ಬಣ್ಣ ಬದಲಾವಣೆ, ಮಿಮಿಕ್ರಿ ಮೂಲಕ ವಿಷಕಾರಿ ಸರ್ಪಗಳನ್ನೇ ಬೆಚ್ಚಿಬೀಳಿಸುತ್ತೇ ಈ ಕಾಡುಗಪ್ಪೆ!


Team Udayavani, Oct 26, 2019, 5:40 PM IST

Toad-Snake

ವಾಷಿಂಗ್ಟನ್: ಮನುಷ್ಯ ಪ್ರಪಂಚದಲ್ಲಿ ಮಿಮಿಕ್ರಿ (ಅನುಕರಣೆ) ಮಾಡುವುದು ಸರ್ವೆ ಸಾಮಾನ್ಯ. ಖುಷಿಪಡಿಸಲು, ಹೊಗಳಿಕೆ ಗಿಟ್ಟಿಸಿಕೊಳ್ಳಲು ಮಿಮಿಕ್ರಿ ಮಾಡಲಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತದೆ. ಆದರೆ ಪ್ರಾಣಿ ಪ್ರಪಂಚದಲ್ಲಿ ಮಿಮಿಕ್ರಿ ಬಳಕೆಯಾಗೋದು ಪ್ರಾಣ ರಕ್ಷಿಸಿಕೊಳ್ಳಲು! ಇದಕ್ಕೊಂದು ಹೊಸ ಸೇರ್ಪಡೆ ಆಫ್ರಿಕಾದ ಕಾಡುಗಳಲ್ಲಿ ಪತ್ತೆಯಾದ ಕಾಂಗೋಲೀಸೆ ಎಂಬ ಜಾತಿಯ ದೊಡ್ಡ ಗಾತ್ರದ ಕಾಡುಗಪ್ಪೆ.

ವಿಷ ಸರ್ಪಗಳು ತಮ್ಮನ್ನು ನುಂಗಲು ಅಥವಾ ದಾಳಿ ನಡೆಸಲು ಬರುತ್ತವೆ ಎಂಬ ಅಪಾಯದ ಮುನ್ಸೂಚನೆ ಸಿಕ್ಕಾಗ ಅಥವಾ ತುಂಬಾ ಹೆದರಿಕೆಗೆ ಒಳಗಾದ ಹಾವುಗಳನ್ನೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ಈ ಕಾಡುಗಪ್ಪೆ ಮೈಯ ಮೇಲ್ಭಾಗವನ್ನು ತದ್ರೂಪಿ ಹಾವಿನಂತೆ ಬದಲಾಯಿಸಿಕೊಳ್ಳುತ್ತದೆ.

ಅಷ್ಟೇ ಅಲ್ಲ ಈ ಕಾಡುಗಪ್ಪೆ ಬಗ್ಗೆ ಅಧ್ಯಯನ ನಡೆಸಿದ್ದ ವಿಜ್ಞಾನಿಗಳಿಗೆ ಇದರ ಮಿಮಿಕ್ರಿ ಅಚ್ಚರಿ ಮೂಡಿಸಿದೆ. ಈ ಕಾಡುಗಪ್ಪೆ ತೀವ್ರ ಅಪಾಯಕಾರಿ ವಿಷದ ಹಾವುಗಳಂತೆ ಬದಲಾಗುತ್ತದೆ. ಹಾವಿನ ಕಂದು ಬಣ್ಣದ ತಲೆಯಂತೆ ಬಣ್ಣ ಬದಲಾಯಿಸುತ್ತದೆ. ಅಲ್ಲದೇ ಹಾವಿನಂತೆ ಹಿಸ್…ಹಿಸ್ ಶಬ್ದವನ್ನೂ ಹೊರಡಿಸುತ್ತದೆ. ಎದುರಾಳಿ ಹಾವಿಗೆ ಚಳ್ಳೆ ಹಣ್ಣು ತಿನ್ನಿಸಲು ಈ ಕಾಡುಗಪ್ಪೆ ತನ್ನ ಕಣ್ಣ ಗುಡ್ಡೆಯನ್ನು ಇಳಿಸಿ ಹಾವಿನಂತೆಯೇ ತಲೆಯನ್ನು ಹಿಗ್ಗಿಸಿ ಬೇಟೆಯಾಡಲು ಬಂದ ವಿಷ ಜಂತುವನ್ನೇ ಯಾಮಾರಿಸಿ ಬಿಡುತ್ತದೆ ಎಂದು ವರದಿ ವಿವರಿಸಿದೆ.

ಈ ಕಾಡುಗಪ್ಪೆಯನ್ನು ಮೇಲ್ನೋಟಕ್ಕೆ ಗಮನಿಸಿದರೆ ಹಾವಿನಂತೆಯೇ ಕಾಣಿಸುತ್ತದೆ. ನ್ಯೂಸ್ ವೀಕ್ ವರದಿ ಪ್ರಕಾರ, ಕಾಡುಗಪ್ಪೆಯ ಅಚ್ಚರಿಯಾಗುವ ರೀತಿಯಲ್ಲಿ ರೂಪಾಂತರ ಹೊಂದುವ ಮೂಲಕ ಎದುರಾಳಿ ಬೇಟೆಗಾರನನ್ನು ದೂರ ಉಳಿಯುವಂತೆ ಮಾಡಿ ತನ್ನ ಪ್ರಾಣರಕ್ಷಿಸಿಕೊಳ್ಳುತ್ತದೆ. ಒಮ್ಮೊಮ್ಮೆ ಭಾರೀ ವಿಷಪೂರಿತ ಹಾವು ಮತ್ತು ಕಾಡುಗಪ್ಪೆ ನಡುವಿನ ವ್ಯತ್ಯಾಸವನ್ನು ಕಂಡುಹಿಡಿಯುವುದು ಕೂಡಾ ಕಷ್ಟವಾಗುತ್ತದೆ ಎಂದು ವರದಿ ವಿವರಿಸಿದೆ.

ಈ ಕಾಡುಗಪ್ಪೆಯ ಊಸರವಳ್ಳಿ ಆಟ ಬೆಳಕಿಗೆ ಬಂದಿದ್ದು ಇತ್ತೀಚೆಗೆ ಎಲಿ ಗ್ರೀನ್ ಬೌಮ್ ಪ್ರಕಟಿಸಿದ ಅಧ್ಯಯನ ವರದಿಯಿಂದ. ಎಲಿ ಅವರು ದ ಯೂನಿರ್ವಸಿಟಿ ಆಫ್ ಟೆಕ್ಸಾಸ್ ನಲ್ಲಿ ಜೈವಿಕ ವಿಜ್ಞಾನದ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಅಧ್ಯಯನ ವರದಿಯನ್ನು ಇತ್ತೀಚೆಗೆ ಜರ್ನಲ್ ಆಫ್ ನ್ಯಾಚುರಲ್ ಹಿಸ್ಟರಿಯಲ್ಲಿ ಪ್ರಕಟಗೊಂಡಿತ್ತು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.