ಉದ್ಯಮಿ ಮಲ್ಯ ಕೇಸ್‌: ಬ್ಯಾಂಕುಗಳಿಗೆ ಗೆಲುವು


Team Udayavani, May 9, 2018, 8:18 AM IST

mallya.jpg

ಲಂಡನ್‌: ತಲೆಮರೆಸಿ ಕೊಂಡಿರುವ ಭಾರತದ ಉದ್ಯಮಿ ವಿಜಯ್‌ ಮಲ್ಯ ಅವರ ಸಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾರತೀಯ ಬ್ಯಾಂಕುಗಳಿಗೆ ಗೆಲುವಾಗಿದೆ. ಮಲ್ಯ ಅವರು ಉದ್ದೇಶಪೂರ್ವಕವಾಗಿ 1.4 ಶತಕೋಟಿ ಡಾಲರ್‌ ಮೊತ್ತದ ಸಾಲವನ್ನು ಮರುಪಾವತಿ ಮಾಡಿಲ್ಲ ಎಂಬ ಬ್ಯಾಂಕುಗಳ ಆರೋಪವನ್ನು ಒಪ್ಪಿಕೊಂಡಿರುವ ಲಂಡನ್‌ನ ವೆಸ್ಟ್‌ಮಿನಿಸ್ಟರ್‌ ನ್ಯಾಯಾಲಯ, ಈ ಸಂಬಂಧ ಭಾರತದ ಕೋರ್ಟ್‌ ನೀಡಿರುವ ಆದೇಶದಂತೆ ಐಡಿಬಿಐ ಸೇರಿದಂತೆ ಇತರೆ ಬ್ಯಾಂಕುಗಳು ಕ್ರಮ ಕೈಗೊಳ್ಳಬಹುದು ಎಂದು ಹೇಳಿದೆ. 

ಇದರಿಂದಾಗಿ ಮಲ್ಯ ಮಾಡಿದ್ದ ಸಾಲದಿಂದ ಸಂಕಷ್ಟಕ್ಕೀಡಾಗಿದ್ದ ಭಾರತದ 13 ಬ್ಯಾಂಕುಗಳು ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೆ, ಎಲ್ಲ ಸಾಲವನ್ನೂ ಮಲ್ಯ ಕಡ್ಡಾಯವಾಗಿ ಮರುಪಾವತಿ ಮಾಡಲೇ ಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಲ್ಯರ ವಿರುದ್ಧ ಭಾರತೀಯ ನ್ಯಾಯಾಲಯಗಳು ಹೊರಡಿಸಿರುವ ಆದೇಶಗಳನ್ನು ಜಾರಿಗೊಳಿಸಲು ನ್ಯಾಯಾಧೀಶ ಆ್ಯಂಡ್ರೂ ಹೆನ್ಶಾ ಬ್ಯಾಂಕುಗಳಿಗೆ ಅನುಮತಿ ನೀಡಿದ್ದಾರೆ. ಅದರಂತೆ, 1.55 ಶತಕೋಟಿ ಡಾಲರ್‌(10,400 ಕೋಟಿ) ಮೊತ್ತವನ್ನು ವಸೂಲಿ ಮಾಡಲು ಭಾರತದ ನ್ಯಾಯಾಲಯಗಳು 13 ಬ್ಯಾಂಕುಗಳ ಒಕ್ಕೂಟಕ್ಕೆ ನೀಡಿದ್ದ ಅನುಮತಿಗೆ ಬಲ ಬಂದಂತಾಗಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ, ಮಲ್ಯರಿಂದ ಮೋಸ ಹೋಗಿರುವ ಐಡಿಬಿಐ ಬ್ಯಾಂಕ್‌ ಸೇರಿದಂತೆ ಇತರ ಭಾರತೀಯ ಬ್ಯಾಂಕುಗಳ ಪ್ರತಿನಿಧಿಗಳು ಹಾಜರಿದ್ದರು.

ಮಲ್ಯ ಅವರು ಬ್ಯಾಂಕುಗಳಿಗೆ 62,033,503,879.45 ರೂ.ಗಳು ಹಾಗೂ ಬಡ್ಡಿಯನ್ನು ಪಾವತಿಸಲು ಬಾಕಿಯಿದ್ದು, ಅದನ್ನು ಅವರು ಮರುಪಾವತಿಸಲೇಬೇಕು ಎಂದು ಕರ್ನಾಟಕದ ಸಾಲ ವಸೂಲು ನ್ಯಾಯಾಧಿಕರಣ(ಡಿಆರ್‌ಟಿ) ಈ ಹಿಂದೆ ತೀರ್ಪು ನೀಡಿತ್ತು. ಎಸ್‌ಬಿಐ, ಬ್ಯಾಂಕ್‌ ಆಫ್ ಬರೋಡಾ, ಕಾರ್ಪೊರೇಷನ್‌ ಬ್ಯಾಂಕ್‌, ಫೆಡರಲ್‌ ಬ್ಯಾಂಕ್‌, ಐಡಿಬಿಐ, ಪಿಎನ್‌ಬಿ, ಸ್ಟೇಟ್‌ಬ್ಯಾಂಕ್‌ ಆಫ್ ಮೈಸೂರು, ಯೂಕೋ ಬ್ಯಾಂಕ್‌ ಸೇರಿದಂತೆ 13 ಬ್ಯಾಂಕುಗಳ ಒಕ್ಕೂಟವು ಮಲ್ಯ ವಿರುದ್ಧ ಲಂಡನ್‌ನಲ್ಲಿ ಕಾನೂನು ಹೋರಾಟ ಮಾಡಿದ್ದು, ಮಂಗಳವಾರದ ಆದೇಶ ಈ ಒಕ್ಕೂಟದ ಪರ ಬಂದಿದೆ.

ಲಾಭವೇನು?
ಲಂಡನ್‌ ಕೋರ್ಟ್‌ನ ಈ ಆದೇಶ ದಿಂದ, ಇಂಗ್ಲೆಂಡ್‌ ಮತ್ತು ವೇಲ್ಸ್‌ ನಲ್ಲಿರುವ ಮಲ್ಯ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕು ಗಳಿಗೆ ನೆರವಾಗಲಿದೆ. ಅಲ್ಲದೆ, ಈ ಆಸ್ತಿಗಳ ಮೇಲೆ ಜಾಗತಿಕ ಮುಟ್ಟುಗೋಲು ಆದೇಶ ಇರುವ ಕಾರಣ, ಮಲ್ಯ ಅವರು ತಮ್ಮ ಯಾವುದೇ ಆಸ್ತಿಯನ್ನು ಮಾರಾಟ ಮಾಡಲು, ಬೇರೆಡೆಗೆ ವರ್ಗಾಯಿ ಸಲು ಸಾಧ್ಯವಾಗುವುದಿಲ್ಲ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.