ಭೂಮಿಗೆ ಸೌರಶಕ್ತಿ “ನೇರಪ್ರಸಾರ’! ಚೀನದ ಕ್ಷಿಡಿಯಾನ್‌ ವಿವಿಯ ಅತ್ಯಾಧುನಿಕ ತಂತ್ರಜ್ಞಾನ

ಇದು ಸಾಧ್ಯವಾದರೆ ವೈರ್‌ ಇಲ್ಲದೇ ಬಲ್ಬ್ ಗಳಿಗೆ ಹರಿಯಲಿದೆ ಸೌರ ವಿದ್ಯುತ್‌

Team Udayavani, Jun 19, 2022, 6:55 AM IST

thumb 5 fsgzhzdhf

ಬೀಜಿಂಗ್‌: ಜಗತ್ತಿನ ಹಲವು ದೇಶಗಳು ಸೌರಶಕ್ತಿಯನ್ನು ವಿದ್ಯುತ್‌ ರೂಪದಲ್ಲಿ ಬದಲಾಯಿಸಲು ಅತ್ಯಾಧುನಿಕ, ಅತ್ಯುತ್ತಮ ಮಾರ್ಗವೇನಾದರೂ ಇವೆಯಾ ಎಂದು ಹುಡುಕುತ್ತಲೇ ಇವೆ.

ಅಮೆರಿಕ, ಭಾರತ, ರಷ್ಯಾ, ಇಂಗ್ಲೆಂಡ್‌, ಫ್ರಾನ್ಸ್‌ಗಳು ಈ ಶೋಧ ಮಾಡುತ್ತಲೇ ಇವೆ. ಆದರೆ ಚೀನ ಇದರಲ್ಲಿ ಬಲವಾದ ಯಶಸ್ಸು ಕಂಡುಕೊಂಡಿದೆ.

ಒಂದು ವೇಳೆ ಇದು ಸಾಧ್ಯವಾದರೆ, ಮುಂದೊಂದು ದಿನ ಸೌರಶಕ್ತಿಯನ್ನು ವಿದ್ಯುತ್ತಾಗಿ ಪರಿವರ್ತಿಸಿ, ತಂತಿಗಳ ಸಹಾಯವಿಲ್ಲದೇ ನೇರವಾಗಿ ಬಲ್ಬ್ ಗಳಿಗೆ ರವಾನಿಸಬಹುದು!

ಹೀಗೊಂದು ವಿಶ್ವಾಸವನ್ನು ಚೀನದ ಶಾಂಕ್ಷಿ ಪ್ರಾಂತ್ಯದ ಕ್ಷಿಡಿಯಾನ್‌ ವಿಶ್ವವಿದ್ಯಾಲಯದ ಸಂಶೋಧಕರು ವ್ಯಕ್ತಪಡಿಸಿದ್ದಾರೆ.

ಹೊಸತೇನಿದೆ?: ಸೂರ್ಯನ ಕಿರಣಗಳಿಂದ ವಿದ್ಯುತ್‌ ಉತ್ಪಾದಿಸುವ ತಂತ್ರಜ್ಞಾನ ಈಗಾಗಲೇ ಇದೆ. ಆದರೆ ಈ ತಂತ್ರಜ್ಞಾನ ಸಾಕಷ್ಟು ಬೆಳೆಯಬೇಕಿದೆ. ವಿದ್ಯುತ್‌ಗಾಗಿ ಇದನ್ನು ಅವಲಂಬಿಸುವ ಪರಿಸ್ಥಿತಿ ಎಲ್ಲೂ ಇಲ್ಲ. ಕ್ಷಿಡಿಯಾನ್‌ ವಿವಿ ಸಂಶೋಧಕರ ವಿಶೇಷತೆಯಿರುವುದೇ ಇಲ್ಲಿ. ಅವರು ಜೂ.5ರಂದು ಈ ಕ್ಷೇತ್ರದ ಪರಿಣಿತರಿಗೆ ತಾವೇನು ಮಾಡಿದ್ದೇವೆಂದು ಪ್ರಾತ್ಯಕ್ಷಿಕೆ ತೋರಿಸಿ ಸೈ ಎನಿಸಿಕೊಂಡಿದ್ದಾರೆ.

ಸಂಶೋಧಕರು ಹೇಳಿಕೊಂಡ ಪ್ರಕಾರ, ಅವರು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನದ ಮೂಲಕ ಭೂಮಿಯಿಂದ ಬಹಳ ಎತ್ತರದಲ್ಲೇ ಸೂರ್ಯನ ಬೆಳಕನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಅತಿಸೂಕ್ಷ್ಮ ತರಂಗಗಳಾಗಿ ಬದಲಾಯಿಸಲಾಗುತ್ತದೆ. ಈ ತರಂಗಗಳು ಗಾಳಿಯ ಮೂಲಕ ನೇರವಾಗಿ ಭೂಮಿಯಲ್ಲಿನ ರಿಸೀವರ್‌ಗಳಿಗೆ ತಲುಪುತ್ತವೆ. ಅಲ್ಲಿ ತರಂಗಗಳು ವಿದ್ಯುತ್ತಾಗಿ ಬದಲಾಗುತ್ತವೆ!

ಇಲ್ಲೊಂದು ಅಡಚಣೆಯೆಂದರೆ ಪ್ರಸ್ತುತ ಕೇವಲ 55 ಮೀಟರ್‌ವರೆಗೆ ಮಾತ್ರ ಗಾಳಿಯಿಂದ ರಿಸೀವರ್‌ಗಳಿಗೆ ತರಂಗಗಳನ್ನು ಕಳುಹಿಸಬಹುದು. ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದರೆ, ಅಂತರಿಕ್ಷದಲ್ಲಿ ಸುತ್ತುವ ಸೌರಫ‌ಲಕಗಳ ಮೂಲಕ ನೇರವಾಗಿ ಭೂಮಿಗೆ ಶಕ್ತಿ ಇಳಿಯುತ್ತದೆ!

ಅಷ್ಟು ಮಾತ್ರವಲ್ಲ, ಕತ್ತಲಲ್ಲಿ ಈ ತಂತ್ರಜ್ಞಾನ ಕಾರ್ಯಾಚರಿಸುವುದಿಲ್ಲ ಎಂಬ ಕೊರತೆಯನ್ನು ಹೊಸ ತಂತ್ರಜ್ಞಾನ ನೀಗಲಿದೆ. ಕಾರಣ ವಿಜ್ಞಾನಿಗಳು ಅಂತರಿಕ್ಷದಲ್ಲಿ ಅಳವಡಿಸುವ ಫ‌ಲಕಗಳು, ಭೂಮಿ ಸುತ್ತುವಾಗ ಉಂಟಾಗುವ ನೆರಳನ್ನೂ ತಪ್ಪಿಸಿಕೊಳ್ಳುವಷ್ಟು ಎತ್ತರದಲ್ಲಿರುತ್ತವಂತೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.