ಭಾರತೀಯರ ಕೈಲಾಸ ಮಾನಸ ಸರೋವರ ಯಾತ್ರೆಗೆ ಚೀನಾದಿಂದ ತಡೆ
Team Udayavani, Jun 26, 2017, 6:08 PM IST
ಬೀಜಿಂಗ್: ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ ಭಾರತೀಯ ಯಾತ್ರಾರ್ಥಿಗಳನ್ನು ಚೀನಾ ವಾಪಸ್ ಕಳುಹಿಸಿದ್ದು, ಯಾವ ಕಾರಣದಿಂದ ಯಾತ್ರೆಗೆ ತಡೆ ನೀಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ವಿದೇಶಾಂಗ ಸಚಿವಾಲಯ ಸಂಪರ್ಕದಲ್ಲಿ ಇದ್ದಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಮಾನಸ ಸರೋವರ ಯಾತ್ರಾರ್ಥಿಗಳನ್ನು ತಡೆದಿರುವ ವಿಷಯದ ಕುರಿತು ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯ ಪರಸ್ಪರ ಸಂಪರ್ಕದಲ್ಲಿವೆ ಎಂದು ಚೀನಾ ವಿದೇಶಾಂಗ ಸಚಿವಾಲಯ ವಕ್ತಾರ ಜೆಂಗ್ ಶುವಾಂಗ್ ತಿಳಿಸಿದ್ದಾರೆ.
ಕಳೆದ ವಾರ ಮಾನಸ ಸರೋವರ ಯಾತ್ರೆಗಾಗಿ ತೆರಳಿದ್ದ 47 ಮಂದಿ ಭಾರತೀಯರನ್ನು ಚೀನಾ ಅಧಿಕಾರಿಗಳು ಅಂತಾರಾಷ್ಟ್ರೀಯ ಗಡಿಯಲ್ಲಿ ತಡೆದು ನಿಲ್ಲಿಸಿತ್ತು. ಸಿಕ್ಕಿಂನ ನಾಥು ಲಾ ಪಾಸ್ ನಿಂದ ಮಾನಸ ಸರೋವರದತ್ತ ತೆರಳಲು ಭಾರತೀಯ ಯಾತ್ರಾರ್ಥಿಗಳಿಗೆ ಕೆಲವು ತೊಂದರೆಗಳಿದ್ದವು. ಅದಕ್ಕಾಗಿ ಚೀನಾದ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಭಾರತ ಶುಕ್ರವಾರ ಪ್ರತಿಕ್ರಿಯೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್