ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕುವ ಪ್ರಯತ್ನ


Team Udayavani, Mar 29, 2020, 1:45 PM IST

Germany country has neglected the coronavirus pandemic in its initial stages because of that the death toll has rised to 2,000 people

ಜರ್ಮನಿ: ಕೋವಿಡ್ 19 ಮಾರಕ ಕಾಯಿಲೆಯನ್ನು ಗಂಭೀರವಾಗಿ ತೆಗೆದುಕೊಂಡ ರಾಷ್ಟ್ರಗಳ ಸಂಖ್ಯೆಯೇ ಕಡಿಮೆ. ಬಹುತೇಕ ರಾಷ್ಟ್ರಗಳಲ್ಲಿ, ಅದರಲ್ಲೂ ಅಭಿವೃದ್ಧಿಗೊಂಡ ರಾಷ್ಟ್ರಗಳೆಲ್ಲಾ ಉಡಾಫೆ ತೋರಿದ್ದೇ ಹೆಚ್ಚು. ಅದಕ್ಕಾಗಿ ಒಂದೊಂದೇ ರಾಷ್ಟ್ರಗಳೂ ದಂಡವನ್ನು ತೆರುತ್ತಿವೆ.

ಬ್ರಿಟನ್‌ ಕಥೆಯೇ ಬದಲಾಗುತ್ತಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಲವು ರಾಷ್ಟ್ರಗಳ ಕಥೆಯೂ ಬಹುತೇಕ ಇದೇ.
ಚೀನಾ ಸಹ ಸಾವಿನ ಪ್ರಮಾಣ 2 ಸಾವಿರ ತಲುಪವವರೆಗೆ ಲಘುವಾಗಿ ಪರಿಗಣಿಸಿತ್ತು. ಅನಂತರ ಚುರುಕಾದರೂ ಆಗುವಷ್ಟು ಅನಾಹುತ ಆಗಿತ್ತು.

ವಿಮಾನ ಯಾನ ಸೇರಿದಂತೆ ಎಲ್ಲವನ್ನೂ ಬಂದ್‌ ಮಾಡಿ ಲಾಕ್‌ ಡೌನ್‌ ಘೋಷಿಸುವಷ್ಟರಲ್ಲಿ, ಜಗತ್ತಿನಾದ್ಯಂತ ಕೋವಿಡ್ 19 ವ್ಯಾಪಿಸಿಯಾಗಿತ್ತು.

ಜರ್ಮನಿಯಲ್ಲಿರುವ ಹಾಸನದ ಪವನ್‌ ಹೇಳುವಂತೆ, ಜರ್ಮನಿಯಲ್ಲೂ ಪರಿಸ್ಥಿತಿ ಬಹಳ ಭಿನ್ನವಾಗಿಲ್ಲ. “ ಆರಂಭದಲ್ಲಿ ಸ್ಥಳೀಯ ಸರಕಾರ ಮತ್ತು ನಾಗರಿಕರು ಗಂಭೀರವಾಗಿ ಪರಿಗಣಿಸಲಿಲ್ಲ. ಆದ ಕಾರಣ ಅರಿವಿಗೆ ಬರುವ ಮುನ್ನವೇ ಪರಿಸ್ಥಿತಿ ಬಿಗಡಾಯಿಸಿತು. ಹಾಗಾಗಿ ಸುಲಭವಾಗಿ ಒಬ್ಬರಿಂದ ಮತ್ತೂಬ್ಬರಿಗೆ ಸೋಂಕು ಹರಡಿದೆ. ಕೂಡಲೇ ಎಚ್ಚೆತ್ತುಕೊಂಡ ಸರಕಾರ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರೂ ಕೈ ಮೀರಿ ಹೋಗಿತ್ತು’ ಎಂದಿದ್ದಾರೆ.

ಸರಕಾರ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಆದೇಶಿಸಿದ್ದರೂ ನಾಗರಿಕರು ಮಾತ್ರ ಸ್ವಲ್ಪವೂ ಪಾಲಿಸಲಿಲ್ಲ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಓಡಾಡುತ್ತಿದ್ದು, ಮಾಸ್ಕ್ ಗಳನ್ನು ಧರಿಸುತ್ತಿಲ್ಲ. ಈಗ ಸೋಂಕು ಪೀಡಿತರಿಂದಲೇ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ’ ಎನ್ನುತ್ತಾರೆ ಪವನ್‌.

ಬಹಳ ಹೆಚ್ಚೇನೂ ಜನಸಂಖ್ಯೆಯಿಲ್ಲದ ಜರ್ಮನಿಯಲ್ಲೇ ಇಂಥ ಸ್ಥಿತಿ ನಿರ್ಮಾಣವಾದರೆ ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರವಾದ ಭಾರತದಲ್ಲಿ ಪರಿಸ್ಥಿತಿ ಹೇಗಿದ್ದೀತು? ಹರಡಿದರೆ ನಿಯಂತ್ರಿಸಲು ಸಾಧ್ಯವೇ? ಎಂಬ ಪ್ರಶ್ನೆ ಅವರದ್ದು.

ಅದೇ ಕಾರಣಕ್ಕೆ ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು ಸರಕಾರದ ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ಪವನ್‌.

“ದಯವಿಟ್ಟು ಯಾರೂ ಮನೆ ಬಿಟ್ಟು ಬರಬೇಡಿ. ಜರ್ಮನಿಯಲ್ಲಿ ವಾರಗಳ ಹಿಂದೆ ಎಚ್ಚರಿಸಿದ ಮೇಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಮಗೆ ಸೋಂಕು ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಬೇರೆಯವರಿಂದ ನಮಗೆ ಬಂದು ನಮ್ಮಿಂದ ನಮ್ಮ ಮನೆಯಲ್ಲಿ, ಸಮಾಜದಲ್ಲಿ ಸಮಸ್ಯೆಯಾಗದೇ ಇರಲಿ. 21 ದಿನಗಳಿಗಲ್ಲ, ತಿಂಗಳುಗಳ ಅವಧಿಗಾದರೂ ನಮಗಾಗಿ, ನಮ್ಮ ಮನೆಯರಿಗಾಗಿ, ಸಮಾಜಕ್ಕಾಗಿ ಹೋಂ ಕ್ವಾರೆಂಟೇನ್‌ ಆಗಿರೋಣ ಎನ್ನುತ್ತಾರೆ ಪವನ್‌.

ಇದೇ ಪರಿಸ್ಥಿತಿ ಜಗತ್ತಿನ ಹಲವು ರಾಷ್ಟ್ರಗಳಲ್ಲಿದೆ. ಕೊಲ್ಲಿ ರಾಷ್ಟ್ರಗಳಿಂದ ಹಿಡಿದು ಅಮೆರಿಕ, ರಷ್ಯಾ, ಫ್ರಾನ್ಸ್‌, ಆಸ್ಟ್ರೇಲಿಯಾ ಎಲ್ಲ ದೇಶಗಳಲ್ಲೂ ಇದಕ್ಕಿಂತ ಪರಿಸ್ಥಿತಿ ಭಿನ್ನವಾಗಿಲ್ಲ. ಅದರಲ್ಲೂ ಇಟಲಿಯಂಥ ಹಲವು ದೇಶಗಳು ಕೋವಿಡ್ 19 ಮಾರಿಗೆ ತತ್ತರಿಸಿ, ಈಗ ಜಗತ್ತಿನ ಎಲ್ಲರಲ್ಲೂ ಮಾಡುತ್ತಿರುವ ಮನವಿಯೊಂದೇ “ನಾವು ಮಾಡಿದ ತಪ್ಪನ್ನು ನೀವು ಮಾಡಬೇಡಿ’ ಎಂಬುದು. ನಮಗೆ ಆಗ ತಿಳಿಯಲಿಲ್ಲ, ಎಲ್ಲವನ್ನೂ ಲಘುವಾಗಿ ತೆಗೆದುಕೊಂಡೆವು. ಸರಕಾರದ ಎಚ್ಚರಿಕೆಗಳನ್ನೂ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಹಾಗಾಗಿ ನಮ್ಮ ಊರಿನ ಎಲ್ಲ ಬೀದಿಗಳಲ್ಲೂ ಮಹಾಮಾರಿ ಬಂದು ಕುಳಿತಿದೆ. ಅದನ್ನು ತೊಲಗಿಸುವುದೇ ದೊಡ್ಡ ಕೆಲಸವಾಗಿದೆ. ಇಂಥ ಸಂದರ್ಭದಲ್ಲಿ ನೀವೂ ಇಂಥ ತಪ್ಪುಗಳನ್ನು ಮಾಡಬೇಡಿ. ಮನೆಯೊಳಗೇ ಇರಿ. ನೀವು ಮನೆಯೊಳಗೇ ಇದ್ದಷ್ಟೂ ಹೊತ್ತು ನೀವು ಕ್ಷೇಮ, ನಿಮ್ಮ ಕುಟುಂಬ ಕ್ಷೇಮ, ನಿಮ್ಮ ಸಮಾಜ ಕ್ಷೇಮ, ನಿಮ್ಮ ದೇಶವೂ ಕ್ಷೇಮ. ಇದನ್ನು ಮರೆಯಬೇಡಿ.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.