ಇಟಲಿ ಆರ್ಥಿಕತೆಗೆ ಕೊರೊನಾ ಭೀತಿ
2 ವಾರದಲ್ಲಿ 9 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ
Team Udayavani, Mar 11, 2020, 9:36 PM IST
ರೋಮ್: ಇಡೀ ವಿಶ್ವವೇ ಕೊರೊನಾ ಭೀತಿಯಿಂದ ತತ್ತರಿಸಿದ್ದು, ದೇಶ ವಿದೇಶಗಳ ಆರ್ಥಿಕತೆ ನೆಲಕಚ್ಚಿದೆ. ಇದೀಗ ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಇಟಲಿ ಸರಕಾರ ತನ್ನ ನೌಕರರ ವೇತನ ತೆರಿಗೆಯನ್ನು ಕಡಿತಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂಬ ವರದಿ ಪ್ರಕಟವಾಗಿದೆ.
ಅನೇಕ ವ್ಯವಾಹರಗಳು ತೊಂದರೆಗೆ
ಇಟಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರವಾಸೋದ್ಯಮ ಕುಸಿತ ಕಂಡಿದ್ದು, ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿವೆ. ಇನ್ನೂ ಪರಿಸ್ಥಿತಿಯನ್ನು ಬಿಗಾಡಿಸಲು ಜತೆಗೆ ದೇಶದ ಆರ್ಥಿಕತೆಗೆ ಚೈತನ್ಯ ನೀಡಲು 10 ಬಿಲಿಯನ್ ಯುರೋ ಸಹಾಯ ನೀಡಲು ಯುರೋಪಿಯನ್ ಒಕ್ಕೂಟಕ್ಕೆ ಮನವಿ ಮಾಡಿರುವುದಾಗಿ ಅಲ್ಲಿನ ಆರ್ಥಿಕ ಸಚಿವರು ತಿಳಿಸಿದ್ದಾರೆ.ಈ ಬಗ್ಗೆ ಇಂದು ಸಭೆ ನಡೆಯಲಿದ್ದು, ಸಭೆಯಲ್ಲಿ ಸರಕಾರ ಗೃಹ ಕೈಗಾರಿಕೆ ಮತ್ತು ಸಣ್ಣ ವ್ಯಾಪಾರಗಳಿಗೆ ಔಪಚಾರಿಕವಾಗಿ ಬೆಂಬಲ ಸೂಚಿಸುವ ನಿರೀಕ್ಷೆಯಿದೆ.
ಆರ್ಥಿಕ ಹಿಂಜರಿತದ ಸಾಧ್ಯತೆ
ಕೊರೊನಾ ವೈರಸ್ ಹಾವಳಿಯಿಂದ ಉಂಟಾದ ಬಿಕ್ಕಟ್ಟು ಹಾಗೂ ಅದನ್ನು ನಿವಾರಣೆ ದೃಷ್ಟಿಯಿಂದ ನೌಕರರ ಸಂಬಳದಲ್ಲಿ ತೆರಿಗೆ ರೂಪದಲ್ಲಿ ಹಿಡಿದುಕೊಳ್ಳುತ್ತಿದ್ದ ನೀತಿಯನ್ನ ಕೈಬಿಡಲು ಅಲ್ಲಿನ ಸರಕಾರ ನಿರ್ಧರಿಸಿದೆ. ಇಟಲಿಯ ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದರೆ 2008 -09ರ ಆರ್ಥಿಕ ಹಿಂಜರಿತದಂತೆಯೇ, ಆರ್ಥಿಕ ಹಿಂಜರಿತವಾಗುವ ಸಾಧ್ಯತೆ ಇದ್ದು ಈ ಹಂತದಲ್ಲಿ ಇದರ ವ್ಯಾಪ್ತಿಯನ್ನು ಅಳೆಯುವುದು ತುಂಬಾ ಕಷ್ಟ ಎಂದು ಅಲ್ಲಿನ ಅರ್ಥಶಾಸ್ತ್ರಜ್ಞರು ತಮ್ಮ ಸಂಶೋಧನಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
2ನೇ ವಾರದಲ್ಲಿ 9ಸಾವಿರಕ್ಕೂ ಹೆಚ್ಚು ಸೋಂಕಿತರ ಪತ್ತೆ
ಕೇವಲ ಎರಡೇ ವಾರದಲ್ಲಿ ಮೆಡಿಟರೇನಿಯನ್ ದೇಶದಲ್ಲಿ 9,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಿಂದ ಇಟಲಿ ಸರಕಾರ ತಾತಾಲ್ಕಿಕವಾಗಿ ಸಾರ್ವಜನಿಕರ ಪ್ರಯಾಣವನ್ನು ನಿರ್ಬಂಧಿಸಿ, ಸಭೆ ಸಮಾರಂಭ ಗಳ ಮೇಲೆ ನಿಷೇಧ ಹೇರಿದೆ. ಇನ್ನೂ ಈ ಆರ್ಥಿಕ ಬಿಕ್ಕಟ್ಟು ಪರಿಹರಿಸಲು 7.5 ಬಿಲಿಯನ್ ಯೂರೋ ಹಣ ಸಾಕಾಗುತ್ತಿಲ್ಲ ಎಂದು ಆರ್ಥಿಕ ಅಭಿವೃದ್ದಿ ಸಚಿವ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು