ಹಬ್ಬುತ್ತಿದೆ ಕೊರೊನಾ; ಚೀನದಲ್ಲಿ ಬಲಿಯಾದವರ ಸಂಖ್ಯೆ 106ಕ್ಕೆ ಏರಿಕೆ

11 ದೇಶಗಳಲ್ಲಿ ಸೋಂಕು ಭಾರತದಲ್ಲಿ ಕಟ್ಟೆಚ್ಚರ

Team Udayavani, Jan 29, 2020, 6:15 AM IST

shu-34

ಹೈದರಾಬಾದ್‌ನಲ್ಲಿ ಕೊರೊನಾ ವೈರಸ್‌ ಸೋಂಕು ನಿಭಾಯಿಸಲು ಸಿದ್ಧತೆ ಮಾಡಲಾಗಿದೆ.

ಬೀಜಿಂಗ್‌/ಹೊಸದಿಲ್ಲಿ: ಕೊರೊನಾ ವೈರಸ್‌ ದಾಳಿಗೆ ತುತ್ತಾಗಿ ರುವ ಚೀನದಲ್ಲಿ ದಿನ ಕಳೆದಂತೆ ಸಾವಿನ ಸಂಖ್ಯೆ ಎರಡು-ಮೂರು ಪಟ್ಟು ವೇಗದಲ್ಲಿ ಹೆಚ್ಚುತ್ತಿದೆ. ಮಂಗಳ ವಾರ ಮೃತರ ಸಂಖ್ಯೆ 106ಕ್ಕೇರಿದ್ದು, 4,500 ಮಂದಿಗೆ ಸೋಂಕು ತಗು ಲಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹ್ಯುಬೈ ಪ್ರಾಂತ್ಯವೊಂದರಲ್ಲೇ ಸೋಮವಾರ ಜ್ವರದಿಂದ ಬಳಲುತ್ತಿ ರುವ 31,934 ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ಏರುತ್ತಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕೊರೊನಾ ವೈರಸ್‌ಗೆ ಕಡಿವಾಣ ಹಾಕಲು ಚೀನ ಸತತ ಪ್ರಯತ್ನ ನಡೆಸಿದರೂ ಅದು ಈಗಾಗಲೇ ಹಲವು ದೇಶಗಳಿಗೆ ವ್ಯಾಪಿಸಿಯಾಗಿದೆ. ಥಾಲಂಡ್‌ನ‌ಲ್ಲಿ 7, ಸಿಂಗಾಪುರ, ಆಸ್ಟ್ರೇಲಿಯಾಗಳಲ್ಲಿ ತಲಾ 4, ಜಪಾನ್‌, ದ. ಕೊರಿಯಾ, ಅಮೆರಿಕ, ಮಲೇಷ್ಯಾ, ಫ್ರಾನ್ಸ್‌ ಗಳಲ್ಲಿ ತಲಾ 3, ವಿಯೆಟ್ನಾಂ 2, ನೇಪಾಲ, ಶ್ರೀಲಂಕಾಗಳಲ್ಲಿ ತಲಾ 1 ಪ್ರಕರಣ ಪತ್ತೆ ಯಾಗಿವೆ. ಅದೃಷ್ಟವಶಾತ್‌ ಭಾರತದಲ್ಲಿ ಈವರೆಗೆ ಸೋಂಕು ತಗುಲಿರುವ ಪ್ರಕರಣ ದೃಢಪಟ್ಟಿಲ್ಲ.

ವೀಸಾ ರದ್ದು
ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಚೀನದಿಂದ ಆಗಮಿಸುವ ಪ್ರಯಾಣಿಕರಿಗೆ ನೀಡಲಾಗುತ್ತಿದ್ದ ವೀಸಾ ಆನ್‌ ಅರೈವಲ್‌ ವ್ಯವಸ್ಥೆಯನ್ನು ಶ್ರೀಲಂಕಾ ಸರಕಾರ ಮಂಗಳವಾರ ರದ್ದು ಮಾಡಿದೆ.

ಭಾರತೀಯರ ಸ್ಥಳಾಂತರಕ್ಕೆ ಸಿದ್ಧತೆ
ವೈರಸ್‌ನಿಂದಾಗಿ ಚೀನದ ಹಲವು ನಗರಗಳು ಬಹುತೇಕ ಸ್ತಬ್ಧವಾಗಿದ್ದು, ಅಲ್ಲಿರುವ ಭಾರತೀಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತೀಯರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ಮಂಗಳ ವಾರ ತಿಳಿಸಿದೆ. ಈ ಕುರಿತು ಬೀಜಿಂಗ್‌ ನಲ್ಲಿರುವ ಭಾರತೀಯ ರಾಯ ಭಾರ ಕಚೇರಿಯು ಚೀನ ಸರಕಾರದೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದೆ ಎಂದಿದೆ. ವುಹಾನ್‌ನಲ್ಲಿರುವ ಭಾರತೀಯರನ್ನು ಕರೆ ತರಲು ವಿಮಾನವೊಂದನ್ನು ಕಳುಹಿ ಸುವುದಕ್ಕೂ ಸರಕಾರ ಮುಂದಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ. ಕೊರೊನಾ ವೈರಸ್‌ನ ಕೇಂದ್ರಬಿಂದುವಾದ ವುಹಾನ್‌ ನಗರದಲ್ಲಿ 250ರಿಂದ 300 ಭಾರತೀಯ ವಿದ್ಯಾರ್ಥಿಗಳಿದ್ದಾರೆ.

ಹಲವರ ಮೇಲೆ ನಿಗಾ
ಚೀನಕ್ಕೆ ಪ್ರಯಾಣ ಬೆಳೆಸಿ ಹಿಂದಿರುಗಿದ್ದ ಮೂವರನ್ನು ದಿಲ್ಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 24ರಿಂದ 48ರ ವಯೋಮಾನದ ಈ ಮೂವರಲ್ಲೂ ಕೊರೊನಾ ವೈರಸ್‌ ರೋಗ ಲಕ್ಷಣವಾದ ಶೀತ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದೆಡೆ, ಚೀನದ ವುಹಾನ್‌ನಿಂದ ಆಗಮಿಸಿರುವ ಭಾರತೀಯ ವಿದ್ಯಾರ್ಥಿ ಮತ್ತು ಆತನ ತಾಯಿಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾಗೆ ಔಷಧ ಕಂಡುಹಿಡಿದ ತ.ನಾಡಿನ ವೈದ್ಯ?
ತಮಿಳುನಾಡಿನ ಸಿದ್ಧ ವೈದ್ಯರೊಬ್ಬರು, ತಾನು ಕೊರೊನಾವೈರಸ್‌ಗೆ ಗಿಡಮೂಲಿಕೆಗಳಿಂದಲೇ ಔಷಧ ಕಂಡುಹಿಡಿದಿರುವುದಾಗಿ ಮಂಗಳವಾರ ಘೋಷಿಸಿದ್ದಾರೆ. ಸಿದ್ಧ ಮತ್ತು ಆಯುರ್ವೇದ ವೈದ್ಯ ಪದ್ಧತಿಯಲ್ಲಿ 25 ವರ್ಷಗಳ ಅನುಭವ ಹೊಂದಿರುವ ಚೆನ್ನೈಯ ರತ್ನ ಸಿದ್ಧ ಆಸ್ಪತ್ರೆಯ ವೈದ್ಯರಾದ ಡಾ| ಥನಿಕಾಸಲಮ್‌ ವೇಣಿ ಅವರೇ ಔಷಧ ಕಂಡುಕೊಂಡವರು. ಗಿಡಮೂಲಿಕೆಗಳಿಂದಲೇ ನಾವು ಔಷಧಯೊಂದನ್ನು ತಯಾರಿಸಿದ್ದೇವೆ. ಅದು ಯಾವುದೇ ರೀತಿಯ ವೈರಲ್‌ ಜ್ವರವನ್ನು ವಾಸಿ ಮಾಡ ಬಲ್ಲದು. ಕೊರೊನಾ ಜ್ವರ ಬಂದವರಿಗೂ ಬಹುಅಂಗ ವೈಫ‌ಲ್ಯಕ್ಕೂ ನಮ್ಮ ಔಷಧ ಪರಿಣಾಮಕಾರಿಯಾದದ್ದು ಎಂದು ನಾವು ಚೀನ ಸರಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆಗೆ ತಿಳಿಸಲು ಇಚ್ಛಿಸುತ್ತೇವೆ ಎಂದು ವೇಣಿ ಹೇಳಿದ್ದಾರೆ. ಜತೆಗೆ, ಚೀನ ಸರಕಾರ ಬಯಸಿದಲ್ಲಿ, ಕೂಡಲೇ ವುಹಾನ್‌ಗೆ ತೆರಳಿ ಔಷಧ ಒದಗಿಸಲು ಸಿದ್ಧ ಎಂದೂ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.