ಕಾರ್-ಟು-ಬುಲೆಟ್ ಟ್ರೈನ್ : ಜಪಾನ್ ಬಾಂಧವ್ಯವನ್ನು ಬಣ್ಣಿಸಿದ ಪ್ರಧಾನಿ ಮೋದಿ
Team Udayavani, Jun 28, 2019, 5:50 AM IST
ಒಸಾಕ/ಕೋಬೆ: “ಜಿ20′ ಶೃಂಗಕ್ಕಾಗಿ ಜಪಾನ್ನ ಒಸಾಕಾಗೆ ಗುರುವಾರ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆಗೆ ಮಾತುಕತೆ ನಡೆಸಿದ್ದಾರೆ. ಜಾಗತಿಕ ಆರ್ಥಿಕತೆ, ಆರ್ಥಿಕ ಅಪರಾಧಿಗಳು ಹಾಗೂ ವಿಪತ್ತು ನಿರ್ವಹಣೆಯಲ್ಲಿ ಸಹಕಾರ ಸಹಿತ ಹಲವು ವಿಚಾರಗಳ ಕುರಿತು ಉಭಯ ಮುಖಂಡರು ಚರ್ಚೆ ನಡೆಸಿದ್ದಾರೆ.
ಈಶಾನ್ಯ ಭಾರತದ ಹಲವು ಯೋಜನೆಗÙಲ್ಲಿ ಜಪಾನ್ ತೊಡಗಿಸಿಕೊಂಡಿದ್ದು, ಇದಕ್ಕಾಗಿ ಮೋದಿ ಜಪಾನ್ಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ, ಬುಲೆಟ್ ರೈಲು ಯೋಜನೆಯಲ್ಲೂ ಜಪಾನ್ನ ಜೈಕಾ ಸಂಸ್ಥೆ ತೊಡಗಿಸಿಕೊಂಡಿದ್ದು, ಈ ಕುರಿತೂ ಚರ್ಚೆ ನಡೆಸಲಾಗಿದೆ. ಭಾರತದಲ್ಲಿ ವಿಪತ್ತು ನಿರ್ವಹಣೆ ಕುರಿತ ಮೂಲಸೌಕರ್ಯದಲ್ಲಿ ಜಪಾನ್ ನೀಡಿದ ನೆರವನ್ನು ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ.
ಅಲ್ಲದೆ ನೆರೆ ದೇಶಗಳಲ್ಲಿ ಭಾರತದ ಯೋಜನೆಗಳಿಗೆ ಜಪಾನ್ ನೆರವು ಕುರಿತೂ ಚರ್ಚೆ ನಡೆಸಲಾಗಿದೆ. ಕೀನ್ಯಾದಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ಜಪಾನ್ ಸಹಭಾಗಿತ್ವದಲ್ಲಿ ಭಾರತ ನಿರ್ಮಿಸುತ್ತಿದೆ. ಮೋದಿ ಮತ್ತು ಅಬೆ ಮಾತುಕತೆ ಅನಂತರದಲ್ಲಿ ಜಪಾನ್, ಭಾರತದ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಜಿ20 ಶೃಂಗದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಮೋದಿಗೆ ಅಬೆ ಶುಭಾಶಯ: ಮರಳಿ ಅಧಿಕಾರಕ್ಕೇರಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಜಪಾನ್ ಪ್ರಧಾನಿ ಶಿಂಜೋ ಅಬೆ ಶುಭಾಶಯ ಕೋರಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದೂರವಾಣಿ ಮೂಲಕ ಶುಭಾಶಯ ಕೋರಿದವರಲ್ಲಿ ನೀವೇ ಮೊದಲಿಗರು ಎಂದು ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ. ಈ ಮಧ್ಯೆ ಈ ವರ್ಷದಲ್ಲೇ ಭಾರತಕ್ಕೆ ಭೇಟಿ ನೀಡುವುದಾಗಿಯೂ ಅಬೆ ಘೋಷಿಸಿದ್ದಾರೆ. ಇನ್ನೊಂದೆಡೆ, ಅಕ್ಟೋಬರ್ನಲ್ಲಿ ದೊರೆ ನರುಹಿತೊ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಲಿದ್ದಾರೆ ಎಂದು ಮೋದಿ ಈ ವೇಳೆ ಅಬೆಗೆ ತಿಳಿಸಿದ್ದಾರೆ.
ಜಪಾನ್ನಲ್ಲಿ ಜೈ ಶ್ರೀರಾಂ!
ಪ್ರಧಾನಿ ಮೋದಿ ಜಪಾನ್ನ ಕೊಬೆಯಲ್ಲಿರುವ ಹ್ಯೂಗೋ ಪ್ರಿಫೆಕ್ಟರ್ ಗೆಸ್ಟ್ ಹೌಸ್ಗೆ ಕಾಲಿಡುತ್ತಿದ್ದಂತೆಯೇ ಜೈ ಶ್ರೀರಾಮ್, ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದೆ. ಇಲ್ಲಿನ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.
ಮೋದಿ ಆಗಮಿಸುತ್ತಿದ್ದಂತೆಯೇ ಇಲ್ಲಿ ಸೇರಿದ್ದ ಜನರು ಘೋಷಣೆಗಳನ್ನು ಕೂಗಿದರು. ಭಾರತದ ಅಭಿವೃದ್ಧಿಯಲ್ಲಿ ಜಪಾನ್ ಮಹತ್ವದ ಪಾತ್ರ ವಹಿಸಿದೆ. ಕಾರಿನಿಂದ ಬುಲೆಟ್ ರೈಲಿನವರೆಗೂ ಜಪಾನ್ನ ಸ್ನೇಹ ಹಸ್ತ ಚಾಚಿದೆ. ಭಾರತದ ಬಹತೇಕ ದೊಡ್ಡ ಯೋಜನೆಗಳಲ್ಲಿ ಜಪಾನ್ನ ಪಾತ್ರವಿದೆ ಎಂದು ಮೋದಿ ಹೇಳಿದ್ದಾರೆ.
ಮಹಾತ್ಮಾ ಗಾಂಧಿ ಹೇಳುತ್ತಿದ್ದ ಮೂರು ಮಂಗಗಳ ಕಥೆಯು 17ನೇ ಶತಮಾನದ ಜಪಾನ್ ಜಾನಪದ ಕಥೆಯಾಗಿತ್ತು. ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಕೇಳಬೇಡ, ಕೆಟ್ಟದ್ದನ್ನು ನುಡಿಯಬೇಡ ಎಂಬ ನೀತಿಯುಳ್ಳ ಈ ಕಥೆಯನ್ನು ಅವರು ಜಪಾನ್ನಿಂದ ತಂದು ನಮಗೆ ಹೇಳಿದ್ದರು ಎಂದೂ ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ.
ಜಿ20ಯಲ್ಲಿ ವ್ಯಾಪಾರ, ಯುದ್ಧದ್ದೇ ಸದ್ದು!
ಒಸಾಕಾದಲ್ಲಿ 28, 29ರಂದು ನಡೆಯಲಿರುವ ಜಿ20 ಶೃಂಗದಲ್ಲಿ ಈ ಬಾರಿ ಅತಿ ಹೆಚ್ಚು ಚರ್ಚೆಗೆ ಒಳಗಾಗುವ ವಿಷಯವೇ ಅಮೆರಿಕ, ಚೀನ ಹಾಗೂ ಇತರ ರಾಷ್ಟ್ರಗಳ ಮಧ್ಯೆ ನಡೆಯುತ್ತಿರುವ ವ್ಯಾಪಾರ ಸಂಘರ್ಷ ಎಂಬುದು ಬಹುತೇಕ ನಿಚ್ಚಳವಾಗಿದೆ. ಶುಕ್ರವಾರ ಹಾಗೂ ಶನಿವಾರ ನಡೆಯಲಿರುವ ಶೃಂಗದಲ್ಲಿ ವ್ಯಾಪಾರ ಸಂಘರ್ಷ, ಇರಾನ್ ಹಾಗೂ ಅಮೆರಿಕದ ಸಂಘರ್ಷ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಆದರೆ ಅದೆಲ್ಲಕ್ಕಿಂತ ಹೆಚ್ಚು ಪ್ರಮುಖವಾಗಿ ವ್ಯಾಪಾರ ಸಂಘರ್ಷ ಚರ್ಚೆಗೆ ಒಳಗಾಗ ಲಿದೆ. ಶನಿವಾರ ಟ್ರಂಪ್ ಹಾಗೂ ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮಾತುಕತೆ ನಡೆಸಲಿದ್ದಾರೆ. ಇರಾನ್ ಹಾಗೂ ಅಮೆ ರಿಕದ ಮಧ್ಯೆ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಸಂಘರ್ಷವೂ ಚರ್ಚೆ ಬರುವ ಸಾಧ್ಯತೆಯಿದೆ.
ಭಾರತದ ವಿರುದ್ಧ ಹರಿಹಾಯ್ದ ಟ್ರಂಪ್
ಭಾರತ ವಿಧಿಸಿರುವ ತೆರಿಗೆಯನ್ನು ಒಪ್ಪಲಾಗದು. ಶೀಘ್ರವೇ ಹೆಚ್ಚುವರಿ ತೆರಿಗೆಯನ್ನು ಹಿಂಪಡೆಯಬೇಕು ಎಂದು ಭಾರತದ ವಿರುದ್ಧ ಟ್ರಂಪ್ ಹರಿಹಾಯ್ದಿದ್ದಾರೆ. ಇತ್ತೀಚೆಗೆ ಭಾರತವನ್ನು ಆದ್ಯತೆಯ ರಾಷ್ಟ್ರ ಎಂಬ ಪಟ್ಟಿಯಿಂದ ಅಮೆರಿಕ ಕೈಬಿಟ್ಟಿದ್ದಕ್ಕೆ ಪ್ರತಿಯಾಗಿ, ಅಮೆರಿಕದ 28 ಉತ್ಪನ್ನಗಳ ಮೇಲೆ ಭಾರತ ತೆರಿಗೆ ಹೆಚ್ಚಳ ಮಾಡಿತ್ತು. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ಮಾತುಕತೆ ನಡೆಸಲಿದ್ದು, ಇದಕ್ಕೂ ಮುನ್ನ ಟ್ರಂಪ್ ಈ ಹೇಳಿಕೆ ಮಹತ್ವ ಪಡೆದಿದೆ. ಅಲ್ಲದೆ ಮೋದಿ ಜೊತೆಗೆ ಮಾತುಕತೆ ವೇಳೆ ಈ ವಿಚಾರವನ್ನು ಪ್ರಸ್ತಾವಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು