ಚೀನಕ್ಕೆ ನಮ್ಮ ಅಕ್ಕಿ


Team Udayavani, Jun 10, 2018, 6:00 AM IST

ee-23.jpg

ಖೀಂಗ್ದಾವೋ: ಶಾಂಘೈ ಸಹಕಾರ ಸಂಘಟನೆ ಸಭೆಗಾಗಿ ಚೀನಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಖೀಂಗ್ದಾವೋದಲ್ಲಿ ನಡೆಯುತ್ತಿರುವ ಸಮ್ಮೇಳನದ ಆವರಣದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಎರಡು ಒಪ್ಪಂದಗಳಿಗೆ ಸಹಿಯನ್ನೂ ಹಾಕಲಾಗಿದೆ.

ಒಂದೂವರೆ ತಿಂಗಳ ಹಿಂದೆ ವುಹಾನ್‌ನಲ್ಲಿ ನಡೆದ ಸಮ್ಮೇಳನದ ವೇಳೆ ಇಬ್ಬರೂ ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಇದೀಗ ಮತ್ತೂಮ್ಮೆ ಭೇಟಿಯಾಗಿದ್ದು, ಜಾಗತಿಕ ಮತ್ತು ಉಭಯ ದೇಶಗಳಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದು ಭಾರತ ಮತ್ತು ಚೀನಾ ಸಂಬಂಧವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಭಯ ದೇಶಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿಂದಿನ ಭೇಟಿಯಲ್ಲಿ ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನದ ಮೇಲ್ವಿಚಾರಣೆಯನ್ನೂ ಈ ವೇಳೆ ನಡೆಸಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಮತ್ತು ಕ್ಸಿ ಮಧ್ಯೆ ಇದು 14ನೇ ಸಭೆಯಾಗಿದೆ ಎಂದು ಭಾರತಕ್ಕೆ ಚೀನಾದ ರಾಯಭಾರಿ ಲುವೊ ಝಾವೊಹುಯಿ ಹೇಳಿದ್ದಾರೆ. ಎರಡು ದಿನಗಳ ಭೇಟಿಗಾಗಿ ಮೋದಿ ಶನಿವಾರ ಬೆಳಗ್ಗೆ ಚೀನಾಗೆ ಆಗಮಿಸಿದ್ದಾರೆ.

ಭಾರತಕ್ಕೆ ಮೊದಲ ಸಮ್ಮೇಳನ: ಕಳೆದ ವರ್ಷವಷ್ಟೇ ಭಾರತ ಹಾಗೂ ಪಾಕಿಸ್ತಾನ ಎಸ್‌ಸಿಒಗೆ ಸೇರಿದ್ದು, ಇದೇ ಮೊದಲ ಬಾರಿಗೆ ಎಸ್‌ಸಿಒ ಸಮ್ಮೇಳನದಲ್ಲಿ ಭಾರತ ಭಾಗವಹಿಸುತ್ತಿದೆ. ಹೀಗಾಗಿ ಮೋದಿ ಮೊದಲ ಬಾರಿಗೆ ಈ ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ಎಸ್‌ಸಿಒ ಒಟ್ಟು ಎಂಟು ಸದಸ್ಯ ದೇಶಗಳನ್ನು ಹೊಂದಿದೆ. ಈ ದೇಶಗಳು ಒಟ್ಟಾಗಿ ವಿಶ್ವದ ಶೇ.42ರಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೆ, ವಿಶ್ವದ ಜಿಡಿಪಿಯಲ್ಲಿ ಶೇ.20ರಷ್ಟು ಪಾಲು ಹೊಂದಿದೆ. 2005ರಿಂದಲೂ ಭಾರತ ಕೇವಲ ವೀಕ್ಷಕನಾಗಿತ್ತು. ಹೀಗಾಗಿ ಸಚಿವ ಮಟ್ಟದ ಸಭೆಗಳಲ್ಲಿ ಮಾತ್ರವೇ ಭಾಗವಹಿಸುತ್ತಿತ್ತು.

2019ಕ್ಕೆ ಜಿನ್‌ಪಿಂಗ್‌ ಭಾರತಕ್ಕೆ: 2019ರಲ್ಲಿ ಭಾರತಕ್ಕೆ ಆಗಮಿಸುವಂತೆ ಜಿನ್‌ಪಿಂಗ್‌ರನ್ನು ಮೋದಿ ಆಹ್ವಾನಿಸಿದ್ದು, ಜಿನ್‌ಪಿಂಗ್‌ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಹೇಳಿದ್ದಾರೆ.

ಮಹತ್ವದ ಒಪ್ಪಂದಗಳು
ಚೀನಾದಿಂದ ಭಾರತಕ್ಕೆ ಬ್ರಹ್ಮಪುತ್ರಾ ನದಿಯ ನೀರಿನ ಮಾಹಿತಿ ಹಂಚಿಕೊಳ್ಳುವ ಒಪ್ಪಂದಕ್ಕೆ ಈ ವೇಳೆ ಉಭಯ ದೇಶಗಳು ಸಹಿ ಹಾಕಿವೆ. ಅಲ್ಲದೆ, ಬಾಸ್ಮತಿ ಹೊರತಾದ ಅಕ್ಕಿಯೂ ಸೇರಿದಂತೆ ಎಲ್ಲ ಅಕ್ಕಿಯನ್ನೂ ಚೀನಾಗೆ ಭಾರತದಿಂದ ರಫ್ತು ಮಾಡುವು ದಕ್ಕಾಗಿ ಫೈಟೋಸಾನಿಟರಿ ನಿಯಮಾವಳಿ ಒಪ್ಪಂದಕ್ಕೂ ಸಹಿ ಹಾಕಲಾಗಿದೆ.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.