ಮತ್ತೆ ಕೋಲ್ಡ್‌ ವಾರ್‌


Team Udayavani, Mar 27, 2018, 6:20 AM IST

31.jpg

ವಾಷಿಂಗ್ಟನ್‌: ಬ್ರಿಟನ್‌ನ ಸ್ಯಾಲಿಸ್ಪರಿಯಲ್ಲಿ ಗುಪ್ತಚರ ಏಜೆಂಟ್‌ಗೆ ವಿಷವಿಕ್ಕಿ ಸಾಯಿಸಿದ ಪ್ರಕರಣ ಇದೀಗ ಹೊಸ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದು, ಅಮೆರಿಕ, ಐರೋಪ್ಯ ಒಕ್ಕೂಟ ರಾಷ್ಟ್ರಗಳು ಸೇರಿದಂತೆ ವಿಶ್ವದ ಹಲವು ದೇಶಗಳು ರಷ್ಯಾದ 106 ಮಂದಿ ರಾಜತಾಂತ್ರಿಕರನ್ನು ಉಚ್ಚಾಟಿಸಿದೆ. 60 ರಾಜತಾಂತ್ರಿಕರನ್ನು ಅಮೆರಿಕವೊಂದೇ ಉಚ್ಚಾಟಿಸಿದ್ದು, ಸಿಯಾಟಲ್‌ನಲ್ಲಿರುವ ರಷ್ಯಾ ದೂತಾವಾಸ ಕಚೇರಿ ಮುಚ್ಚಲು ಆದೇಶಿಸಿದೆ. ಇದರಿಂದಾಗಿ 2ನೇ ವಿಶ್ವ ಮಹಾಯುದ್ಧದ ಬಳಿಕ ಅಮೆರಿಕ ಮತ್ತು ರಷ್ಯಾ ನಡುವೆ ಉಂಟಾಗಿದ್ದ ಶೀತಲ ಸಮರದ ದಿನಗಳನ್ನು ನೆನಪಿಸುವ ಘಟನಾವಳಿಗಳು ಮತ್ತೂಮ್ಮೆ ಪುನಾರವರ್ತನೆಯಾದಂತಾಗಿವೆ. 

ಅಮೆರಿಕದಿಂದ ಉಚ್ಚಾಟನೆಗೊಂಡವರಲ್ಲಿ ವಿಶ್ವಸಂಸ್ಥೆಯಲ್ಲಿ ಕೆಲಸದ ನೆಪದಲ್ಲಿ ಅಮೆರಿಕ ವಿರುದ್ಧ ಗೂಢಚರ್ಯೆ ಮಾಡಿಕೊಂಡಿದ್ದವರೂ ಸೇರಿದ್ದಾರೆ. ದೇಶ ತೊರೆದು ಹೋಗಲು 7 ದಿನಗಳ ಕಾಲಾವಕಾಶವನ್ನು ಟ್ರಂಪ್‌ ಆಡಳಿತ ನೀಡಿದೆ.  

ದೂತಾವಾಸ ಮುಚ್ಚಿ: ಅಮೆರಿಕದ ಸಿಯಾಟಲ್‌ನಲ್ಲಿರುವ ರಷ್ಯಾ ದೂತಾವಾಸ ಕಚೇರಿಯನ್ನೂ ತಕ್ಷಣವೇ ಮುಚ್ಚಬೇಕು ಎಂದು ಅಧ್ಯಕ್ಷ ಟ್ರಂಪ್‌ ಕಟ್ಟಪ್ಪಣೆ ಹೊರಡಿಸಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್‌ ತಿಳಿಸಿದ್ದಾರೆ. ಅಮೆರಿಕವೊಂದರಲ್ಲಿಯೇ ರಷ್ಯಾದ 100 ಮಂದಿ  ಅಧಿಕಾರಿಗಳು ವಿವಿಧ ಹಂತಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಪೈಕಿ 48 ಮಂದಿ ಗುಪ್ತಚರ ಇಲಾಖೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕ್ರಮದಿಂದ  ರಷ್ಯಾ ಅಮೆರಿಕ ನೆಲದ ಮೇಲೆ ಗೂಢಚರ್ಯೆ ಮಾಡುತ್ತಿರುವುದರ ಮೇಲೆ ಪ್ರಹಾರ ನಡೆಸಿದಂತಾಗಿದೆ ಎಂದು  ಸ್ಯಾಂಡರ್ಸ್‌ ತಿಳಿಸಿದ್ದಾರೆ.  

ಭಾರತಕ್ಕೆ ಸಂದೇಶವಲ್ಲ: ರಷ್ಯಾ ವಿರುದ್ಧ ಪ್ರತೀಕಾರಾತ್ಮಕ ವಾಗಿಯೇ ಕ್ರಮ ಕೈಗೊಳ್ಳಲಾಗಿದೆ. ಆದರೆ ಭಾರತ  ಇದರಿಂದ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದಿದೆ ಅಮೆರಿಕ. ಭಾರತದ ಜತೆಗೆ ಟ್ರಂಪ್‌ ಸರ್ಕಾರ ವಿಶೇಷ ಬಾಂಧವ್ಯ ಹೊಂದಿದೆ ಎಂದಿದ್ದಾರೆ ಹಿರಿಯ ಅಧಿಕಾರಿಯೊಬ್ಬರು.

ಇದೇ ವೇಳೆ ವಿಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿ ಯಾಗಿರುವ ನಿಕ್ಕಿ ಹ್ಯಾಲೆ, ವಿಶ್ವಸಂಸ್ಥೆಯಲ್ಲಿರುವ ರಷ್ಯಾದ 12 ಗುಪ್ತಚರ ಏಜೆಂಟ್‌ಗಳು ರಹಸ್ಯವಾಗಿ ಕಾರ್ಯ ವೆಸಗುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯನ್ನು ಗುರಾಣಿಯನ್ನಾಗಿ ಬಳಸಿಕೊಂಡು ತನ್ನ ರಹಸ್ಯ ಕೆಲಸಗಳನ್ನು ಪೂರೈಸಲು ರಷ್ಯಾ ಮುಂದಾಗಿದೆ ಎಂದೂ ಆರೋಪಿಸಿದ್ದಾರೆ. ಇದೇ ವೇಳೆ, ಫ್ರಾನ್ಸ್‌ ಮತ್ತು ಜರ್ಮನಿ ತಲಾ ನಾಲ್ವರು ರಷ್ಯಾ ರಾಜತಾಂತ್ರಿಕರನ್ನು ಉಚ್ಚಾಟಿಸಿದೆ. ಐರೋಪ್ಯ ಒಕ್ಕೂಟದ 14 ಪ್ರಾಂತ್ಯಗಳೂ ರಷ್ಯಾದ 30ಕ್ಕೂ ಅಧಿಕ ರಾಜತಾಂತ್ರಿಕರನ್ನು ಹೊರಹಾಕುವ ನಿರ್ಧಾರ ಕೈಗೊಂಡಿವೆ.

ಶೀತಲ ಸಮರದ ಅವಧಿ
ಎರಡನೇ ವಿಶ್ವ ಮಹಾಯುದ್ಧದ ಬಳಿಕ ಜಗತ್ತಿನ ರಾಷ್ಟ್ರಗಳೆಲ್ಲವೂ ಅಮೆರಿಕ ಮತ್ತು ರಷ್ಯಾ ಪರವಾಗಿದ್ದವು. 1950ರಿಂದ 1990ರ ವರೆಗೆ ಅಮೆರಿಕ ಮತ್ತು ಹಿಂದಿನ ಸೋವಿಯತ್‌ ಒಕ್ಕೂಟ ಪರಸ್ಪರ ರಾಜತಾಂತ್ರಿಕರ ಉಚ್ಚಾಟನೆ, ಕಠಿಣ ಕ್ರಮಗಳನ್ನು ಕೈಗೊಳ್ಳುವುದನ್ನು ನಡೆಸಿಕೊಳ್ಳುತ್ತಿದ್ದವು. ಸೋವಿಯತ್‌ ಒಕ್ಕೂಟ ಛಿದ್ರವಾದ ಬಳಿಕ ಆ ಕಾಲಘಟ್ಟ ಸರಿದು ಹೋಯಿತು.

ಬಿಕ್ಕಟ್ಟೇನು?
ಬ್ರಿಟನ್‌ನ ಸ್ಯಾಲಿಸºರಿಯಲ್ಲಿ ರಷ್ಯಾದ ಗುಪ್ತಚರ ಏಜೆಂಟ್‌ ಸರ್ಗೆ ಸ್ಕ್ರಿಪಾಲ್‌ ಮತ್ತು  ಪುತ್ರಿಗೆ  ಅಪಾಯಕಾರಿಯಾದ ರಾಸಾಯನಿಕ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಸದ್ಯ ಅವರಿಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಯಾಲಿಸºರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಾದ ಬಳಿಕ ಕಳೆದ ವಾರ ಯು.ಕೆ. 23 ರಷ್ಯಾ ರಾಜತಾಂತ್ರಿಕರನ್ನು ಹೊರಹಾಕಿತ್ತು. ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳ ಪ್ರಕಾರ, ಬಿಕ್ಕಟ್ಟಿಗೆ ರಷ್ಯಾ ಕಾರಣ. ಆದರೆ ಪುಟಿನ್‌ ಆಡಳಿತ ಆರೋಪ ತಿರಸ್ಕರಿಸಿದೆ. ಸ್ಕ್ರಿಪಾಲ್‌ 2006ರಲ್ಲಿ ದೇಶದ್ರೋಹದ ಆರೋಪದಲ್ಲಿ 13 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ರಾಷ್ಟ್ರ                             ಎಷ್ಟು?
ಅಮೆರಿಕ                            60  
ಉಕ್ರೇನ್‌                            13 
ಕೆನಡಾ                               04
ಫ್ರಾನ್ಸ್‌, ಜರ್ಮನಿ, 
ಪೋಲಂಡ್‌ ತಲಾ                  4
ಚೆಕ್‌ ರಿಪಬ್ಲಿಕ್‌, 
ಲಿಥುಯಾನಿಯಾ ತಲಾ           03
ಡೆನ್ಮಾರ್ಕ್‌, ಇಟಲಿ, 
ನೆದರ್ಲೆಂಡ್‌ ತಲಾ                   02
ಇಸ್ಟೋನಿಯಾ, ಕ್ರೊವೇಶ್ಯಾ, 
ಫಿನ್ಲಂಡ್‌, ಲಾತ್ವಿಯಾ, 
ರೊಮಾನಿಯಾ ತಲಾ             01
ಒಟ್ಟು                               106

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.