ಹಡಗು ಮುಳಗಡೆ: ಇಬ್ಬರು ಸಾವು; 9 ಮಂದಿ ಪ್ರಜ್ಞಾಹೀನ ಸ್ಥಿತಿ

ದ.ಕೊರಿಯಾ-ಜಪಾನ್‌ ದ್ವೀಪದಲ್ಲಿ ಘಟನೆ

Team Udayavani, Jan 25, 2023, 8:39 PM IST

ಹಡಗು ಮುಳಗಡೆ: ಇಬ್ಬರು ಸಾವು; 9 ಮಂದಿ ಪ್ರಜ್ಞಾಹೀನ ಸ್ಥಿತಿ

ಸಿಯೋಲ್‌ : ದಕ್ಷಿಣ ಕೊರಿಯಾ ಹಾಗೂ ಜಪಾನ್‌ ನಡುವಿನ ಜೆಜು ದ್ವೀಪ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಸರಕು-ಸಾಗಣೆ ಹಡಗೊಂದು ಮುಳುಗಡೆಗೊಂಡಿದ್ದು, 22 ಸಿಬ್ಬಂದಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

12 ಮಂದಿಯನ್ನು ಪಾರು ಮಾಡಲಾಗಿದ್ದು, ಉಳಿದ 8 ಮಂದಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಜಪಾನಿನ ನಾಗಸಾಕಿಯಿಂದ 160 ಕಿ.ಮೀ ಹಾಗೂ ದ. ಕೊರಿಯಾದಿಂದ 150 ಕಿ.ಮೀ.

ದೂರದಲ್ಲಿರುವ ದ್ವೀಪ ಪ್ರದೇಶದಲ್ಲಿ ಬುಧವಾರ ಹಡಗು ಮುಳುಗಡೆಯಾಗಿದ್ದು, ಪ್ರದೇಶದಲ್ಲಿ ತೀವ್ರ ಗಾಳಿಯಿದ್ದ ಕಾರಣ ಪಾರುಗಾಣಿಕಾ ಕಾರ್ಯಾಚರಣೆಗೆ ವಿಮಾನಗಳು ಹಾಗೂ ನೌಕೆಗಳು ಧಾವಿಸಲು ತಡವಾಗಿದೆ.

22 ಮಂದಿಯ ಪೈಕಿ 14 ಮಂದಿಯನ್ನು ಪಾರು ಮಾಡಲಾಗಿತ್ತಾದರೂ, ಅವರಲ್ಲಿ 9 ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾರಣ ಜಪಾನ್‌ಗೆ ಏರ್‌ಲಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯದಲ್ಲಿ ಇಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವವರು ಜೀವಂತವಿರುವರೇ ಎಂಬುದನ್ನು ಇನ್ನೂ ಸಿಬ್ಬಂದಿ ತಿಳಿಸಿಲ್ಲ.

ಹಡಗಿನಲ್ಲಿದ್ದ ಸಿಬ್ಬಂದಿ ಪೈಕಿ 14 ಮಂದಿ ಚೀನಾ ಪ್ರಜೆಗಳಿದ್ದು, ಅವರಲ್ಲಿ 5 ಮಂದಿಯನ್ನು ಪಾರು ಮಾಡಲಾಗಿದೆ. ಅವರು ಜೀವಂತವಾಗಿದ್ದಾರೆ. 8 ಮಂದಿ ಮ್ಯಾನ್ಮಾರ್‌ ಮೂಲದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಣೆಯಾಗಿರುವ ಸಿಬ್ಬಂದಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. 6,551 ಟನ್‌ ತೂಕವಿದ್ದ ಜಿನ್‌ ಟಿಯಾನ್‌ ಎನ್ನುವ ಹಡಗು ಮುಳುಗಡೆಯಾಗಿದೆ ಎನ್ನಲಾಗಿದ್ದು, ಇದು ಹಾಂಗ್‌ ಕಾಂಗ್‌ ಮೂಲದ ಲಾಂಗ್‌ ಬ್ರೈಟ್‌ ಶಿಪ್ಪಿಂಗ್‌ ಲಿಮಿಟೆಡ್‌ ಸಂಸ್ಥೆಗೆ ಸೇರಿದ್ದು ಎನ್ನಲಾಗಿದೆ.

ಸಂಕಷ್ಟ ಕರೆ ಬಂದ ಬಳಿಕ ಮುಳುಗಡೆ
ಮಂಗಳವಾರ ತಡರಾತ್ರಿ 11.15ರ ಸಮಯಕ್ಕೆ ಹಡಗಿನಿಂದ ಕರಾವಳಿ ಭದ್ರತಾಪಡೆಗೆ ಅಪಾಯದ ಕರೆ ಬಂದಿದೆ. ಆದರೆ, ಪ್ರದೇಶದಲ್ಲಿ ಗಂಟೆಗೆ 56 ಕಿ.ಮೀ ವೇಗದಲ್ಲಿ 13 ಅಡಿ ಎತ್ತರದಲ್ಲಿ ಗಾಳಿ ಬೀಸುತ್ತಿದ್ದ ಕಾರಣ, ಅಲರ್ಟ್‌ ನೀಡಿದದ ಹಿನ್ನೆಲೆ ಪಾರುಗಾಣಿಕೆ ಕಾರ್ಯಾಚರಣೆಗೆ ತೆರಳಲು ಸಾಧ್ಯವಾಗಿಲ್ಲ. ಬುಧವಾರ ಬೆಳಗ್ಗಿನ ಜಾವ 2.41ರ ಸಮಯಕ್ಕೆ ಹಡಗಿನ ಕ್ಯಾಪ್ಟನ್‌, ಸ್ಯಾಟ್‌ಲೆçಟ್‌ ಕರೆ ಮಾಡಿದ್ದು, ಹಡಗು ಮುಳುಗುತ್ತಿರುವ ಹಿನ್ನೆಲೆ ಸಿಬ್ಬಂದಿ ದ್ವೀಪಕ್ಕೆ ಜಿಗಿಯಲು ನಿರ್ಧರಿಸಿದ್ದಾರೆ ಎಂದು ಕೊನೆಯ ಸಂವಹನ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

-ದ್ವೀಪದಲ್ಲಿ ಕಾರ್ಗೋ ಹಡಗು ಮುಳುಗಡೆ
– 14 ಚೀನಿ, 8ಮ್ಯಾನ್ಮಾರ್‌ ಪ್ರಜೆಗಳಿದ್ದ ಹಡಗು
– 5 ಚೀನಿಯರು ಅಪಾಯದಿಂದ ಪಾರು
– ತೀವ್ರ ಗಾಳಿ ಹಿನ್ನೆಲೆ ಮುಳುಗಡೆ ಸಾಧ್ಯತೆ

 

 

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.