ಕೋವಿಡ್ 19; ಅಮೆರಿಕ ಕಂಗಾಲು, ದಕ್ಷಿಣ ಕೊರಿಯಾದ ಯಶಸ್ಸಿನ ಹಿಂದಿನ ಗುಟ್ಟೇನು ಗೊತ್ತಾ?

ಇಟಲಿ, ಸ್ಪೇನ್, ಫ್ರಾನ್ಸ್, ಇರಾನ್ ಹಾಗೂ ಜರ್ಮನಿಯಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ.

Team Udayavani, Mar 21, 2020, 12:16 PM IST

ಕೋವಿಡ್ 19; ಅಮೆರಿಕ ಕಂಗಾಲು, ದಕ್ಷಿಣ ಕೊರಿಯಾದ ಯಶಸ್ಸಿನ ಹಿಂದಿನ ಗುಟ್ಟೇನು ಗೊತ್ತಾ

Representative Image

ವಾಷಿಂಗ್ಟನ್/ಸಿಯೋಲ್: ಜಗತ್ತಿನಾದ್ಯಂತ ಕೋವಿಡ್ -19 ಮಹಾಮಾರಿ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಜಗತ್ತಿನ ದೊಡ್ಡಣ್ಣ ಅಮೆರಿಕದಲ್ಲಿ 18,090 ಪ್ರಕರಣಗಳು ಪತ್ತೆಯಾಗಿವೆ. 230 ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಕೋವಿಡ್-19ಗೆ ಜಗತ್ತಿನ ಬಹುತೇಕ ದೇಶಗಳು ತತ್ತರಿಸಿ ಹೋಗಿದ್ದರೆ ದಕ್ಷಿಣ ಕೊರಿಯಾ ಶೀಘ್ರವಾಗಿ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ಸೋಂಕಿಗೆ ಯುರೋಪ್ ಇದೀಗ ಮೂಲ ಕೇಂದ್ರ ಸ್ಥಾನವಾಗಿದೆ. ಇಟಲಿ, ಸ್ಪೇನ್, ಫ್ರಾನ್ಸ್, ಇರಾನ್ ಹಾಗೂ ಜರ್ಮನಿಯಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ. ದೇಶಾದ್ಯಂತ ಲಾಕ್ ಡೌನ್ ಘೋಷಿಸಿ, ಗಡಿಭಾಗವನ್ನು ಬಂದ್ ಮಾಡಿರುವುದಾಗಿ ವರದಿ ವಿವರಿಸಿದೆ.

ದೋಷಪೂರಿತ ಪರೀಕ್ಷಾ ಕಿಟ್ ನಿಂದಾಗಿ ಅಮೆರಿಕ ಕೋವಿಡ್ 19 ವೈರಸ್ ಗೆ ತುಂಬಾ ಬೆಲೆ ತೆರುವಂತಾಗಿದೆ. ಇದೀಗ ಯುರೋಪ್ ಕೂಡಾ ಅಮೆರಿಕದ ಹಾದಿಯಲ್ಲಿದೆ ಎಂದು ವರದಿ ದೂರಿದೆ.

ಅಮೆರಿಕ ಕಂಗಾಲು, ದಕ್ಷಿಣ ಕೊರಿಯಾ ನಡೆ ಮಾದರಿ ಅನುಕರಣೀಯ:

ಕೋವಿಡ್-19ರ ಅಟ್ಟಹಾಸದಿಂದ ಅಮೆರಿಕ, ಇಟಲಿ, ಸ್ಪೈನ್ ನಲುಗಿ ಹೋಗಿವೆ. ಏತನ್ಮಧ್ಯೆ ದಕ್ಷಿಣ ಕೊರಿಯಾ ಭರವಸೆಯ ಸಂದೇಶ ನೀಡುವ ಮೂಲಕ ಮಾದರಿಯ ನಡೆಯನ್ನು ಅನುಸರಿಸಿದೆ. ದೇಶದಲ್ಲಿರುವ 5 ಕೋಟಿ ಜನಸಂಖ್ಯೆ (ಕರ್ನಾಟಕ ರಾಜ್ಯದ ಜನಸಂಖ್ಯೆಕ್ಕಿಂತ ಕಡಿಮೆ) ಹೊಂದಿದ್ದರು ಕೂಡಾ ಸೋಂಕು ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಪಣತೊಟ್ಟ ಪರಿಣಾಮ ಫೆ.29ರಂದು ದೇಶದಲ್ಲಿ 909 ಪ್ರಕರಣಗಳು ಪತ್ತೆಯಾಗಿದ್ದವು, ಇದೀಗ ಇಳಿಕೆಯಾಗಿ 74 ಹೊಸ ಪ್ರಕರಣಗಳು ಮಾತ್ರ ದಾಖಲಾಗಿರುವುದಾಗಿ ವರದಿ ತಿಳಿಸಿದೆ.

ದೇಶದ ಯಾವುದೇ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡದೆ ಚೀನಾ ಮಾದರಿಯಲ್ಲಿ ಕೆಲವೊಂದು ಆಡಳಿತಾತ್ಮಕ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಕೋವಿಡ್ 19 ಹರಡುವುದನ್ನು ತಡೆಗಟ್ಟಿರುವುದಾಗಿ ಹೇಳಿದೆ.

ದೇಶವನ್ನು ಲಾಕ್ ಡೌನ್ ಮಾಡುವುದು ಉತ್ತಮವಾದ ಆಯ್ಕೆಯಲ್ಲ ಎಂದು ಕೊರಿಯಾ ವಿವಿಯ ಸೋಂಕು ರೋಗಗಳ ತಜ್ಞ ಕಿಮ್ ವೂ ಜೋ ತಿಳಿಸಿದ್ದಾರೆ. ದಕ್ಷಿಣ ಕೊರಿಯಾದ ಯಶಸ್ವಿ ಮಾದರಿ ಇತರ ದೇಶಗಳಿಗೂ ಪಾಠವಾಗಬೇಕು. ಆದರೆ ಸೋಂಕಿನ ಪ್ರಮಾಣ ಕಡಿಮೆಯಾದ ನಂತರವೂ ಅದು ಮತ್ತೆ ತಲೆಎತ್ತದಂತೆ ತಡೆಗಟ್ಟಬೇಕಾದ ಎಚ್ಚರಿಕೆ ಇರಲಿ ಎಂಬ ಸಂದೇಶ ನೀಡಿದ್ದಾರೆ.

ದ.ಕೊರಿಯಾದ ಯಶಸ್ಸಿನ ಹಿಂದಿದೆ ದುಬಾರಿ ಬೆಲೆ:

ಕೋವಿಡ್ 19 ಮಹಾಮಾರಿಯ ಹರಡುವಿಕೆಯನ್ನು ತಡೆಯುವಲ್ಲಿ ದಕ್ಷಿಣ ಕೊರಿಯಾದ ಯಶಸ್ಸು ದುಬಾರಿ ಬೆಲೆ ತೆತ್ತಿದೆ. ಇಡೀ ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಪರೀಕ್ಷಾ ಕಾರ್ಯವನ್ನು ನಡೆಸಿತ್ತು. ತ್ವರಿತವಾಗಿ ಸೋಂಕು ಪೀಡಿತರನ್ನು ಐಸೋಲೇಶನ್ ನಲ್ಲಿ ಇಟ್ಟಿತ್ತು. ಅವರ ಸಂಪರ್ಕದಲ್ಲಿ ಇದ್ದವರನ್ನು ಪತ್ತೆ ಹಚ್ಚಿ ಪ್ರತ್ಯೇಕ ನಿಗಾ ಘಟಕದಲ್ಲಿ ಇರಿಸಿರುವುದಾಗಿ ವರದಿ ತಿಳಿಸಿದೆ.

ದಕ್ಷಿಣ ಕೊರಿಯಾ ಈವರೆಗೆ 2,70,000ಕ್ಕೂ ಅಧಿಕ ಜನರನ್ನು ಪರೀಕ್ಷೆಗೊಳಪಡಿಸಿದೆ.  ಅಂದರೆ ಪ್ರತಿ ಲಕ್ಷ ಜನಸಂಖ್ಯೆಯಲ್ಲಿ 5,200 ಮಂದಿ ಪರೀಕ್ಷೆ ನಡೆಸಿದಂತಾಗಿದೆ. ವರ್ಲ್ಡೊಮೀಟರ್ ವೆಬ್ ಸೈಟ್ ಅಂಕಿಅಂಶದ ಪ್ರಕಾರ ಜಗತ್ತಿನಲ್ಲಿ ಬಹರೈನ್ ಹೊರತುಪಡಿಸಿ ಬೇರೆ ಯಾವುದೇ ದೇಶ ಈ ರೀತಿಯಾಗಿ ಅಧಿಕೃತ ಕಿಟ್ ಬಳಸಿ ಪರೀಕ್ಷೆ ನಡೆಸಿಲ್ಲ. ಮುಂದುವರಿದ ಶ್ರೀಮಂತ ದೇಶ ಎನಿಸಿಕೊಂಡ ಅಮೆರಿಕ ಪ್ರತಿ ಲಕ್ಷ ಜನಸಂಖ್ಯೆಯಲ್ಲಿ ಕೇವಲ 74 ಮಂದಿಯನ್ನಷ್ಟೇ ಪರೀಕ್ಷೆಗೊಳಪಡಿಸಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.