360ಕ್ಕೇರಿದ ಕೊರೊನಾ ಸಾವಿನ ಸಂಖ್ಯೆ: ಭಾರತದಲ್ಲಿ ಭಾರಿ ಕಟ್ಟೆಚ್ಚರ
Team Udayavani, Feb 3, 2020, 9:14 AM IST
ಹೊಸದಿಲ್ಲಿ/ಬೀಜಿಂಗ್: ಮಾರಣಾಂತಿಕ ಕೊರೊನಾ ವೈರಸ್ ಗೆ ಮತ್ತಷ್ಟು ಬಲಿಯಾಗಿದೆ. ಸದ್ಯ ಈ ವೈರಸ್ ನಿಂದಾಗಿ ಸಾವನ್ನಪ್ಪಿದ್ದವರ ಸಂಖ್ಯೆ 360ಕ್ಕೇರಿದ್ದು, 2829 ಜನರಲ್ಲಿ ಈ ಕಿಲ್ಲರ್ ವೈರಸ್ ಇರುವುದು ಖಚಿತವಾಗಿದೆ ಎಂದು ವರದಿಯಾಗಿದೆ.
ಭಾರತದಲ್ಲಿ ಈ ವೈರಸ್ ಹಬ್ಬದಂತೆ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಳ್ಳಲಾಗುತ್ತಿದೆ. ರವಿವಾರ ಭಾರತದ ಎರಡನೇ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಎರಡೂ ಪ್ರಕರಣಗಳು ಕೇರಳದಲ್ಲಿಯೇ ಪತ್ತೆಯಾಗಿದೆ.
ಚೀನಾ ನಾಗರಿಕರು ಮತ್ತು ಅಲ್ಲಿ ವಾಸವಿರುವ ವಿದೇಶಿಯರಿಗೆ ಇ-ವೀಸಾ ವಿತರಿಸುವ ವ್ಯವಸ್ಥೆಗೆ ಭಾರತವು ತಾತ್ಕಾಲಿಕ ನಿರ್ಬಂಧ ಹೇರಿದೆ. ಈಗಾಗಲೇ ವಿತರಿಸಲಾಗಿರುವ ಇ-ವೀಸಾಗಳು ಕೂಡಾ ರವಿವಾರದಿಂದ ಅಮಾನ್ಯವಾಗಿದೆ.
ಭಾರತೀಯರ ಜೊತೆ ಮಾಲ್ಡೀವ್ಸ್ ಪ್ರಜೆಗಳು ವಾಪಾಸ್
ರವಿವಾರ ವುಹಾನ್ನಿಂದ ಮತ್ತೆ 323 ಭಾರತೀಯರು ಏರ್ ಇಂಡಿಯಾ ವಿಮಾನದಲ್ಲಿ ಸ್ವದೇಶಕ್ಕೆ ಮರಳಿದ್ದಾರೆ. ಇವರೊಂದಿಗೆ ಮಾಲ್ಡೀವ್ಸ್ನ 7 ನಾಗರಿಕರನ್ನೂ ಕರೆತರಲಾಗಿದೆ. ಇವರೆಲ್ಲರನ್ನೂ ಸೇನೆ ನಿರ್ಮಿಸಿರುವ ನಿಗಾ ಕೇಂದ್ರಕ್ಕೆ ಕರೆದೊಯ್ದು, 2 ವಾರಗಳ ಕಾಲ ಇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಮಾಲ್ಡೀವ್ಸ್ನ 7 ಮಂದಿಯನ್ನು ಭಾರತಕ್ಕೆ ಕರೆತಂದು ಮಾನವೀಯತೆ ತೋರಿದ್ದಕ್ಕೆ ಭಾರತ ಸರಕಾರಕ್ಕೆ ಅಲ್ಲಿನ ಸರಕಾರ ಟ್ವೀಟ್ ಮೂಲಕ ಧನ್ಯವಾದ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ