ್ಯಸೇವೆ, ಡಿಜಿಟಲ್‌ ಸಂಪರ್ಕ,ಲಿಂಗ ಸಮಾನತೆ, ಹವಾಮಾನ ಮತ್ತು ಇಂಧನ ಭದ್ರತೆಯಂಥ ಪ್ರಮುಖ ವಲಯಗಳ ಸುಧಾರಣೆಗೆ ಒತ್ತು ಸಿಗಲಿದೆ.
-ಇಂಗಾಲದ ಪ್ರಮಾಣ ತಗ್ಗಿಸುವ ಭಾರತದ ಪ್ರಯತ್ನಕ್ಕೆ ಹಣಕಾಸು ನೆರವು ಲಭಿಸಲಿದೆ.
-ಆಹಾರ ಭದ್ರತೆ ವಿಸ್ತರಣೆ, ಕೃಷಿ ವ್ಯವಸ್ಥೆ ಸುಧಾರಣೆಗಾಗಿ ಭಾರತದಲ್ಲಿ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮ 30 ದಶಲಕ್ಷ ಡಾಲರ್‌ ಹೂಡಿಕೆ ಮಾಡಲಿದೆ.
-ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸಲು ಭಾರತದ ಕಂಪೆನಿಗಳು, ಉದ್ಯಮಿಗಳಿಗೆ ನೆರವಾಗಲಿದೆ.
-ದೇಶದಲ್ಲಿ ಉದ್ಯೋಗಾವಕಾಶ ಸೃಷ್ಟಿಯಾಗ ಲಿದೆ, ಕಾರ್ಮಿಕರಿಗೆ ಹೆಚ್ಚಿನ ಭದ್ರತೆ ಸಿಗಲಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.