ಪಂಚಶೀಲ ಒಪ್ಪಂದದಡಿ ದುಡಿಯಲು ಮೋದಿ, ಜಿನ್ಪಿಂಗ್ ಪಣ
Team Udayavani, Sep 5, 2017, 11:55 AM IST
ಕ್ಸಿಯಾಮೆನ್, ಚೀನ : ಏಶ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಿಡಲು ಪಂಚಶೀಲ ಒಪ್ಪಂದದ ಮಾರ್ಗದರ್ಶನ ಪ್ರಕಾರ ಜತೆಗೂಡಿ ಶ್ರಮಿಸಲು ಭಾರತ ಮತ್ತು ಚೀನ ಇಂದು ಪಣ ತೊಟ್ಟಿವೆ.
ಬ್ರಿಕ್ಸ್ ಶೃಂಗದ ಪಾರ್ಶ್ವದಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಉಭಯ ದೇಶಗಳು ಏಶ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಿಡಲು ಪರಸ್ಪರ ಸಹಕಾರದೊಂದಿಗೆ ಶ್ರಮಿಸುವ ಸಂಕಲ್ಪವನ್ನು ತಳೆದವು.
ಡೋಕ್ಲಾಂ ಗಡಿ ಬಿಕ್ಕಟ್ಟಿನ ಬಳಿಕದಲ್ಲಿ ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿರುವುದು ಇದೇ ಮೊದಲ ಬಾರಿಯಾಗಿದೆ.
ಭಾರತ ಮತ್ತು ಚೀನ ಏಶ್ಯದ ಎರಡು ದಿಗ್ಗಜಗಳಾಗಿದ್ದು ಅತ್ಯಂತ ಬಲಿಷ್ಠ ನೆರೆಹೊರೆಯ ದೇಶಗಳಾಗಿವೆ. ಮಾತ್ರವಲ್ಲದೆ ಈ ಎರಡೂ ದೇಶಗಳು ವಿಶ್ವದ ಅತೀ ದೊಡ್ಡ ಮತ್ತು ನೂತನ ಪ್ರಬಲ ಆರ್ಥಿಕ ಶಕ್ತಿಗಳಾಗಿ ಮೂಡಿ ಬರುತ್ತಿರುವ ರಾಷ್ಟ್ರಗಳಾಗಿವೆ ಎಂದು ಚೀನ ಅಧ್ಯಕ್ಷ ಜಿನ್ಪಿಂಗ್ ಅವರು ಈ ಸಂದರ್ಭದಲ್ಲಿ ಹೇಳಿದರು.
ಐತಿಹಾಸಿಕ ಪಂಚಶೀಲದ ಐದು ತತ್ವಗಳಿಂದ ಮಾರ್ಗದರ್ಶನ ಪಡೆದು ಭಾರತದೊಂದಿಗೆ, ಏಶ್ಯದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಹಾಗೂ ಉಭಯತರ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯಲು ಚೀನ ಸಿದ್ದವಿದೆ ಎಂದು ಜಿನ್ಪಿಂಗ್ ಅವರು ಪ್ರಧಾನಿ ಮೋದಿಗೆ ಹೇಳಿದರು.
ಚೀನೀ ನಿಯೋಗದಲ್ಲಿ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಮುಖ್ಯ ವಕ್ತಾರ ಲೂ ಕಾಂಗ್, ವಿದೇಶ ಸಚಿವ ವಾಂಗ್ ಯೀ ಮತ್ತು ಸ್ಟೇಟ್ ಕೌನ್ಸಿಲರ್ ಯಾಂಗ್ ಜೀಶೀ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ