ಅಭಿನಂದನೆಗಳು ದೇಶಕ್ಕೆ ಸ್ವಾಗತ…
Team Udayavani, Mar 1, 2019, 12:30 AM IST
ಇಸ್ಲಾಮಾಬಾದ್/ನವದೆಹಲಿ: ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ, ತನ್ನ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಶುಕ್ರವಾರವೇ ಬೇಷರತ್ತಾಗಿ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.
ಗುರುವಾರ ಕರೆಯಲಾಗಿದ್ದ ಪಾಕಿಸ್ತಾನದ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ವರ್ಧಮಾನ್ ಅವರನ್ನು ಬಿಡುಗಡೆ ಮಾಡುವ ಅಚ್ಚರಿಯ ನಿರ್ಧಾರ ಪ್ರಕಟಿಸಿದರು. ಶಾಂತಿಯ ಸಂಕೇತವಾಗಿ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಶುಕ್ರವಾರವೇ ಅಭಿನಂದನ್ ವಾಘಾ ಗಡಿಯ ಮೂಲಕ ಭಾರತ ಪ್ರವೇಶಿಸಲಿದ್ದಾರೆ.
ಅಭಿನಂದನ್ ಅವರ ಬಿಡುಗಡೆ ಘೋಷಣೆ ಭಾರತಾದ್ಯಂತ ಸಂತಸಕ್ಕೆಡೆ ಮಾಡಿದೆ. ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳು ಇಮ್ರಾನ್ ಖಾನ್ ನಿರ್ಧಾರವನ್ನು ಸ್ವಾಗತಿಸಿವೆ. ಅಷ್ಟೇ ಅಲ್ಲ, ಪಾಕಿಸ್ತಾನದಲ್ಲೂ ಸಂಭ್ರಮಿಸಲಾಗಿದೆ. ನಮಗೆ ಯುದ್ಧ ಬೇಕಿಲ್ಲ, ಶಾಂತಿಯೇ ಬೇಕು ಎಂದು ಪಾಕ್ನ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಆಂದೋಲನವೇ ಆಗಿದೆ.
ಗುರುವಾರ ಬೆಳಗ್ಗೆಯಷ್ಟೇ ಮಾತನಾಡಿದ್ದ ಪಾಕ್ನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ, ಅಭಿನಂದನ್ ಬಿಡುಗಡೆಗೆ ನಾವು ಸಿದ್ಧವಿದೆ. ಜತೆಗೆ ಭಾರತದೊಂದಿಗೆ ಶಾಂತಿ ಮಾತುಕತೆಗೂ ಸಿದ್ಧವಿದ್ದು, ಅದೇ ಮುಂದೆ ಬರಬೇಕು ಎಂದಿದ್ದರು. ಆದರೆ, ಇದನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದ ಭಾರತ, ಅಭಿನಂದನ್ ಬಿಡುಗಡೆ ಸಂಬಂಧ ಯಾವುದೇ ಮಾತುಕತೆಯ ಡೀಲ್ ಇಲ್ಲ, ಮೊದಲು ಉಗ್ರವಾದ ನಿಗ್ರಹಿಸಿ, ನಂತರ ಏನಿದ್ದರೂ ಮಾತು ಎಂದು ಖಡಕ್ಕಾಗಿ ಹೇಳಿತ್ತು. ಅಲ್ಲದೆ, ವಿಂಗ್ ಕಮಾಂಡರ್ಗೆ ಯಾವುದೇ ಹಾನಿಯಾಗದಂತೆ ಹುಶಾರಾಗಿ, ಜಿನೇವಾ ಒಪ್ಪಂದಂತೆ ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸೂಚಿಸಿತ್ತು. ಇದಕ್ಕೆ ಕೆಲವೊಂದು ದೇಶಗಳು ಬೆಂಬಲ ನೀಡಿದ್ದವು.
ಈ ಮಧ್ಯೆ, ಸಂಜೆ ಪತ್ರಿಕಾಗೋಷ್ಠಿ ನಡೆಸಿದ ವಾಯುಸೇನೆಯ ಏರ್ ವೈಸ್ ಮಾರ್ಷಲ್ ಆರ್.ಜಿ.ಕೆ. ಕಪೂರ್, ಇದು ಸದ್ಭಾವನೆಯ ನಡೆ ಎಂದು ಹೇಳಲು ಸಾಧ್ಯವಿಲ್ಲ. ಜಿನೇವಾ ಒಪ್ಪಂದದಂತೆ ಬಿಡುಗಡೆ ಮಾಡಿದ್ದಾರೆ ಅಷ್ಟೇ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ