ಷರೀಫ್ ಬಂಧನಕ್ಕಾಗಿ ಲಾಹೋರ್ನಲ್ಲಿ ವ್ಯಾಪಕ ಭದ್ರತೆ ; ಹಲವರ ಸೆರೆ
Team Udayavani, Jul 13, 2018, 3:25 PM IST
ಲಾಹೋರ್: ಆವೆನ್ಫೀಲ್ಡ್ ಅಪಾರ್ಟ್ಮೆಂಟ್ ಪ್ರಕರಣದಲ್ಲಿ ದೋಷಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಸಂಜೆ ಅಬುಧಾಬಿಯಿಂದ ಕುಟುಂಬ ಸಮೇತ ಲಾಹೋರ್ಗೆ ಆಗಮಿಸಲಿದ್ದು, ವಿಮಾನ ನಿಲ್ದಾಣದಲ್ಲೇ ಬಂಧಿಸಿ ಜೈಲಿಗೆ ಕರೆದೊಯ್ಯಲು ಪೊಲೀಸರು ಎಲ್ಲಾ ಸಿದ್ಧತೆ ನಡೆಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ನವಾಜ್ ಷರೀಫ್ರ ಪಿಎಂಎಲ್ಎನ್ ಪಕ್ಷದ 300ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿ ಜೈಲಿನಲ್ಲಿಡಲಾಗಿದೆ.ಸೆಕ್ಷನ್ 144 ಉಲ್ಲಂಘನೆ ಮಾಡಿದ ಆರೋಪದಲ್ಲಿ ಇವರನ್ನು ವಶಕ್ಕೆ ಪಡೆದಿದ್ದಾರೆ.
ಲಾಹೋರ್ನ ಅಲ್ಲಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಎಲ್ಲಾ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ತಡೆ ಹಾಕಲಾಗಿದ್ದು, ಕೆಲವು ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಲಾಹೋರ್ ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ಇಂಟರ್ನೆಟ್ ಸೇವೆ ಸ್ಥಗಿತ ಗೊಳಿಸಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಷರೀಫನ್ನು ಜೈಲಿಗೆ ಸ್ಥಳಾಂತರಿಸಲು ಎರಡು ಹೆಲಿಕಾಪ್ಟರ್ಗಳನ್ನೂನಿಯೋಜಿಸಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಭ್ರಷ್ಟಾಚಾರ ತಡೆ ದಳ 16 ಸದಸ್ಯರ ತಂಡವನ್ನು ರೂಪಿಸಿದೆ.
ಷರೀಫ್ ಸಹೋರದ ಶಹಬಾಜ್ ಸಾವಿರಾರು ಬೆಂಬಲಿಗರೊಂದಿಗೆ ವಿಮಾನ ನಿಲ್ದಾಣದತ್ತ ಬೃಹತ್ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಆದರೆ ಅನುಮತಿ ಪಡೆಯದಿರುವ ಕಾರಣಕ್ಕೆ ಪೊಲೀಸರು ಅವಕಾಶ ನೀಡುವ ಸಾಧ್ಯತೆಗಳು ಕಡಿಮೆ.
ವಿಮಾನವನ್ನು ಸೂಕ್ತ ಭದ್ರತೆಯ ಕಾರಣ ಇಸ್ಲಮಾಬಾದ್ ವಿಮಾನ ನಿಲ್ದಾಣದತ್ತ ತಿರುಗಿಸಿ ಅಲ್ಲಿಂದಲೇ ಜೈಲಿಗೆ ಕರೆದೊಯ್ಯಲು ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋವಿಡ್ ನಿರ್ವಹಣೆ: ಪ್ರಧಾನಿ ಮೋದಿ ಯಶಸ್ಸು, ಪ್ರಜಾಪ್ರಭುತ್ವದ ಸಾಧನೆ: ಜೋ ಬೈಡೆನ್ ಶ್ಲಾಘನೆ
ಆಫ್ರಿಕಾ: ಮಹಿಳೆಯನ್ನು ಕೊಂದ ಟಗರು, ಮೂರು ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಬದುಕು ಇನ್ನಷ್ಟು ದುಸ್ತರ: ಶ್ರೀಲಂಕಾದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 420 ರೂಪಾಯಿ!
ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
ಚೀನ ತಡೆಗೆ ಹೊಸ ವೇದಿಕೆ: ಅಮೆರಿಕ ನೇತೃತ್ವದಲ್ಲಿ ಐಪಿಇಎಫ್ ರಚನೆ
MUST WATCH
ಹೊಸ ಸೇರ್ಪಡೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ