ಜಗತ್ತಿಡೀ ಕೊರೊನಾ ಭೀತಿ

57 ದೇಶಗಳಲ್ಲಿ ಸೋಂಕು ಜಾಗತಿಕ ಆರ್ಥಿಕ ಬಿಕ್ಕಟ್ಟು ಸೃಷ್ಟಿ

Team Udayavani, Feb 29, 2020, 6:32 AM IST

carona-virus

ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು ಮಾರುಕಟ್ಟೆಗಳು ಕುಸಿತದ ಹಾದಿ ಹಿಡಿದಿದ್ದು, ಸುಮಾರು 5 ಲಕ್ಷ ಕೋಟಿ ಡಾಲರ್‌ ನಷ್ಟವುಂಟಾಗಿದೆ. ಇದರ ಜತೆಯಲ್ಲೇ ಕೊರೊನಾ ಸೋಂಕು ಮೂರು ಖಂಡಗಳ 57 ದೇಶಗಳಿಗೆ ವ್ಯಾಪಿಸಿದ್ದು, ಇನ್ನಷ್ಟು ವಿಸ್ತರಿಸುವ ಆತಂಕ ಮೂಡಿಸಿದೆ.

ಭಾರತಕ್ಕೆ ಕೊರೊನಾ
ಸೋಂಕಿನ ಬಾಧೆ ಅಷ್ಟಾಗಿ ತಟ್ಟದಿದ್ದರೂ ಇಲ್ಲಿನ ಷೇರು ಮಾರುಕಟ್ಟೆಯ ಮೇಲೆ ಹೊಡೆತ ಬಿದ್ದಿದೆ. ಶುಕ್ರವಾರ ಒಂದೇ ದಿನ 1,448 ಅಂಕಗಳಷ್ಟು ಕುಸಿತ ಉಂಟಾಗಿದ್ದು, ಕಪ್ಪು ಶುಕ್ರವಾರವಾಗಿ ಪರಿಣಮಿಸಿದೆ. ಇದಕ್ಕೆ ಜಾಗತಿಕ ಷೇರು ಮಾರುಕಟ್ಟೆಗಳ ಕುಸಿತವೇ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಸೆನ್ಸೆಕ್ಸ್‌ 1,448 ಅಂಕ ಕುಸಿತ
ಮುಂಬಯಿ ಷೇರುಪೇಟೆ ಶುಕ್ರವಾರ 1,448 ಅಂಕ ಕುಸಿತ ಕಂಡಿದೆ. ಇದು ಸತತ 5ನೇ ದಿನದ ಕುಸಿತ. ಈ 5 ದಿನಗಳಲ್ಲಿ ಮುಂಬಯಿ ಷೇರುಪೇಟೆಯಲ್ಲಿ ಭಾರತದ ಹೂಡಿಕೆದಾರರು ಸುಮಾರು 12 ಲಕ್ಷ ಕೋ.ರೂ. ಕಳೆದುಕೊಂಡಿದ್ದಾರೆ. ಸೆನ್ಸೆಕ್ಸ್‌ ಒಟ್ಟಾರೆ 2,900 ಅಂಕ ಕುಸಿದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಪಾನ್‌ನ ನಿಕೇಯಿ ಷೇರು ಮಾರುಕಟ್ಟೆ ಶೇ. 4.14 ಕುಸಿತ ಕಂಡಿದ್ದರೆ, ಟಾಪಿಕ್ಸ್‌ ಇಂಡೆಕ್ಸ್‌ ಶೇ. 4.1 ಇಳಿಕೆಯಾಗಿದೆ.

ಜಿಡಿಪಿ: ಶೇ. 4.7
ಕೊರೊನಾ ಆತಂಕದ ನಡುವೆ ದೇಶದ ಜಿಡಿಪಿ ಅಕ್ಟೋಬರ್‌- ಡಿಸೆಂಬರ್‌ ತ್ತೈಮಾಸಿಕದಲ್ಲಿ ಶೇ. 4.7ಕ್ಕೆ ಏರಿರುವ ಸಿಹಿಸುದ್ದಿ ಇದೆ. 2018-19ರ ಇದೇ ಅವಧಿಯಲ್ಲಿ ಜಿಡಿಪಿ ಶೇ. 5.6ರಷ್ಟಿತ್ತು. ಸತತ 6 ತ್ತೈಮಾಸಿಕಗಳ ಕುಸಿತದ ಬಳಿಕ ಈ ಅವಧಿ ಯಲ್ಲಿ ಏರಿಕೆ ಆಶಾಭಾವ ಮೂಡಿಸಿದೆ.

ಭಾರತ ಬಚಾವಾದದ್ದು ಹೇಗೆ?
ಜಗತ್ತೇ ಕೊರೊನಾ ಭೀತಿಯ ಆತಂಕದಿಂದ ದಿನ ದೂಡುತ್ತಿದ್ದರೂ ಭಾರತ ಬಚಾವಾದದ್ದು ಹೇಗೆ ಎಂಬ ಕುತೂಹಲ ಮೂಡಿದೆ. ಚೀನದಲ್ಲಿ ಸೋಂಕು ಪತ್ತೆಯಾಗುತ್ತಿದ್ದಂತೆ ಭಾರತವು ತನ್ನ ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಗಳಲ್ಲಿ ತಪಾಸಣೆ ಆರಂಭಿಸಿತು. ವಿದೇಶಗಳಿಂದ ಬಂದವರು ಈ ತಪಾಸಣೆಗೆ ಒಳಗಾಗಲೇಬೇಕು. ಬಂದರುಗಳಲ್ಲಿಯೂ ಇದೇ ವ್ಯವಸ್ಥೆ ಮಾಡಲಾ ಯಿತು. ಶಂಕಿತ ಸೋಂಕುಪೀಡಿತರನ್ನು ಏಕಾಂತ ಆರೈಕೆಗೆ ಒಳಪಡಿಸಲಾಯಿತು. ಈ ಕಟ್ಟೆಚ್ಚರದಿಂದಾಗಿ ಚೀನದಿಂದ ಬಂದ ಮೂವರಿಗೆ ಸೋಂಕು ಕಾಣಿಸಿಕೊಂಡಿತ್ತಾದರೂ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿದ್ದಾರೆ. ಸದ್ಯ ಭಾರತದಲ್ಲಿ ಕೊರೊನಾ ಪ್ರಕರಣ ಶೂನ್ಯವಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.