ಐಪಿಎಲ್‌ ಹಬ್ಬಕ್ಕೆ ಕ್ಷಣಗಣನೆ ಆರಂಭ


Team Udayavani, Mar 20, 2019, 12:30 AM IST

e-18.jpg

ಹೊಸದಿಲ್ಲಿ: ಐಪಿಎಲ್‌ 12ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಮಾ. 23ರಿಂದ ಮೇ 5ರ ತನಕ ಒಟ್ಟಾರೆ 56 ಲೀಗ್‌ ಪಂದ್ಯಗಳು ದೇಶಾದ್ಯಂತ ಹಲವು ಕ್ರೀಡಾಂಗಣಗಳಲ್ಲಿ ನಡೆಯಲಿವೆ. ದೇಶದೆಲ್ಲೆಡೆ ಚುನಾವಣೆಯ ಬಿಸಿ ಇರುವುದರಿಂದ 3 ಪ್ಲೇಆಫ್, ಒಂದು ಫೈನಲ್‌ ಪಂದ್ಯಗಳ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ. ಶೀಘ್ರದಲ್ಲೇ ಉಳಿದ ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿಯೂ ಪ್ರಕಟಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ.

ಪ್ಲೇ ಆಫ್ ವೇಳಾಪಟ್ಟಿ ಪ್ರಕಟಿಸಿ ತೆಗೆದ ಬಿಸಿಸಿಐ
ಮಂಗಳವಾರ ಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿತ್ತು. ಆದರೆ ಕೊನೇ ಕ್ಷಣದಲ್ಲಿ ಕ್ವಾಲಿಫೈಯರ್‌ 1, ಎಲಿಮಿನೇಟರ್‌, ಕ್ವಾಲಿಫೈಯರ್‌ 2 ಹಾಗೂ ಫೈನಲ್‌ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಿತು. ಒಟ್ಟಾರೆ 56 ಲೀಗ್‌ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಉಳಿಸಿಕೊಂಡಿದೆ. ಚುನಾ ವಣೆಯ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಹೊಂದಿಸಲು ಆಗಿಲ್ಲ. ಜತೆಗೆ ಪಂದ್ಯಗಳಿಗೆ ಅಗತ್ಯವಿರುವ ಭದ್ರತೆ ಯನ್ನೂ ಒದಗಿಸುವುದಕ್ಕೆ ಸಾಕಷ್ಟು ಕಷ್ಟವಾಗುವುದರಿಂದ ಬಿಸಿಸಿಐ ಕೊನೆಯ 4 ಪಂದ್ಯ ಆಡಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಲೋಕಸಭಾ ಚುನಾವಣೆಯ ದಿನಾಂಕದ ಜತೆಗಿನ ಸಂಘರ್ಷ ತಪ್ಪಿಸಲು ಬಿಸಿಸಿಐ ಮೊದಲು 17 ಪಂದ್ಯಗಳ ವೇಳಾಪಟ್ಟಿ (ಮಾ.23-ಎ.5) ಮಾತ್ರ ಪ್ರಕಟಿಸಿತ್ತು. ಮಾ.23ರಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಬಲಿಷ್ಠ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಎದುರಿಸಲಿದೆ. ಮಾಜಿ ನಾಯಕ ಎಂ.ಎಸ್‌.ಧೋನಿ ಹಾಗೂ ಹಾಲಿ ನಾಯಕ ವಿರಾಟ್‌ ಕೊಹ್ಲಿ ನಡುವಿನ ಮುಖಾಮುಖೀ ಕುತೂಹಲ ಕೆರಳಿಸಿದೆ.

ಬೆಂಗಳೂರಿನಲ್ಲಿ  ಆರ್‌ಸಿಬಿಗೆ 7 ಪಂದ್ಯ
ವಿರಾಟ್‌ ಕೊಹ್ಲಿ ನೇತೃತ್ವದ ಆರ್‌ಸಿಬಿ ತವರಿನಲ್ಲಿ ಒಟ್ಟಾರೆ 7 ಪಂದ್ಯ ಆಡಲಿದೆ. ತವರಿನಿಂದ ಹೊರಗೆ ಕೂಡ 7 ಪಂದ್ಯಗಳ‌ನ್ನು ಆಡಲಿದೆ. ಒಟ್ಟಾರೆ 14 ಪಂದ್ಯಗಳಲ್ಲಿ ಆರ್‌ಸಿಬಿ ಕಣಕ್ಕೆ ಇಳಿಯಲಿದೆ.  ಈ ಹಿಂದಿನ 11 ಆವೃತ್ತಿಗಳಲ್ಲಿ ಆರ್‌ಸಿಬಿ ಟ್ರೋಫಿ ಗೆಲ್ಲಲು ವಿಫ‌ಲವಾಗಿತ್ತು. ಈ ಸಲವಾದರೂ ಟ್ರೋಫಿ ಗೆಲ್ಲುವ ಛಲದೊಂದಿಗೆ ಆರ್‌ಸಿಬಿ ಆಡಬೇಕಿದೆ. ಆರ್‌ಸಿಬಿ ಕಳಪೆ ನಿರ್ವಹಣೆ ನೀಡಿ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿತ್ತು. ಇದೀಗ ಹೊಸ ಹುಮ್ಮಸ್ಸಿನೊಂದಿಗೆ ಕಣಕ್ಕೆ ಇಳಿಯುತ್ತಿರುವ ಕೊಹ್ಲಿ ಪಡೆ ಇತಿಹಾಸ ಬರೆಯಲು ಕಾತರದಿಂದ ಕಾಯುತ್ತಿದೆ. ಕಪ್‌ ನಮೆª ಎನ್ನುವುದನ್ನು ಸಾಬೀತುಪಡಿಸಲು ಕೊಹ್ಲಿ ಬಳಗದ ಮುಂದೆ ಒಂದೊಳ್ಳೆಯ ಅವಕಾಶ ಇದೆ.

ಮಾ. 22ಕ್ಕೆ ಬೆಂಗಳೂರಿಗೆ  ಐಪಿಎಲ್‌ ಟ್ರೋಫಿ
ಐಪಿಎಲ್‌ ಆರಂಭಕ್ಕೂ ಮೊದಲು ವಿವಿಧ ನಗರಗಳ ಕಡೆಗೆ ಟ್ರೋಫಿ ಸುತ್ತಾಟ ಆರಂಭವಾಗಲಿದೆ. ಮಾ. 22ರಂದು ಬೆಂಗಳೂರಿಗೆ ಟ್ರೋಫಿ ಆಗಮಿಸಲಿದೆ. ಈ ವೇಳೆ ಅಭಿಮಾನಿಗಳು ಟ್ರೋಫಿ ಜತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಅವಕಾಶ ಇದೆ. ಮಾ. 23ಕ್ಕೆ ಚೆನ್ನೈ, ಮಾ. 24ಕ್ಕೆ ಮುಂಬಯಿ, ಮಾ. 30ಕ್ಕೆ ಹೈದರಾಬಾದ್‌, ಎ. 6ಕ್ಕೆ ಜೈಪುರ ಹಾಗೂ ಎ.7ಕ್ಕೆ ಛತ್ತೀಸ್‌ಗಢ ನಗರಗಳಲ್ಲಿ ಟ್ರೋಫಿ ಪ್ರವಾಸ ನಡೆಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.