ಬೇಹು ಬಳಿಕ ಭಾರತದ ವಿರುದ್ಧ ಜೈವಿಕ ಯುದ್ಧಕ್ಕೆ ಚೀನ ಸಿದ್ಧತೆ

ಪಾಕಿಸ್ಥಾನ ಜತೆಗೂಡಿ ಪ್ರಬಲ ರೋಗಕಾರಕಗಳ ಸಂಶೋಧನೆ ; ಆಸೀಸ್‌ನ 'ದ ಕ್ಲಾಕ್ಸನ್‌' ಮಾಧ್ಯಮ ಸಂಸ್ಥೆಯ ತನಿಖೆ

Team Udayavani, Sep 16, 2020, 6:25 AM IST

ಬೇಹು ಬಳಿಕ ಭಾರತದ ವಿರುದ್ಧ ಜೈವಿಕ ಯುದ್ಧಕ್ಕೆ ಚೀನ ಸಿದ್ಧತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ/ಬೀಜಿಂಗ್‌: ದೇಶದ 10 ಸಾವಿರಕ್ಕೂ ಅಧಿಕ ಪ್ರಮುಖರ ಮೇಲೆ ಬೇಹುಗಾರಿಕೆ ನಡೆಸಿರುವ ಚೀನ ಈಗ ಜೈವಿಕ ಯುದ್ಧ ನಡೆಸಲು ಮುಂದಾಗಿದೆ.

ಚೀನದ ಸನ್ಮಿತ್ರ ರಾಷ್ಟ್ರ ಪಾಕಿಸ್ಥಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ಜಗತ್ತಿನ ವ್ಯವಸ್ಥೆ ಹಳಿತಪ್ಪಿಸಿದ ವುಹಾನ್‌ ಇನ್ಸ್ಟಿಟ್ಯೂಟ್‌ ಆಫ್ ವೈರಾಲಜಿ ಜತೆಗೂಡಿ ಪ್ರಬಲ ರೋಗಕಾರಕಗಳ ಅಭಿವೃದ್ಧಿ ಬಗ್ಗೆ ಸಂಶೋಧನೆ ನಡೆಸುತ್ತಿವೆ.

ಈ ಬಗ್ಗೆ ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ “ದ ಕ್ಲಾಕ್ಸನ್‌’ ನಡೆಸಿರುವ ಅಧ್ಯಯನದಲ್ಲಿ ಗೊತ್ತಾಗಿದೆ. ಈ ವರ್ಷದ ಆರಂಭದಲ್ಲಿಯೇ ಸಂಸ್ಥೆ ಈ ಬಗ್ಗೆ ಎರಡೂ ರಾಷ್ಟ್ರಗಳ ದುಸ್ಸಾಹಸದ ಬಗ್ಗೆ ವರದಿ ನೀಡಿತ್ತು.

2,800ಕ್ಕೂ ಅಧಿಕ ಒಂಟೆಗಳು, 7 ಸಾವಿರಕ್ಕೂ ಅಧಿಕ ಮಂದಿ ರೈತರ ಮೇಲೆ ‘ಪ್ರಾಣಿಗಳಿಂದ ಮಾನವರಿಗೆ’ ವರ್ಗಾವಣೆಯಾಗುವ ಹಾನಿಕಾರಕ ರೋಗಕಾರಕಗಳನ್ನು ಪ್ರಯೋಗಿಸುವ ಬಗ್ಗೆ ಸಂಶೋಧನೆ ನಡೆಸುವಲ್ಲಿ ನಿರತವಾಗಿದೆ ಎಂದು ವರದಿ ಹೇಳಿದೆ.

ಜಗತ್ತಿಗೆ ಕೋವಿಡ್ 19 ಸೋಂಕನ್ನು ನೀಡಿದ ವುಹಾನ್‌ನ ಲ್ಯಾಬ್‌ನ ವಿಜ್ಞಾನಿಗಳು 2015ರಿಂದಲೇ ಈ ಬಗ್ಗೆ ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಈ ಪೈಕಿ ಜಗತ್ತಿನ ಐದು ಮಾರಣಾಂತಿಕ ರೋಗಕಾರಗಳ ಮೇಲೆ ಸಂಶೋಧನೆ ನಡೆಸಲಾಗಿದೆ. ಚೀನ ಮತ್ತು ಪಾಕ್‌ ನಡೆಸಿದ ಅಧ್ಯಯನ ‘ವೆರೋ ಸೆಲ್‌’ಗಳನ್ನು ಆಧರಿಸಿದ್ದಾಗಿದೆ. ಈ ಅಧ್ಯಯನವೆಲ್ಲವೂ ಚೀನ- ಪಾಕಿಸ್ತಾನ ಆರ್ಥಿಕ ಕಾರಿಡಾರ್‌ ವ್ಯಾಪ್ತಿಯ ಮಿತಿಯಲ್ಲಿ ನಡೆದಿದೆ.

ಹೈಬ್ರಿಡ್‌ ಸಮರ: ಭದ್ರತಾ ಸಂಸ್ಥೆಗಳಿಂದ ಪರಿಶೀಲನೆ
ಚೀನದ ಹೈಬ್ರಿಡ್‌ ಸಮರದ ಮಾಹಿತಿ ಹೊರಬೀಳುತ್ತಿದ್ದಂತೆಯೇ ಭದ್ರತಾ ಸಂಸ್ಥೆಗಳು ಜಾಗೃತಗೊಂಡಿವೆ. ಭಾರತದ 10 ಸಾವಿರಕ್ಕೂ ಅಧಿಕ ಮಂದಿಯ ದತ್ತಾಂಶವನ್ನು ಚೀನ ಸಂಗ್ರಹಿಸುವ ಕುರಿತು ಈ ಸಂಸ್ಥೆಗಳು ಮಾಹಿತಿ ಕಲೆಹಾಕಲು ಆರಂಭಿಸಿವೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದ್ದು, ಸದ್ಯದಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ಗೆ ಈ ಕುರಿತು ವರದಿ ನೀಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಸ್ವಿಗ್ಗಿ, ಜೊಮ್ಯಾಟೋ ಮೇಲೂ ಕಣ್ಣು: ಇದೇ ವೇಳೆ, ದೇಶದ ಪಾವತಿ ಮತ್ತು ಆಹಾರ ಪೂರೈಕೆ ಆ್ಯಪ್‌ಗ್ಳಾಗಿರುವ ಪೇಟಿಎಂ, ಝೊಮ್ಯಾಟೋ, ಸ್ವಿಗ್ಗಿ ಸೇರಿದಂತೆ 1,400 ಕಂಪೆನಿಗಳ ಮೇಲೆ ಕೂಡ ಚೀನದ ಝೆನುÏವಾ ಕಂಪೆನಿ ನಿಗಾ ಇರಿಸಿದ ಮಾಹಿತಿ ಬಹಿರಂಗಗೊಂಡಿದೆ. ಸಂಸ್ಥೆಯ ಆಯಕಟ್ಟಿನ ಹುದ್ದೆಯಲ್ಲಿರುವವರು, ಅವುಗಳಲ್ಲಿ ಹೂಡಿಕೆ ಮಾಡಿರುವವರು ಸೇರಿದಂತೆ ಪ್ರಮುಖರ ಮೇಲೆ ನಿಗಾ ಇರಿಸಲಾಗಿದೆ. ಯೂಬರ್‌ ಇಂಡಿಯಾ, ಪೆಯು, ಫ್ಲಿಪ್‌ಕಾರ್ಟ್‌, ನಯ್‌ಕಾ, ಫೋನ್‌ ಪೆ, ಬಿಗ್‌ಬಾಸ್ಕೆಟ್‌ನ ಮಾಹಿತಿಗಳನ್ನೂ ಚೀನ ಸಂಗ್ರಹಿಸಿರುವುದು ಗೊತ್ತಾಗಿದೆ.

ಅಲಿಬಾಬಾದಿಂದ ಮಾಹಿತಿ ಕಳವು: ಚೀನದ ಇ-ಕಾಮರ್ಸ್‌ ದೈತ್ಯ ಅಲಿಬಾಬಾ ಭಾರತದಲ್ಲಿ ಹೊಂದಿರುವ 72 ಸರ್ವರ್‌ಗಳು ದೇಶದ ಗ್ರಾಹಕರ ಬಳಕೆದಾರರ ಮಾಹಿತಿ ಕಳವು ಮಾಡುತ್ತಿವೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಹೇಳಿವೆ. ಈ ವರದಿ ಆಧರಿಸಿ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.