ಪಾಕಿಸ್ತಾನದಲ್ಲೊಂದು ಬ್ರಹ್ಮಾಂಡ ಭ್ರಷ್ಟಾಚಾರ!
ಅಣೆಕಟ್ಟು ನಿರ್ಮಾಣಕ್ಕೆ 302 ಕೋಟಿ ಸಂಗ್ರಹ; ಜಾಹೀರಾತಿಗೆ 502 ಕೋಟಿ ಬಳಕೆ
Team Udayavani, Sep 17, 2022, 7:35 AM IST
ಇಸ್ಲಾಮಾಬಾದ್: ಭಾರತದಲ್ಲಿ ಭ್ರಷ್ಟಾಚಾರ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಪಾಕಿಸ್ತಾನದಲ್ಲಿ ಭಾರತಕ್ಕಿಂತ 100 ಪಟ್ಟು ಹೆಚ್ಚು ಭ್ರಷ್ಟಾಚಾರವಿದೆ!
ಇದಕ್ಕೊಂದು ತಾಜಾ ಉದಾಹರಣೆ ಈಗ ಸಿಕ್ಕಿದೆ. ಸಿಂಧೂ ನದಿಗೆ ಅಡ್ಡಲಾಗಿ ಡಯಮರ್-ಭಾಷಾ ಅಣೆಕಟ್ಟು ಕಟ್ಟಲು ಪಾಕ್ ಸರ್ಕಾರ ತೀರ್ಮಾನಿಸಿತ್ತು. ಇದರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ಪಾಕ್ ಸರ್ಕಾರ ದೇಣಿಗೆ ರೂಪದಲ್ಲಿ ಬರೋಬ್ಬರಿ 318 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ವಿಚಿತ್ರವೆಂದರೆ ಅದಕ್ಕಾಗಿ ಜಾಹೀರಾತು ನೀಡಲು 502 ಕೋಟಿ ರೂ.ಗಳನ್ನು ವ್ಯಯಿಸಿದೆ!
ಇದಕ್ಕೂ ಮಿಗಿಲಾಗಿ ಪಾಕಿಸ್ತಾನಿ ನಾಗರಿಕರನ್ನು ದಿಗ್ಭ್ರಮೆಗೊಳಿಸಿದ್ದು ಪಾಕ್ ನಿವೃತ್ತ ಸರ್ವೋಚ್ಚ ನ್ಯಾಯಮೂರ್ತಿ ಸಖೀಬ್ ನಿಸಾರ್ ನೀಡಿದ ಹೇಳಿಕೆ. 2018ರಲ್ಲಿ ಅವರು ಅಧಿಕಾರದಲ್ಲಿದ್ದಾಗ ಜನರಿಂದ ಹಣ ಸಂಗ್ರಹಿಸಲು ನಿಧಿಯೊಂದನ್ನು ಸ್ಥಾಪಿಸಿದ್ದರು. 2019ರಲ್ಲಿ ಅವರು ನಿವೃತ್ತರಾದರು. ಇದೀಗ ಅವರು, ಹಣ ಸಂಗ್ರಹಿಸಲು ಕರೆ ನೀಡಿದ್ದು ಅಣೆಕಟ್ಟು ಕಟ್ಟಲಿಕ್ಕಲ್ಲ, ಜನಜಾಗೃತಿ ಮೂಡಿಸಲಿಕ್ಕೆ ಎಂದು ಹೇಳಿದ್ದಾರೆ. ಅವರಿಗೆ ಪಾಕಿಸ್ತಾನ ಸಂಸದೀಯ ಸಮಿತಿ ಸಮನ್ಸ್ ನೀಡಿದೆ.
ಅಂದಹಾಗೆ ಪಾಕಿಸ್ತಾನದ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಲು ಕಾರಣವಾಗಬಲ್ಲ ಈ ಅಣೆಕಟ್ಟು ನಿರ್ಮಾಣಕ್ಕೆ ತಗುಲುವ ಒಟ್ಟು ವೆಚ್ಚ 1.116 ಲಕ್ಷ ಕೋಟಿ ರೂ.! 1980ರಲ್ಲೇ ಮುಗಿಯಬೇಕಾದ ಈ ಅಣೆಕಟ್ಟು, ಇನ್ನೂ ಶುರುವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?