ಚಕ್ರವ್ಯೂಹದಲ್ಲಿ ತೈವಾನ್‌?


Team Udayavani, Aug 5, 2022, 8:10 AM IST

thumb taiwan 3

ಬೀಜಿಂಗ್‌ / ತೈಪೆ / ಟೋಕಿಯೋ: ಅಮೆರಿಕದ ಪ್ರಜಾಪ್ರತಿನಿಧಿಗಳ ಸಭೆಯ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ ಭೇಟಿ ಮುಗಿಸಿ ಮರಳಿದ ಬಳಿಕ ಆ ದೇಶ ಅಕ್ಷರಶಃ ಚೀನದ ಚಕ್ರವ್ಯೂಹದೊಳಗೆ ಸಿಲುಕಿದೆ!

ಬುಧವಾರ ಮಧ್ಯಾಹ್ನದಿಂದಲೂ ದ್ವೀಪ ರಾಷ್ಟ್ರ ತೈವಾನ್‌ ಮತ್ತು ಅದರ ಸುತ್ತಲೂ ತನ್ನ ಸೇನೆಯ ಶಕ್ತಿ ಪ್ರದರ್ಶಿಸುತ್ತಿರುವ ಚೀನ, ಗುರು ವಾರ  11 ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಇವು ತೈವಾನ್‌ನ ಉತ್ತರ, ದಕ್ಷಿಣ ಮತ್ತು ಪೂರ್ವದಿಕ್ಕಿಗೆ ಹೋಗಿ ಅಪ್ಪಳಿಸಿವೆ. ತೈವಾನ್‌ನ ಸ್ಥಳೀಯ ಸಮಯದ ಪ್ರಕಾರ ಗುರುವಾರ ಮಧ್ಯಾಹ್ನ 1.56 ಮತ್ತು 4 ಗಂಟೆ ಸುಮಾರಿಗೆ ಕ್ಷಿಪಣಿಗಳ ಪ್ರಯೋಗ ನಡೆದಿದೆ.

ಚೀನದ ಈ ಪ್ರಚೋದನಾತ್ಮಕ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ತೈವಾನ್‌ ಅನ್ನು ಯುದ್ಧಕ್ಕೆ ಪ್ರಚೋದಿಸುವ ತಂತ್ರವಿದು ಎನ್ನಲಾಗುತ್ತಿದೆ. ಹಿಂದಿನಿಂದಲೂ ಚೀನ ಮತ್ತು ತೈವಾನ್‌ ಮಧ್ಯೆ ಸಂಘರ್ಷ ನಡೆಯುತ್ತಿದ್ದರೂ ಇದುವರೆಗೂ ಡ್ರ್ಯಾಗನ್‌ ದೇಶ ತೈವಾನ್‌ ವಾಯುಪ್ರದೇಶದಲ್ಲಿ ಕ್ಷಿಪಣಿ ಗಳನ್ನು ಪ್ರಯೋಗಿಸಿರಲಿಲ್ಲ.

ಇದೇ ಮೊದಲ ಬಾರಿಗೆ ಇಂಥ ನಡೆ ಅನುಸರಿಸಿರು ವುದು ಆತಂಕಕ್ಕೂ ಕಾರಣವಾಗಿದೆ. ತೈವಾನ್‌ ಹೇಳಿರುವ ಪ್ರಕಾರ, ಚೀನ ಈ ಕ್ಷಿಪಣಿಗಳನ್ನು ಮಾಸ್ತು, ಡಾಂಗ್‌ಯಿನ್‌, ವುಕ್ಯೂ ಎಂಬ ದ್ವೀಪಗಳ ಬಳಿಗೆ ಕಳುಹಿಸಿದೆ. ಆದರೆ ಈ ದ್ವೀಪಗಳನ್ನು ನಾವು ರಕ್ಷಿಸಿಕೊಳ್ಳುತ್ತೇವೆ ಎಂದು ಅಲ್ಲಿನ ರಕ್ಷಣ ಇಲಾಖೆ ಹೇಳಿದೆ.

ಚೀನದ  ನಡೆಗೆ ಪ್ರತಿಯಾಗಿ ತೈವಾನ್‌ ಕೂಡ ತನ್ನ ಸೇನೆಯನ್ನು ಸನ್ನದ್ಧಗೊಳಿ ಸುತ್ತಿದೆ. ಚೀನ ಸೇನೆಯು ಸಮರಾಭ್ಯಾಸ ನಡೆಸುತ್ತಿರುವ ಪ್ರದೇಶದ ಹತ್ತಿರಕ್ಕೇ ತನ್ನ ಪಡೆಯನ್ನು ಕಳುಹಿಸುತ್ತಿದೆ. ತನ್ನ ಬತ್ತಳಿಕೆಯಲ್ಲಿರುವ 155ಎಂಎಂ ಎಂ114 ಹೋವಿಟ್ಜರ್‌, 120ಎಂಎಂ ಮಾರ್ಟರ್ಸ್‌ಗಳನ್ನು ಕಳುಹಿಸಿದೆ. ಇದರ ಜತೆಯಲ್ಲೇ ಅತ್ತ ಅಮೆರಿಕ ಕೂಡ ತೈವಾನ್‌ನ ಪೂರ್ವದಲ್ಲಿ ತನ್ನ ಎರಡು ಸಮರ ನೌಕೆಗಳನ್ನು ಸನ್ನದ್ಧವಾಗಿರಿಸಿದೆ. ಇದರಲ್ಲಿ ಮರೈನ್‌ ಎಫ್-35ಬಿ ಯುದ್ಧ ವಿಮಾನಗಳಿವೆ.

ಜಪಾನ್‌ ಆಕ್ರೋಶ :

ಚೀನ ಸಮರಾಭ್ಯಾಸದ  4 ಕ್ಷಿಪಣಿಗಳು ಜಪಾನ್‌ನ  ಎಕಾನಾಮಿಕ್‌ ಝೋನ್‌(ಇಇ ಝೆಡ್‌) ಮೇಲೆ ಬಿದ್ದಿದ್ದು, ಇದಕ್ಕೆ ಜಪಾನ್‌ ಆಕ್ರೋಶ ವ್ಯಕ್ತಪಡಿಸಿದೆ. ಆದರೆ ಇದಕ್ಕೆ ಚೀನ, ನಮ್ಮ ಮತ್ತು ಜಪಾನ್‌ ಮಧ್ಯೆ ಸಮುದ್ರದಲ್ಲಿ ಗಡಿಯನ್ನೇ ಗುರುತಿಸಿಲ್ಲ ಎಂದಿದೆ.

ರಷ್ಯಾ ಸಮರ್ಥನೆ :

ಅತ್ತ ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಲೇ ಇರುವ ರಷ್ಯಾ, ಈಗ ತೈವಾನ್‌ ಬಳಿ ಚೀನ ನಡೆಸುತ್ತಿರುವ ಸಮರಾಭ್ಯಾಸವನ್ನು ಸಮರ್ಥಿಸಿಕೊಂಡಿದೆ. ತೈವಾನ್‌ ಸುತ್ತಲೂ ಯುದ್ಧಾಭ್ಯಾಸ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬ ಮಾತುಗಳನ್ನಾಡಿದೆ.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.