Takeoff ಆದ ಕೆಲವೇ ಹೊತ್ತಿನಲ್ಲಿ ಪೈಲಟ್‌ಗಳು ನಿದ್ದೆಗೆ ಜಾರಿ ದಿಕ್ಕು ತಪ್ಪಿದ ವಿಮಾನ…


Team Udayavani, Mar 11, 2024, 11:23 AM IST

Takeoff ಆದ ಕೆಲವೇ ಹೊತ್ತಿನಲ್ಲಿ ನಿದ್ದೆಗೆ ಜಾರಿದ ಪೈಲಟ್‌ಗಳು… ದಿಕ್ಕು ತಪ್ಪಿದ ವಿಮಾನ

ಜಕಾರ್ತ: ಇಂಡೋನೇಷ್ಯಾದಲ್ಲಿ ಬಾಟಿಕ್ ವಿಮಾನವೊಂದರ ಇಬ್ಬರು ಪೈಲಟ್ ಗಳು ನಿದ್ದೆಗೆ ಜಾರಿದ ಪರಿಣಾಮ ವಿಮಾನ ದಿಕ್ಕು ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಈ ವರ್ಷದ ಜನವರಿ ತಿಂಗಳಿನಲ್ಲಿ ನಡೆದಿದ್ದು ಎನ್ನಲಾಗಿದ್ದು. ಆದರೆ ಅರ್ಧ ಗಂಟೆಯ ನಂತರ ನಿದ್ರೆಗೆ ಜಾರಿದ ಪೈಲಟ್ ಎಚ್ಚರಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಜವಾಬ್ದಾರಿಯುತ ಪೈಲಟ್ ಮತ್ತು ಸಹ ಪೈಲಟ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪೈಲಟ್‌ಗಳು ನಿದ್ರೆಗೆ ಜಾರಿದಾಗ ಈ ವಿಮಾನದಲ್ಲಿ ಸುಮಾರು 153 ಪ್ರಯಾಣಿಕರಿದ್ದರು. ಸುಲವೇಸಿಯಿಂದ ಜಕಾರ್ತಕ್ಕೆ ಈ ವಿಮಾನ ಹೊರಡುವ ವೇಳೆ ಈ ಘಟನೆ ನಡೆದಿದೆ. ಆದರೆ, ಈ ಘಟನೆಯ ಹಿಂದಿನ ರಾತ್ರಿ ಕರ್ತವ್ಯದಲ್ಲಿದ್ದ ಸಹ ಪೈಲಟ್ ಸರಿಯಾಗಿ ವಿಶ್ರಾಂತಿ ತೆಗೆದುಕೊಳ್ಳಲಿಲ್ಲ ಎಂದು ಹೇಳಲಾಗಿದೆ.

ಮರುದಿನ ಸುಲವೇಸಿ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್ ಆದ ಅರ್ಧ ಗಂಟೆಯ ನಂತರ ಫ್ಲೈಟ್ ಕ್ಯಾಪ್ಟನ್ ಸಹ ಪೈಲಟ್‌ ಬಳಿ ವಿಶ್ರಾಂತಿ ಪಡೆಯಲು ಅನುಮತಿ ಕೇಳಿದ್ದಾರೆ ಅದಕ್ಕೆ ಸಹ ಪೈಲೆಟ್ ಅನುಮತಿ ನೀಡಿದ್ದಾರೆ. ಅದರಂತೆ ವಿಮಾನ ಪೈಲೆಟ್ ವಿಶ್ರಾಂತಿಗೆ ತೆರಳಿದ್ದಾರೆ ಇದಾದ ಬಳಿಕ ಸಹ ಪೈಲಟ್ ಕರ್ತವ್ಯದಲ್ಲಿದ್ದ ವೇಳೆ ಅವರೂ ನಿದ್ರೆಗೆ ಜಾರಿದ್ದಾರೆ, ಈ ವೇಳೆ ಜಕಾರ್ತದಲ್ಲಿರುವ ಏರಿಯಾ ಕಂಟ್ರೋಲ್ ಸೆಂಟರ್ ವಿಮಾನವನ್ನು ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಏರ್ ಕಂಟ್ರೋಲ್ ಸೆಂಟರ್ ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಾರಣ ಇಬ್ಬರೂ ಪೈಲೆಟ್ ಗಳು ನಿದ್ರೆಗೆ ಜಾರಿದ್ದಾರೆ, ಇದಾದ ಬಳಿಕ ಸುಮಾರು ಅರ್ಧ ಗಂಟೆ ಕಳೆದ ಬಳಿಕ ವಿಶ್ರಾಂತಿಯಲ್ಲಿದ್ದ ಪೈಲೆಟ್ ಎಚ್ಚರಗೊಂಡು ನೋಡಿದಾಗ ಸಹ ಪೈಲೆಟ್ ನಿದ್ರೆಗೆ ಜಾರಿದ್ದು ಗಮನಕ್ಕೆ ಬಂದಿದೆ ಕೂಡಲೇ ಪೈಲೆಟ್ ಸಹ ಪೈಲೆಟ್ ನನ್ನ ಎಬ್ಬಿಸಿದ್ದಾರೆ, ಈ ವೇಳೆ ವಿಮಾನ ಸರಿಯಾದ ದಾರಿಯಲ್ಲಿ ಸಂಚರಿಸುತ್ತಿಲ್ಲ ಎಂಬುದು ಗೊತ್ತಾಗಿದೆ.

ಕೂಡಲೇ ಪೈಲೆಟ್ ಗಳು ಎಟಿಸಿಯಿಂದ ಬಂದ ಕರೆಗಳಿಗೆ ಪ್ರತಿಕ್ರಿಯಿಸಿ ಕೂಡಲೇ ವಿಮಾನವನ್ನು ಸರಿಯಾದ ಮಾರ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಸುರಕ್ಸಿತವಾಗಿ ಜಾಕರ್ತ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಿದ್ದಾರೆ.

ಇಂಡೋನೇಷ್ಯಾದ A320 ಏರ್‌ಬಸ್‌ನಲ್ಲಿ ಈ ಘಟನೆ ನಡೆದಿದ್ದು ಈ ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಸೇರಿದಂತೆ 153 ಪ್ರಯಾಣಿಕರಿದ್ದು ಯಾರಿಗೂ ಯಾವುದೇ ಸಮಸ್ಯೆ ತಲೆದೂರಲಿಲ್ಲ ಎನ್ನಲಾಗಿದ್ದು ಆದರೆ ಪೈಲೆಟ್ ಗಳು ನಿದ್ರೆಗೆ ಜಾರಿದ ವಿಚಾರ ಗಂಭೀರವಾಗಿ ಪರಿಗಣಿಸಿದ ಸಂಸ್ಥೆ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ: Tiger: ಮೇಲಿನ ಕುರುವಳ್ಳಿ ವ್ಯಾಪ್ತಿಯ ವಿಠಲನಗರ ಸಮೀಪ ಹುಲಿ ಪತ್ತೆ! ಬೆಚ್ಚಿ ಬಿದ್ದ ಸ್ಥಳೀಯರು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.